ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ನಿಯಮ ಉಲ್ಲಂಘಿಸಿದ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ

By ಬೆಂಗಳೂರು ಪ್ರತಿನಿಧಿ
|
Google Oneindia Kannada News

ದೇವನಹಳ್ಳಿ, ಜುಲೈ.19: ಶಾಸಕರೊಬ್ಬರು ಸರ್ಕಾರಿ ನಿಯಮ ಉಲ್ಲಂಘಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ. ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಾಲೂಕು ಕಚೇರಿಯಲ್ಲಿ ತಮಗೆ ನೀಡಿದ ಶಾಸಕರ ಕಚೇರಿಯನ್ನು ಉದ್ಘಾಟನೆ ಮಾಡಿದರು.

ಉದ್ಘಾಟನೆಯ ಬಳಿಕ ಅಲ್ಲಿಗೆ ಬಂದಿದ್ದ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಹಾಕಿಸಿದರು. ಸರ್ಕಾರಿ ಕಚೇರಿಯಲ್ಲಿಯೇ ಪಕ್ಷದ ಕಾರ್ಯಕರ್ತರಿಗೆ ಬಾಡೂಟ ಹಾಕಿಸುವ ಮೂಲಕ ಎರಡು ನಿಬಂಧನೆಗಳನ್ನು ದೇವನಹಳ್ಳಿ ಶಾಸಕರು ಬ್ರೇಕ್ ಮಾಡಿದ್ದಾರೆ.

ಜೆಡಿಎಸ್ ಗೆ ತಲೆ ಬಿಸಿ ತಂದ ಮಂಡ್ಯ ರೈತರ ಪ್ರತಿಭಟನೆಗಳುಜೆಡಿಎಸ್ ಗೆ ತಲೆ ಬಿಸಿ ತಂದ ಮಂಡ್ಯ ರೈತರ ಪ್ರತಿಭಟನೆಗಳು

ಮೊದಲನೆಯದು ಸರ್ಕಾರಿ ಕಚೇರಿಯಲ್ಲಿ ಬಾಡೂಟ ವ್ಯವಸ್ಥೆ ಮಾಡಿದ್ದು, ಎರಡನೆಯದು ಸರ್ಕಾರಿ ಕಚೇರಿ ದುರುಪಯೋಗ ಮಾಡಿಕೊಂಡು ಕಾರ್ಯಕರ್ತರಿಗೆ ಊಟ ಹಾಕಿಸಿದ್ದು. ಈ ಮೂಲಕ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಕಾನೂನು ಉಲ್ಲಂಘನೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ.

Devanahalli MLA Nisarga Narayanaswamy has violated the governments rule

2018ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಜೆಡಿಎಸ್ ನ ನಿಸರ್ಗ ನಾರಾಯಣಸ್ವಾಮಿ, ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ವಿರುದ್ಧ 17,010 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

English summary
Devanahalli MLA Nisarga Narayanaswamy has violated the government's rule. In government office he has arranged dinner for party workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X