ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ದೇವೇಗೌಡ
ಬೆಂಗಳೂರು, ಆಗಸ್ಟ್ 12: ಪ್ರವಾಹ ಸಂತ್ರಸ್ತರ ನೆರವಿಗೆ ದೇಣಿಗೆ ನೀಡಿರೆಂದು ಸಿಎಂ ಯಡಿಯೂರಪ್ಪ ಅವರು ಮನವಿ ಮಾಡಿದ ಬೆನ್ನಲ್ಲೆ ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.
ಇಂದು ಜೆಪಿ ನಗರದ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಸಂತ್ರಸ್ತರ ನೆರವಿಗೆಂದು ಸ್ವಂತ ಖಾತೆಯಿಂದ ಎರಡು ಲಕ್ಷ ರೂಪಾಯಿ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿರುವುದಾಗಿ ಹೇಳಿದ್ದಾರೆ.
'ನನಗೆ ಈಗ ಸಂಬಳ ಬರುತ್ತಿಲ್ಲ, ಯಾವ ಪಿಂಚಣಿಯೂ ಬರುತ್ತಿಲ್ಲ, ನನ್ನ ಖಾತೆಯಲ್ಲಿ ಸುಮಾರು 24 ಲಕ್ಷ ಹಣ ಇರಬಹುದು ಅದರಲ್ಲಿ ಎರಡು ಲಕ್ಷ ರೂಪಾಯಿಯನ್ನು ಪ್ರವಾಹ ಸಂತ್ರಸ್ತರ ನೆರವಿಗೆಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತಿದ್ದೇನೆ ಎಂದು ದೇವೇಗೌಡ ಹೇಳಿದರು.

ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲದಿದ್ದರೂ ಪ್ರವಾಹದ ಪರಿಸ್ಥಿತಿ ಪರಿಶೀಲನೆ ಮಾಡಿದ್ದಾರೆ. ಕೆಲವೊಂದು ಕಡೆ ಮಳೆ ಸದ್ಯ ಕಡಿಮೆಯಾಗಿದೆ. ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟ ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಇದರಿಂದ ಕರ್ನಾಟಕದ 17 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಾವೇರಿ ಭಾಗದಲ್ಲೂ ಪ್ರವಾಹ ಆಗಿದೆ. ಹೀಗಾಗಿ ತುರ್ತಾಗಿ 5 ಸಾವಿರ ಕೋಟಿ ಹಣ ಬಿಡುಗಡೆ ಮಾಡುವಂತೆ ಮೋದಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ಪ್ರವಾಹ ಸಂತ್ರಸ್ತರಿಗೆ ಸ್ಪಂದಿಸುವ ವಿಚಾರದಲ್ಲಿ ಜೆಡಿಎಸ್ನ ಯಾರೂ ಹಿಂದೆ ಬಿದ್ದಿಲ್ಲ ಎಂದ ದೇವೇಗೌಡ ಅವರು, ಪ್ರಜ್ವಲ್ ರೇವಣ್ಣ ಅವರು ತಮ್ಮ ಒಂದು ತಿಂಗಳ ಸಂಬಳ ನೆರೆ ಸಂತ್ರಸ್ತರಿಗೆ ನೀಡಿದ್ದಾರೆ. ಜೊತೆಗೆ ಅವರೇ ಪ್ರವಾಹ ಪೀಡಿತ ಸ್ಥಳಗಳಿಗೆ ಹೋಗಿ ಸಹಾಯದಲ್ಲಿ ತೊಡಗಿದ್ದಾರೆ ಎಂದರು.
'ಪ್ರವಾಹ ಪರಿಸ್ಥಿತಿಯಲ್ಲಿ ನಾವುಗಳ್ಯಾರು ರಾಜಕೀಯ ಮಾಡುವುದು ಬೇಡ. ಯಡಿಯೂರಪ್ಪ ಮೂರು ಸಾವಿರ ಕೋಟಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದಾರೆ. ನನ್ನ ಅನುಭವದ ಮೇಲೆ ನಾನು ಮಧ್ಯಂತರವಾಗಿ 5 ಸಾವಿರ ಕೋಟಿ ಕೊಡಲಿ ಎಂದು ಕೇಳಿದ್ದೇನೆ' ಎಂದರು.
ಪ್ರವಾಹ ಪರಿಸ್ಥಿತಿ ಕೊಂಚ ಇಳಿದ ಮೇಲೆ ನಾನು ಪ್ರವಾಸ ಮಾಡುತ್ತೇನೆ. ಎಲ್ಲೆಲ್ಲಿ ಏನೇನು ಸಮಸ್ಯೆ ಆಗಿದೆ ಎಂದು ಖುದ್ದಾಗಿ ನಾನೇ ಭೇಟಿ ಮಾಡುತ್ತೇನೆ. ಎಷ್ಟು ರಸ್ತೆ ಹಾಳಾಗಿದೆ, ಎಷ್ಟು ಸೇತುವೆ, ಮನೆ ಹಾಳಾಗಿದೆ ಎಂದು ಖುದ್ದು ಪರಿಶೀಲನೆ ನಡೆಸುತ್ತೇನೆ. ಎಲ್ಲಾ ಭಾಗಗಳಲ್ಲೂ ನಾನು ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications