ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಮಕೂರಿನಲ್ಲಿ ದೇವೇಗೌಡರ ಸೋಲು, ಮೊದಲ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಮೇ 23: ಸಮಾಜದ ಅಭಿವೃದ್ಧಿಗಾಗಿ ಎಂದಿಗೂ ಶ್ರಮಿಸಲು ನಾವು ಸಿದ್ಧ ಅದಕ್ಕೆ ಅಧಿಕಾರದ ಅವಶ್ಯಕತೆ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.

ಸೋಲಿನ ಬಳಿಕ ಟ್ವೀಟ್ ಮಾಡಿರುವ ಅವರು, ನನಗೆ ಬೆಂಬಲ ನೀಡಿದ ಮತದಾರರು, ಜನತಾದಳ, ಕಾಂಗ್ರೆಸ್ ಕಾರ್ಯಕರ್ತರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಕೆಲಸ ಸಮಾಜವನ್ನು ಅಭಿವೃದ್ಧಯತ್ತ ಕೊಂಡೊಯ್ಯುವುದು ಅದಕ್ಕೆ ಅಧಿಕಾರ ಬೇಕಿಲ್ಲ ಎಂದರು.

Devegowda says Our work towards betterment of the society will never stop

ಮಾಜಿ ಪ್ರಧಾನಿ ದೇವೇಗೌಡರಿಗೆ ಭಾರಿ ಮುಖಭಂಗ: ತುಮಕೂರಿನಲ್ಲಿ ಹೀನಾಯ ಸೋಲುಮಾಜಿ ಪ್ರಧಾನಿ ದೇವೇಗೌಡರಿಗೆ ಭಾರಿ ಮುಖಭಂಗ: ತುಮಕೂರಿನಲ್ಲಿ ಹೀನಾಯ ಸೋಲು

ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸಂಸದರಿಗೂ ಧನ್ಯವಾದಗಳು, ನರೇಂದ್ರ ಮೋದಿಯ ದೊಡ್ಡ ಗೆಲುವಿಗೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಎಚ್‌ಡಿ ದೇವೇಗೌಡ ಅವರು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ವಿರುದ್ಧ ಸೋಲು ಅನುಭವಿಸಿದ್ದಾರೆ. ಅವರು ತಮ್ಮ ತವರು ಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿದ್ದು, ಅವರು ಗೆಲುವು ಸಾಧಿಸಿದ್ದಾರೆ.

English summary
JDS Supremo says after He defeated by GS Basavaraju in Tumakur, Our work towards betterment of the society will never stop. Congratulations to all the elected MPs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X