ಉಪ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ಸರ್ಕಾರಕ್ಕೆ ದೇವಗೌಡರ ಅಭಯ

ಬೆಂಗಳೂರು, ನವೆಂಬರ್ 13: ಉಪಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಅಭಯ ನೀಡಿದ್ದಾರೆ.

ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರ ಮುಂದಿನ ಮೂರು ವರ್ಷವನ್ನು ಪೂರೈಸಲಿದೆ ಎಂದು ಹೇಳಿದ್ದಾರೆ.

ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. 17 ಸ್ಥಾನ ಕಾಂಗ್ರೆಸ್ ಗೆದ್ದರೂ ಸರ್ಕಾರ ರಚನೆ ಸಾಧ್ಯವಿಲ್ಲ. ಬಿಎಸ್‌ವೈ ಸರ್ಕಾರ ಭದ್ರವಾಗಿದೆ. ಪಕ್ಷ ಕಟ್ಟಿಕೊಳ್ಳಳು ಅವಕಾಶ ಸಿಕ್ಕಿದೆ ಎಂದರು.

Devegowda Reaction Over Supreme Court Judgement

ಅನರ್ಹ ಶಾಸಕರಗೆ ಯಾವುದೇ ತೊಂದರೆ ಇಲ್ಲ, ಸಿದ್ದರಾಮಯ್ಯಗೆ ಪ್ರತಿಪಕ್ಷ ಸ್ಥಾನವೇ ಗಟ್ಟಿ ಎಂದಿರುವ ಅವರು ಕಾಂಗ್ರೆಸ್ ಜೊತೆ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳಲ್ಲ. ನಾವು 17 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದ್ದಾರೆ.

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತೆರವಾದ ಕ್ಷೇತ್ರಗಳಿಗೆ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+