ಅತೃಪ್ತ ವಿಧಾನಪರಿಷತ್ ಸದಸ್ಯರ ಜೊತೆ ದೇವೇಗೌಡರ ಸಭೆ
ಬೆಂಗಳೂರು, ಅಕ್ಟೋಬರ್ 17: ಪಕ್ಷದ ವಿಧಾನಪರಿಷತ್ ಸದಸ್ಯರಲ್ಲಿ ಮೂಡಿರುವ ಅಸಾಮಾಧಾನ ಆಲಿಸಲು ಮುಂದಾಗಿರುವ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಶುಕ್ರವಾರ ಸಮಸ್ಯೆ ಬಗೆಹರಿಸುವ ನಿರ್ಧಾರ ಕೈಗೊಂಡಿದ್ದಾರೆ.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪಕ್ಷದ ಮುಖಂಡರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ವಿಧಾನಪರಿಷತ್ ಸದಸ್ಯರು ಬೇಸರಗೊಂಡಿದ್ದಾರೆ.
ಅಸಮಾಧಾನ ಶಮನಗೊಳಿಸಲು ಪ್ರತ್ಯೇಕ ಸಭೆ ನಡೆಸುವುದಕ್ಕಿಂತ ಮುಂಬರುವ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಶುಕ್ರವಾರ ಕರೆದಿರುವ ಸಭೆಯಲ್ಲಿಯೇ ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸಲು ತೀರ್ಮಾನಿಸಲಾಗಿದೆ.

ಆಗ್ನೇಯ ಪದವೀಧರ, ಪಶ್ಚಿಮ ಪದವೀಧರ ಮತ್ತು ಈಶಾನ್ಯ ಶಿಕ್ಷಕರ, ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.
ಅಭ್ಯರ್ಥಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು. ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಅ.18ರಂದು ಪಕ್ಷದ ಕಚೇರಿಯಲ್ಲಿ ಸಣೆ ಡೆಸಲಾಗುವುದು. ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಸಂಸದರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಪ್ರತಿಯೊಬ್ಬರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪಕ್ಷ ಕ್ರಿಯಾಶೀಲವಾಗಿದೆ.
ಅನರ್ಹಗೊಂಡಿರುವ ಶಾಸಕರ ಕುರಿತು ಸಭಾಧ್ಯಕ್ಷರು ನೀಡಿದ ತೀರ್ಪನ್ನುಸುಪ್ರೀಂಕೋರ್ಟ್ ಎತ್ತಿಹಿಡಿದರೆ ಉಪ ಚುನಾವಣೆ ಎದುರಾಗಲಿದೆ. ಇಲ್ಲವಾದರೆ ಉಪ ಚುನಾವಣೆ ನಡೆಯುವುದು ಅನುಮಾನ, ಉಪ ಚುನಾವಣೆ ನಡೆದರೆ ಎಲ್ಲಾ 15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications