3 ವರ್ಷದಲ್ಲಿ ಐಐಟಿ ಮಾದರಿಯಲ್ಲಿ ಯುವಿಸಿಇ ಅಭಿವೃದ್ಧಿ: ಸಿಎಂ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 15: ಮುಂದಿನ 3 ವರ್ಷಗಳಲ್ಲಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಯುವಿಸಿಇ) ಅನ್ನುಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ ಪೂರಕ ಶಿಕ್ಷಕ ವರ್ಗ, ಮೂಲಸೌಕರ್ಯ, ಲ್ಯಾಬ್ ವ್ಯವಸ್ಥೆ ಸೇರಿದಂತೆ ಎಲ್ಲ ವ್ಯವಸ್ಥೆಗಳ ಒದಗಿಸಲು ಸರ್ಕಾರ ಸಹಕರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ನಗರದ ಯುವಿಸಿಇ ವತಿಯಿಂದ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ 'ಅಭಿಯಂತರರ ದಿನಾಚರಣೆ' ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾಯತ್ತತೆ ಮತ್ತು ತನ್ನ ಸಂಶೋಧನಾತ್ಮಕ ಹಾಗೂ ಭವಿಷ್ಯದ ಅಭಿವೃದ್ಧಿಗೆ ಅಗತ್ಯವಿದ್ದ ಹಿನ್ನೆಲೆ ಯುವಿಸಿಯನ್ನು ವಿಶ್ವವಿದ್ಯಾಲಯವಾಗಿ ಮಾಡಲಾಯಿತು. ಯುವಿಸಿಇ 105 ವರ್ಷಗಳನ್ನು ಪೂರೈಸಿದೆ. ವಿಶ್ವದಲ್ಲೇ ಅತ್ಯುತ್ತಮ ತಾಂತ್ರಿಕ ವಿಶ್ವವಿದ್ಯಾಲಯವನ್ನಾಗಿ ಮಾಡುವ ಜವಾಬ್ದಾರಿ ಇಲ್ಲಿನ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ತಿಳಿಸಿದರು.
ವಿಶ್ವದಾದ್ಯಂತ ಯುವಿಸಿಇ ಬಂದ ಇಂಜಿನಿಯರ್ಗಳು ಸಾಕಷ್ಟು ಸಾಧನೆ ಮಾಡಿದ್ದಾರೆ. ಯುವಿಸಿಇಯ ಶಕ್ತಿಯ ಮೇಲೆ ನನಗೆ ನಂಬಿಕೆಯಿದೆ. ಯುವಿಸಿಇ ಸಂಸ್ಥೆ ಐಐಟಿಯಾಗಲು ಎಲ್ಲ ಬದ್ಧತೆ, ಇಚ್ಛಾಶಕ್ತಿ ಬೇಕು. ಕರ್ನಾಟಕದಲ್ಲಿ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿಯನ್ನಾಗಿಸುವ ಕನಸು ನನ್ನದು. ಮುಂದಿನ ಐದು ವರ್ಷಗಳಲ್ಲಿ ಈ ಕನಸು ನನಸಾಗಲಿದೆ ಎಂದರು.

ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ದಿಕ್ಸೂಚಿ
ಯುವಿಸಿ ಸಂಸ್ಥೆಯ ಶಿಕ್ಷಣದಲ್ಲಿ ಯಾವುದೇ ರೀತಿಯ ರಾಜಕಾರಣ ಬೇಡ. ಎಲ್ಲರ ಚಿಂತನೆಗಳನ್ನೂ ಒಗ್ಗೂಡಿಸಿ ಸಂಸ್ಥೆ ಬೆಳೆಸುವ ಸಂಕಲ್ಪ ಮಾಡಬೇಕು. ನಾನು ಯುವಿಸಿಇ ಸಂಸ್ಥೆಯಲ್ಲಿ ಓದುತ್ತಿದ್ದೇನೆ ಎಂಬ ಹೆಮ್ಮೆ ಎಲ್ಲ ವಿದ್ಯಾರ್ಥಿಗಳಲ್ಲಿಯೂ ಇರಬೇಕು. ಇಂತಹ ಸಂಸ್ಥೆಯನ್ನು ಐಐಟಿಯನ್ನಾಗಿಸಿ ರಾಜ್ಯದ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ದಿಕ್ಸೂಚಿ ಬರೆಯಲಾಗುವುದು.
ವಿದ್ಯಾರ್ಥಿಗಳು ಬದಲಾವಣೆಯ ಭಾಗವಾಗಬೇಕು. ವಿಚಾರದಲ್ಲಿ ಬದಲಾವಣೆಯಾದರೆ ಅಭಿವೃದ್ಧಿಯಲ್ಲಿ ಸಕಾರಾತ್ಮಕ ಬದಲಾವಣೆ ಆಗುತ್ತದೆ. ಇಂಜಿನಿಯರ್ಗಳು ತಾರ್ಕಿಕ ಹಾಗೂ ವಿಶ್ಲೇಷಣಾತ್ಮಕ ಚಿಂತನೆ ಹೊಂದಿರಬೇಕು. ತರ್ಕಬದ್ಧ ಪ್ರಶ್ನೆಗಳ ಮೂಲಕ ತಾರ್ಕಿಕ ಚಿಂತನೆ ಬರುತ್ತದೆ. ಶಿಕ್ಷಣದಲ್ಲಿ ಮೊದಲು ಕಲಿಕೆ ನಂತರ ಪರೀಕ್ಷೆ. ಆದರೆ ನಿಜ ಜೀವನದಲ್ಲಿ ಮೊದಲ ಪರೀಕ್ಷೆ ನಂತರ ಕಲಿಕೆ. ಆದ್ದರಿಂದ ಕಲಿಕೆ ಬಹಳ ಮಹತ್ವವಾಗಿದೆ. 21ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಜ್ಞಾನದಿಂದ ಪ್ರಪಂಚ ಗೆಲ್ಲಬಹುದಾಗಿದೆ ಎಂದು ತಿಳಿಸಿದರು.

ಯುವಿಸಿಇ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು
ಬೆಂಗಳೂರಿನಲ್ಲಿ ಅಂತಾರಾರಾಷ್ಟ್ರೀಯ ಮಟ್ಟದ 400 ಸಂಶೋಧನಾ ಕೇಂದ್ರಗಳಿವೆ. 500 ಪಾರ್ಚೂನ್ ಕಂಪನಿಗಳ ಪೈಕಿ 400 ಕಂಪನಿಗಳು ಬೆಂಗಳೂರಿನಲ್ಲಿವೆ. ಇದು ನಮ್ಮಲ್ಲಿರುವ ವ್ಯವಸ್ಥೆಗೆ ಕನ್ನಡಿ ಹಿಡಿಯುತ್ತದೆ. ಯುವಿಸಿಇ ಯಲ್ಲಿ ಕಲಿತ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು. ಮುತ್ತುರಾಮನ್ ಅವರು ಟಾಟಾ ಸ್ಟೀಲ್ ಸಂಸ್ಥೆ ಕಟ್ಟಿದವರು. ದೂರದೃಷ್ಟಿಯುಳ್ಳ ಅವರು ಈ ಸಂಸ್ಥೆಯಲ್ಲಿ ಅತ್ಯುತ್ತಮ ಪ್ರತಿಭೆ ಹಾಗೂ ಬೆಂಬಲವನ್ನು ಒದಗಿಸಿ ಪರಿವರ್ತನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸಡಗೋಪನ್ ಅವರಂಥ ಮೇಧಾವಿಗಳು ಈ ಸಂಸ್ಥೆಯಲ್ಲಿರುವುದು ಹೆಮ್ಮೆಯ ಸಂಗತಿ. ಅವರು ಕರ್ನಾಟಕದಲ್ಲಿ ಮೂರು ಐಟಿ ಸಂಸ್ಥೆಗಳ ಪಿತಾಮಹರಾಗಿದ್ದಾರೆ ಎಂದು ಹೇಳಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications