ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ: ದೇವೇಗೌಡ ಸ್ಪಷ್ಟನೆ

ಬೆಂಗಳೂರು, ಜನವರಿ 15: ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಕೂರಿತು ಟ್ವೀಟ್ ಮಾಡಿರುವ ಅವರು ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಬರ ಪೀಡಿತವಾಗಿದ್ದು ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದಲ್ಲೇ ಇದ್ದು ಬರ ಪರಿಹಾರ ಕಾರ್ಯದಲ್ಲಿ ತೊಡಗುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ರಾಜ್ಯದ 156 ತಾಲ್ಲೂಕುಗಳು ಬರಪೀಡಿತವಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿಯು ತನ್ನ ಶಾಸಕರನ್ನು ಒಂದು ವಾರದಿಂದ ಉತ್ತರಭಾರತಕ್ಕೆ ಕಳುಹಿಸಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದೆ.ಸರ್ಕಾರ ಬೀಳಿಸುತ್ತೇವೆ ಎನ್ನುವ ಭ್ರಮೆಯಲ್ಲಿರುವ ಬಿಜೆಪಿಯಿಂದ ಬರ ಪೀಡಿತ ಕ್ಷೇತ್ರದ ಜನತೆಗೆ ಅನ್ಯಾಯವಾಗುತ್ತಿದೆ.ಇದಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿ ಇತ್ತೀಚಿನ ಕೆಲ ದಿನಗಳಲ್ಲಿ ನಡೆಯುತ್ತಿರುವ ಹಲವು ಬೆಳವಣಿಗೆಗಳಿಂದಾಗಿ ಜೆಡಿಎಸ್ ಶಾಸಕರು ಪಕ್ಷ ತೊರೆಯುವ ಸಾಧ್ಯತೆಗಳಿವೆ ಹಾಗಾಗು ಜೆಡಿಎಸ್ ಶಾಸಕರ ಸಭ ಕರೆಯಲಾಗಿದೆ ಎನ್ನುವ ಮಾಹಿತಿಯು ಸುಳ್ಳು ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

Devegowda clarifies no meetings of JDS MLAs

ಬಿಜೆಪಿ ಶಾಸಕರೆಲ್ಲರೂ ಗುರುಗ್ರಾಮದ ರೆಸಾರ್ಟ್‌ನಲ್ಲಿದ್ದು, ಐದು ಮಂದಿ ಕಾಂಗ್ರೆಸ್ ಶಾಸಕರು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+