ಮಾದಿಗ ಜನಾಂಗಕ್ಕೆ ಮೋಸ ಮಾಡ್ಬಿಟ್ರು ದೇವೇಗೌಡ್ರು: ಪಿಳ್ಳಮುನಿಶಾಮಪ್ಪ
ದೇವನಹಳ್ಳಿ ಏಪ್ರಿಲ್ 25 : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಮಾದಿಗ ಜನಾಂಗಕ್ಕೆ ಮೋಸ ಮಾಡಿದ್ದಾರೆ. ಭಾಷಣದಲ್ಲಿ ಮಾತ್ರ ಸಾಮಾಜಿಕ ನ್ಯಾಯ ಎಂದು ಮಾತನಾಡುತ್ತಾರೆ ಎಂದು ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಆರೋಪಿಸಿದರು.
ಜೆಡಿಎಸ್ ನಿಂದ ಅಭ್ಯರ್ಥಿ ಸ್ಥಾನ ಕೈ ತಪ್ಪಿದ ಕಾರಣ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಯಲ್ಲಿ ಅಭ್ಯರ್ಥಿ ಘೋಷಣೆಯಲ್ಲಿ ಮಾಡಿರುವ ಮಹಾ ಮೋಸ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ದೊಡ್ಡ ಹೊಡೆತವಾಗಲಿದೆ. ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಮಾದಿಗ ಸಮಾಜದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಮ್ಮ ಸಮಾಜದ ಶಕ್ತಿಯನ್ನು ಚುನಾವಣೆಯಲ್ಲಿ ಪ್ರದರ್ಶಿಸುತ್ತೇವೆ ಎಂದರು.
ನಿಸರ್ಗ ನಾರಾಯಣಸ್ವಾಮಿ ಅವರನ್ನು ನಮ್ಮ ಸಮಾಜ ಸೋಲಿಸುತ್ತದೆ. ಹಾಲಿ ಶಾಸಕರಿಗೆ ಅಭ್ಯರ್ಥಿ ಸ್ಥಾನ ಕೈ ತಪ್ಪಲು ಜಿಲ್ಲಾಧ್ಯಕ್ಷ ಮುನೇಗೌಡ, ತಾಲೂಕು ಕಾರ್ಯಾಧ್ಯಕ್ಷ ಮುನೇಗೌಡ ಕಾರಣ. ದೊಡ್ಡಬಳ್ಳಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡ ರ ವಿರುದ್ಧ ನಮ್ಮ ಸಮಾಜ ಕೆಲಸ ಮಾಡುತ್ತದೆ. ಬಿ ಫಾರಂ ನೀಡಿ ನಾಮಪತ್ರ ಸಲ್ಲಿಕೆಯಾದ ನಂತರ ಹಾಲಿ ಶಾಸಕರಿಗೆ ಈ ರೀತಿ ಅವಮಾನ ಮಾಡಿರುವುದು ಎಷ್ಟು ಸರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಆರ್ ನಾರಾಯಣಸ್ವಾಮಿ ಮಾತನಾಡಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬರಿ ಜೆಡಿಎಸ್ ನಿಂದ ಮಾತ್ರ ಮಾದಿಗ ಸಮಾಜಕ್ಕೆ ಅನ್ಯಾಯವಾಗಿಲ್ಲ, ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲೂ ಸಹ ಆಗಿದೆ. ಮಾದಿಗ ಸಮಾಜ ಎಲ್ಲಿ ರಾಜ್ಯದಲ್ಲಿ ಬಲಿಷ್ಠವಾಗುತ್ತದೆಯೋ ಎಂಬ ಭಯದಿಂದ ಈ ರೀತಿ ಮಾಡಲಾಗುತ್ತಿದೆ. ರಾಜ್ಯದಲ್ಲಿ 60 ರಿಂದ 70 ಲಕ್ಷ ಜನ ಸಂಖ್ಯೆ ಹೊಂದಿರುವ ಮಾದಿಗ ಜನಾಂಗಕ್ಕೆ ಯಾವ ರಾಜಕೀಯ ಪಕ್ಷಗಳು ಎಷ್ಟು ಅಭ್ಯರ್ಥಿಗಳನ್ನು ನೀಡಿವೆ ಎಂದು ಪ್ರಶ್ನಿಸಿದರು.
ದೇವನಹಳ್ಳಿ ಕ್ಷೇತ್ರದಲ್ಲಿ ಕೊನೆಯವರೆಗೂ ನಾನು ಬಿಜೆಪಿ ಅಭ್ಯರ್ಥಿ ಎಂದು ಹೇಳಲಾಗಿತ್ತು. ಆದರೆ ಮಾದಿಗ ಸಮಾಜಕ್ಕೆ ಸೇರಿದವನು ಎಂದು ಅಭ್ಯರ್ಥಿ ಸ್ಥಾನ ಕೈ ತಪ್ಪಿದೆ. ಕ್ಷೇತ್ರದಲ್ಲಿ ನಮ್ಮ ಜನಾಂಗ ಒಂದಾಗಿ ಮುಂದಿನ ಚುನಾವಣೆ ಎದುರಿಸುತ್ತೇವೆ. ನಮ್ಮ ಸಮಾಜದ ಎಲ್ಲ ಮುಖಂಡರು ಸೇರಿ ನನ್ನನ್ನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದರೆ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂದು ತಿಳಿಸಿದರು.
ಮಾದಿಗ ಸಮುದಾಯದ ಮುಖಂಡ ಮಾರಪ್ಪ ಮಾತನಾಡಿ, ಜೆಡಿಎಸ್ ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಬಿ ಫಾರಂ ನೀಡಿ, ನಾಮಪತ್ರ ಸಲ್ಲಿಕೆಯ ಕೊನೆ ಗಳಿಗೆಯಲ್ಲಿ ರಾತ್ರೋರಾತ್ರಿ ಅಭ್ಯರ್ಥಿ ಬದಲಾವಣೆ ಮಾಡಿ ಹೊರ ಕ್ಷೇತ್ರದ ಬಲ ಸಮುದಾಯಕ್ಕೆ ಸಿ ಫಾರಂ ನೀಡಿರುವುದಕ್ಕೆ ಖಂಡಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications