ಲೋಕಾಯುಕ್ತರ ಮೇಲೆ ಹಲ್ಲೆ: ಇದು ಗೂಂಡಾ ರಾಜ್ಯನಾ ಎಂದ ದೇವೇಗೌಡರು
ಬೆಂಗಳೂರು, ಮಾರ್ಚ್ 07: ನ್ಯಾಯಮೂರ್ತಿಗೆ ಓರ್ವ ಬಂದು ಚಾಕುವಿನಿಂದ ಇರಿಯುತ್ತಾನೆ ಎಂದರೆ ನಾವು ಯಾವ ರಾಜ್ಯದಲ್ಲಿದ್ದೇವೆ, ಇದೇನು ಗೂಂಡಾ ರಾಜ್ಯಾನಾ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತ ಕಚೇರಿಯಲ್ಲಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿತ ಪ್ರಕರಣವನ್ನು ಖಂಡಿಸಿರುವ ಮಾತನಾಡಿದ ಅವರು ಸರ್ಕಾರ ಲೋಕಾಯುಕ್ತವನ್ನು ಮುಗಿಸಿತು. ಇದೀಗ ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲೆಯೇ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಇದನ್ನು ನೋಡಿದರೆ ನಾವೆಲ್ಲಿದ್ದೇವೆ. ಇದು ಎಂತಹ ರಾಜ್ಯ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಲೋಕಾಯುಕ್ತರಿಗೇ ರಕ್ಷಣೆ ಇಲ್ಲದ ಮೇಲೆ ಮತ್ಯಾರಿಗೆ ಇವರು ರಕ್ಷಣೆ ಕೊಡುತ್ತಾರೆ ಇದೇನು ಗೂಂಡಾ ರಾಜ್ಯನಾ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ ಎಂದು ಕಿಡಿಕಾರಿದರು.

ಅಶೋಕ್ ಖೇಣಿ ಕಾಂಗ್ರೆಸ್ ಗೆ ಸೇರಿದ್ದರ ಬಗ್ಗೆ ಅಸೂಯೆ ಇಲ್ಲ, ಆದರೆ ಖೇಣಿ ಮೇಲೆ ಯಾವುದೇ ಕ್ರಮ ಇಲ್ಲ ಸದನ ಸಮಿತಿ ರಚನೆ ಆಗಿತ್ತು. ಸಿಬಿಐ ಅಥವಾ ಇಡಿ ಯಂತಹ ತನಿಖಾ ಸಂಸ್ಥೆ ಮೂಲಕ ನೈಸ್ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ಶಿಫಾರಸ್ಸು ಮಾಡಿದೆ.
ಹಿಂದೆ ಸ್ಪೀಕರ್ ಆಗಿದ್ದ ಕಾಗೋಡು, ರಮೇಶ್ ಕುಮಾರ್ ಅವರು ಸದನದಲ್ಲಿ ಮಾತಾನಾಡಿರುವ ಕಾಪಿ ನನ್ನ ಬಳಿ ಇದೆ. ಸಿಎಂ ಕೂಡ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದರು. ಖೇಣಿ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳೋದಲ್ಲ, ಬೇಕಿದ್ದರೆ ಡಿಸಿಎಂ ಮಾಡಿಕೊಳ್ಳಲಿ ನನಗೇನು ಎಂದರು.
ಸದನ ಸಮಿತಿ ಕೊಟ್ಟ ವರದಿ ಅನ್ವಯ ಸಿಎಂ ಯಾವ ಹೆಜ್ಜೆ ಇಟ್ಟಿದ್ದಾರೆ , ಇದೇನಾ ಪಾರದರ್ಶಕ ಆಡಳಿತವೆಂದರೆ, ಟೋಲ್ ಕಲೆಕ್ಷನ್ ಮಾಡಕೂಡದು ಎಂದು ಸಮಿತಿ ಹೇಳಿದೆ , ಆದಾಗ್ಯೂ ಎಲ್ಲ ನಡೀತಾ ಇದೆ. ಖೇಣಿ ಕೋರ್ಟ್ ನಲ್ಲಿ ಸ್ಟೇ ತೆಗೆದುಕೊಳ್ಳುತ್ತಾರೆ. ಸರ್ಕಾರಕ್ಕೆ ಅಡ್ವೋಕೇಟ್ ಜನರಲ್ ಇಲ್ಲವಾ ಎಂದು ಪ್ರಶ್ನಿಸಿದರು.
ನಿಮ್ಮ ಮತ್ತು ಅವರ ನಡುವಿನ ಹೊಂದಾಣಿಕೆ ಏನು, ಇಲ್ಲವೇ ಎಲ್ಲವನ್ನೂ ಮಾಫಿ ಮಾಡಿದ್ದೇನೆ ಎಂದು ಹೇಳಿಬಿಡಿ, ನಾನೇನು ಜೈಲಿಗೆ ಕಳಿಸೋಕೆ ಸಾಧ್ಯಾನಾ ಎಂದು ಸಿಎಂ ಹೇಳುತ್ತಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications