ಅವರದ್ದೇ ಸರ್ಕಾರವಿದ್ದರೂ ಬಿಜೆಪಿ ನಾಯಕರ ರಾಜಕೀಯ ಚೆಲ್ಲಾಟ: ದೇವೇಗೌಡ
ಬೆಂಗಳೂರು, ಆಗಸ್ಟ್ 13: ಅಧಿಕಾರಿಗಳು ಒಂದು ಜವಾಬ್ದಾರಿಯಿಂದ ಕಾರ್ಯ ನಿರ್ವಹಣೆ ಮಾಡುವ ಸಂದರ್ಭದಲ್ಲಿ ರಾಜಕೀಯ ಚೆಲ್ಲಾಟವಾಡಬಾರದು ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದರು.
Recommended Video
ಪುಲಕೇಶಿನಗರದಲ್ಲಿ ನಡೆದ ಘಟನೆ ಕುರಿತು ಮಾತನಾಡಿರುವ ಅವರು ಸಿಎಂ ಯಡಿಯೂರಪ್ಪ ಅವರು ಒಂದು ಹೇಳಿಕೆ ಕೊಟ್ಟ ಮೇಲೆ ಮುಗೀತು, ಕಾಂಗ್ರೆಸ್ನಲ್ಲಿ ಅಧ್ಯಕ್ಷರು ಮಾತನಾಡಿದ ಮೇಲೆ ಮುಗಿಯುತು ಬಿಜೆಪಿಯ ಏಳೆಂಟು ನಾಯಕರು ಏಳೆಂಟು ರೀತಿಯಲ್ಲಿ ಮಾತನಾಡುವ ಅಗತ್ಯವಿಲ್ಲ ಎಂದರು.
ಎಲ್ಲರೂ ಮನಸಿಗೆ ಬಂದ ಹಾಗೆ ಮಾತಾಡುತ್ತಾರೆ, ಮನಸಿಗೆ ಬಂದ ಹಾಗೆ ಎಲ್ಲಾ ಮಾತಾಡುವುದಕ್ಕೆ ಹೋಗಬಾರದು, ಈಗಾಗಲೇ ಮೂರು ಕಾಯ್ದೆಗಳನ್ನು ರಾಜ್ಯ ಸರ್ಕಾರ ಹೊರ ತಂದಿದೆ.
ಆ ಕಾಯ್ದೆಗಳನ್ನು ನಮ್ಮ ಪಕ್ಷ ಉಗ್ರವಾಗಿ ವಿರೋಧ ಮಾಡುತ್ತದೆ, ಈ ಕಾಯ್ದೆ ವಿರುದ್ದ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ, ನಾವು ನಾಳೆ ಹಾಸನದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ, ಕೊರೊನಾ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವುದಿಲ್ಲ.
ಹೆಚ್ ಕೆ ಕುಮಾರಸ್ವಾಮಿ , ರೇವಣ್ಣ ಸೇರಿದಂತೆ ಹಲವು ನಾಯಕರು ಭಾಗಿಯಾಗ್ತಾರೆ, ಇದು ಸಂಕೇತಿಕ ಪ್ರತಿಭಟನೆ ,ಧಿಕ್ಕಾರ,ಘೋಷಣೆ ಕೂಗಿ ಪ್ರತಿಭಟನೆ ಮಾಡಲ್ಲ,ಆದರೆ ಡಿಸಿ ಅವರಿಗೆ ಪ್ರತಿಭಟನೆಯ ಮನವಿ ಪತ್ರ ಕೊಡುತ್ತೇವೆ ಎಂದು ವಿವರಿಸಿದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಚಾರ, ರಾಜ್ಯಾದ್ಯಂತ ನಾಳೆಯಿಂದ ನಮ್ಮ ಎಲ್ಲಾ ಶಾಸಕರು ಹಾಸನದಲ್ಲಿ ಸಂಕೇತಿಕ ಪ್ರತಿಭಟನೆ ಮಾಡುತ್ತೇವೆ, ಕೊರೊನಾ ಇರುವ ಕಾರಣ ಸರ್ಕಾರದ ನಿಯಮಾವಳಿಯಂತೆ ಪ್ರತಿಭಟನೆ ಮಾಡುತ್ತೇವೆ, ಆ ಪ್ರತಿಭಟನೆಯಲ್ಲಿ ನಾವೆಲ್ಲ ಇರುತ್ತೇವೆ, 200 ಜನರು ಸೇರಿ ಪ್ರತಿಭಟನೆ ಮಾಡುತ್ತೇವೆ. ಸಾಮಾಜಿಕ ಅಂತರದಲ್ಲಿ ಒಂದು ಕಡೆ ಕೂತು ಪ್ರತಿಭಟನೆ ಮಾಡುತ್ತೇವೆ, ಅವರಿಗೆ ಆಗಿರುವ ನೋವು, ಅನಾಹುತಕ್ಕೆ ಪರಿಹಾರ ಸರ್ಕಾರ ಕೊಡಿಸಬೇಕು ಎಂದರು

ಮೊದಲ ಬಾರಿಗೆ ಒಬ್ಬ ಶಾಸಕರ ಮೇಲೆ ಹಲ್ಲೆ ನಡೆದಿದೆ
ಮೊದಲ ಬಾರಿಗೆ ಒಬ್ಬ ಶಾಸಕರ ಮೇಲೆ ಹಲ್ಲೆ ನಡೆದಿದೆ. ಪಾಪ ಅವರು ಯಾರಿಗೆ ಅನ್ಯಾಯ ಮಾಡಿದ್ದರು. ನಮ್ಮ ಪಕ್ಷದಲ್ಲಿ ಇದ್ದರು, ಹೋದರು ಅದು ಬೇರೆ ವಿಚಾರ ಅವರಿಗೆ ಆಗಿರುವ ಅನ್ಯಾಯವನ್ನು ಸರ್ಕಾರ ಬರಿಸಿಕೊಡಬೇಕು ಎಂದು ಒತ್ತಾಯಿಸಿದರು.

ಕೊಡಗಿಗೆ ನಿಖಿಲ್ ಹೋಗಿದ್ದಾರೆ
ಕೊಡಗಿನಲ್ಲಿ ಪ್ರವಾಹ ಸಂಭವಿಸಿದ್ದು, ನಿಖಿಲ್ ಕುಮಾರಸ್ವಾಮಿ ಅಲ್ಲಿಗೆ ತೆರಳಿದ್ದಾರೆ.ಮಹಾರಾಷ್ಟ್ರದಿಂದ ನೀರು ಹೆಚ್ಚು ಬರುತ್ತಿದೆ ಮಲಪ್ರಭಾ, ಕೃಷ್ಣಾ , ವರದಾ ನದಿ ಯಿಂದ ನೀರು ಹೇಚ್ಚಾಗಿದೆ. ಭೀಮಾ, ದೂದ್ ನಿಂದ ಕೂಡ ನೀರು ಹೆಚ್ಚಾಗಿದೆ.ಪ್ರಾಣಿಗಳು, ಮನುಷ್ಯರು ಕೊಟ್ಟಿಕೊಂಡಿ ಹೋಗಿವೆ ಬೆಳೆ ನಾಶ ಆಗಿದೆ , ಪ್ರಧಾನಿ ಅವರು ರಾಜ್ಯದ ಸಚಿವರ ಜೊತೆಗೆ ವೀಡಿಯೋ ಸಂವಾದ ನಡೆಸಿದ್ದಾರೆ. ಇದರಿಂದ ನನಗೆ ತೃಪ್ತಿ ಇಲ್ಲ ಪ್ರತಿ ತಾಲ್ಲೂಕಿಗೆ ಹೋಗಿ ಅಧಿಕಾರಿಗಳು ವರದಿ ಕೊಡಬೇಕು ಎಂದರು.

ಕೇಂದ್ರದ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು
ಈ ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಸಂಭವಿಸಿದಾಗ ಕೇಂದ್ರದ ತಂಡಗಳು ಬರಬೇಕು ,ಕೃಷ್ಣಾ, ಕಾವೇರಿ, ನೇತ್ರಾವತಿ ಬೇಸಿನ್ ಗೆ ತಂಡಗಳು ಬರಬೇಕು, ಹಿಂದೆ ಕೊಡುತ್ತೇವೆ ಅಂದಿದ್ದು ಕೊಟ್ಟಿಲ್ಲ, ಕೇಂದ್ರ ನಿರ್ಲಕ್ಷ್ಯ ಮಾಡಿದೆ. ನಾನು ರಾಜ್ಯ ಸಭೆಯಲ್ಲಿ ಇದರ ಬಗ್ಗೆ ಮಾತಾಡುತ್ತೇನೆ, ರಾಜ್ಯ ಘಟಕ ಅಧ್ಯಕ್ಷ ಜೊತೆಗೆ ಮಾಹಿತಿ ಕಲೆ ಹಾಕುತ್ತಿದ್ದೇನೆ , ನಮ್ಮ ಎಲ್ಲಾ ಶಾಸಕರ ಜೊತೆಗೆ ಮಾಹಿತಿ ಕಲೆ ಹಾಕುತ್ತಿದ್ದೇನೆ ಎಲ್ಲಾ ಕಡೆ ನಮ್ಮ ಶಾಸಕರು, ನಾಯಕರು ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications