ಸಕ್ರಿಯ ರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ, ದೇವೇಗೌಡ ಹೇಳಿದ್ದೇನು?
ಬೆಂಗಳೂರು, ಜನವರಿ 24: ಪ್ರಿಯಾಂಕಾ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಆಗಮಿಸಿರುವುದು ಹಲವು ಚರ್ಚೆಗಳಿಗೆ ಪ್ರೇರೇಪಣೆ ನೀಡಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ಈ ಬಗ್ಗೆ ಮಾತನಾಡುತ್ತಿದ್ದಾರೆ.
ಮಹಾಘಟಬಂಧನಕ್ಕೆ ಎಚ್ಚರಿಕೆ ಮಾತುಗಳನ್ನು ಹೇಳಿದ ದೇವೇಗೌಡ
ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡ ಅವರು, ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬಂದಿರುವುದನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಕೊಲ್ಕತ್ತದ ಪ್ರತಿಪಕ್ಷಗಳ ಬೃಹತ್ ಸಮಾವೇಶದಲ್ಲಿ ದೇವೇಗೌಡ ಭಾಗಿ
ಪ್ರಿಯಾಂಕಾ ಗಾಂಧಿ ಅವರು ಇನ್ನೂ ಬೇಗನೇ ರಾಜಕಾರಣಕ್ಕೆ ಬರಬೇಕಿತ್ತು ಎಂದು ಸಹ ದೇವೇಗೌಡ ಅವರು ಹೇಳಿದ್ದಾರೆ.
ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಮಾರಾಮಾರಿ ಬಗ್ಗೆ ಪ್ರತಿಕ್ರಿಯಿಸಿರುವ ದೇವೇಗೌಡ, ಆ ಘಟನೆಗೂ ನಮಗೂ ಸಂಬಂಧವಿಲ್ಲ ಆದರೆ ತಪ್ಪಿತಸ್ತರಿಗೆ ಶಿಕ್ಷೆ ಆಗಲೇಬೇಕು ಎಂದು ಒತ್ತಾಯಿಸಿದ್ದಾರೆ.
ಲೋಕಸಭೆ ಕದನ 2019: ಹಾಸನ ಲೋಕಸಭಾ ಕ್ಷೇತ್ರದ ಪರಿಚಯ
ದೇವೇಗೌಡ ಅವರು ಮಹಾಘಟಬಂಧನ್ನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ದಕ್ಷಿಣ ರಾಜ್ಯಗಳಲ್ಲಿ ಮಹಾಘಟಬಂಧನ್ ಅನ್ನು ಮುನ್ನಡೆಸುವ ಪ್ರಮುಖ ಜವಾಬ್ದಾರಿ ಅವರ ಮೇಲಿದೆ, ಜೊತೆಗೆ ಮಹಘಾಟಬಂಧನ್ ಚುನಾವಣೆ ಪೂರ್ವ ತೆಗೆದುಕೊಳ್ಳುವ ಹಲವು ಮಹತ್ವಪೂರ್ಣ ನಿರ್ಣಯಗಳಲ್ಲಿ ದೇವೇಗೌಡರು ಪ್ರಮುಖ ಪಾತ್ರವಹಿಸಲಿದ್ದಾರೆ.