ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಆರೋಗ್ಯ ಕುರಿತು ದೇವೇಗೌಡ ಟ್ವೀಟ್‌

|
Google Oneindia Kannada News

ಬೆಂಗಳೂರು, ಡಿಸೆಂಬರ್ 12: ಮೈತ್ರಿ ಸರ್ಕಾರದ ಪತನದ ಬಳಿಕ ಒಬ್ಬರ ಸಿದ್ದರಾಮಯ್ಯ ಮೇಲೆ ವಾಗ್ಬಾಣಗಳನ್ನು ಹೂಡಿದ್ದ ದೇವೇಗೌಡರು ಇಂದು ಟ್ವೀಟ್‌ನಲ್ಲಿ ಸಿದ್ದರಾಮಯ್ಯ ಅವರನ್ನು ನೆನಪಿಸಿಕೊಂಡಿದ್ದಾರೆ.

'ಸಿದ್ದರಾಮಯ್ಯ ಹೃದಯ ಚಿಕಿತ್ಸೆಗೆ ಒಳಗಾದರೆಂಬ ವಿಷಯ ತಿಳಿಯಿತು.‌ ಬಹುಕಾಲದ ನನ್ನ ಒಡನಾಡಿಯಾಗಿದ್ದ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸುತ್ತೇನೆ' ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ

ಮೈತ್ರಿ ಸರ್ಕಾರದ ಬಳಿಕ ದೇವೇಗೌಡ-ಸಿದ್ದರಾಮಯ್ಯ ಇಬ್ಬರೂ ಪರಸ್ಪರ ಟೀಕೆಗಳನ್ನು ಮಾಡಿಕೊಂಡಿದ್ದರು. ಅದರಲ್ಲಿಯೂ ದೇವೇಗೌಡ ಅವರು ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪರೋಕ್ಷ ಕಾರಣ ಎಂಬಂತೆ ಮಾತನಾಡಿದ್ದರು. ಆದರೆ ಈಗ ಸಿದ್ದರಾಮಯ್ಯ ಆರೋಗ್ಯ ಸ್ಥಿತಿಯ ಬಗ್ಗೆ ಕಳಕಳಿ ವ್ಯಕ್ತಪಡಿಸಿ ರಾಜಕಾರಣ ಬೇರೆ ಮಾನವೀಯತೆ ಮೊದಲು ಎಂಬುದನ್ನು ಸಾಬೀತುಪಡಿಸಿದ್ದಾರೆ.

Deve Gowda Tweeted About Siddaramaiahs Helath

ಸಿದ್ದರಾಮಯ್ಯ ಅವರು ಬುಧವಾರ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಸಣ್ಣ ಮಟ್ಟಿನ ಹೃದಯ ಖಾಯಿಲೆ ಕಾಣಿಸಿಕೊಂಡಿತ್ತು. ಹೃದಯದಲ್ಲಿ ರಕ್ತಪರಿಚಲನೆ ಸೂಕ್ತವಾಗಿ ಆಗುತ್ತಿರಲಿಲ್ಲ, ಹಾಗಾಗಿ ವೈದ್ಯರ ಸಲಹೆ ಮೇರೆಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ.

ಈ ಹಿಂದೆಯೂ ಸಿದ್ದರಾಮಯ್ಯ ಅವರಿಗೆ ಹೃದಯ ಸಮಸ್ಯೆ ಕಾಡಿತ್ತು. ಹಿಂದೆಯೂ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

English summary
JDS leader Deve Gowda tweeted about Siddaramaiah's health. He wish Siddaramaiah to get well soon. Siddaramaiah under gone a minor heart surgery.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X