ಐಟಿ ಅಧಿಕಾರಿಗಳ ವಿರುದ್ಧ ಎಂಎಲ್ ಸಿ ಗೋವಿಂದರಾಜ್ ದೂರು ದಾಖಲು
ಕಾಂಗ್ರೆಸ್ ನ ವಿಧಾನಪರಿಷತ್ ಸದಸ್ಯ ಗೋವಿಂದರಾಜ್ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಐಟಿ ದಾಳಿ ನಡೆದ ಒಂದು ವರ್ಷದ ನಂತರ ದೂರು ದಾಖಲಾಗಿದ್ದು, ಹಲವು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ
ಬೆಂಗಳೂರು, ಮಾರ್ಚ್ 3: ಬೆಂಗಳೂರಿನ ತಮ್ಮ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ನಡೆದ ಒಂದು ವರ್ಷದ ಮೇಲೆ ಕಾಂಗ್ರೆಸ್ ನ ವಿಧಾನಪರಿಷತ್ ಸದಸ್ಯ ಗೋವಿಂದರಾಜ್ ಐಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಬ್ರವರಿ 28ರಂದು ದೂರು ದಾಖಲಿಸಿರುವ ಗೋವಿಂದರಾಜ್, ಆದಾಯ ಇಲಾಖೆ ಅಧಿಕಾರಿಗಳು ತನ್ನದಲ್ಲದ ಡೈರಿಯೊಂದನ್ನು ತನ್ನದು ಎಂಬಂತೆ ಬಿಂಬಿಸಿದ್ದಾರೆ. ಜತೆಗೆ ಆ ಡೈರಿಯಲ್ಲಿ ಮಾಹಿತಿಗಳು ವಂಚನೆಯಿಂದ ಕೂಡಿವೆ. ಮತ್ತು ಅದರ ರಹಸ್ಯ ಕಾಪಾಡುವ ಬದಲು ಮಾಹಿತಿ ಸೋರಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.[ಡೈರಿ ಬಗ್ಗೆ ಗೊತ್ತಿದ್ದರೂ ಲೋಕಾಯುಕ್ತ ಸಂಸ್ಥೆ ಸುಮ್ಮನಿದೆ ಏಕೆ?]

ಕಾಂಗ್ರೆಸ್ ಎಂಎಲ್ ಸಿ ಗೋವಿಂದರಾಜ್ ಅವರಿಗೆ ಸೇರಿದ ಡೈರಿಯಲ್ಲಿ ಭ್ರಷ್ಟಾಚಾರದ ಬಗ್ಗೆ ವಿವರಗಳಿವೆ ಎಂದು ಮಾಹಿತಿ ಬಹಿರಂಗವಾದ ನಂತರವಷ್ಟೇ ದೂರು ದಾಖಲಿಸಿದ್ದಾರೆ. ಆ ಡೈರಿಯಾಗಲಿ ಅದಲ್ಲಿನ ಹಸ್ತಾಕ್ಷರವಾಗಲಿ ತನ್ನದಲ್ಲ ಎಂದು ಗೋವಿಂದರಾಜ್ ಅವರೇನೋ ಸಮರ್ಥನೆ ನೀಡಿದ್ದಾರೆ.
ಅದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗೋವಿಂದರಾಜ್ ಅವರ ಮನೆ ಮೇಲೆ ದಾಳಿ ನಡೆಸಿದ ಒಂದು ವರ್ಷದ ನಂತರ ದೂರು ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಗೋವಾದಲ್ಲಿ ತನ್ನನ್ನು ತಪ್ಪಾದ ರೀತಿಯಲ್ಲಿ ವಶಕ್ಕೆ ಪಡೆದರು. ತಪ್ಪು ಸಾಕ್ಷ್ಯಗಳನ್ನು ನನ್ನ ವಿರುದ್ಧ ಸೃಷ್ಟಿಸಿ, ಅದರ ಮಾಹಿತಿಯನ್ನು ಎದುರಾಳಿಗಳಿಗೆ ಬೇಕೆಂತಲೇ ನೀಡಿದ್ದಾರೆ ಎಂದು ಗೋವಿಂದರಾಜ್ ದೂರಿದ್ದಾರೆ.[ಕಾಂಗ್ರೆಸ್ ಡೈರಿ ಬೆಂಕಿಗೆ ದಿನೇಶ್ ಅಮಿನ್ ಮಟ್ಟು ತುಪ್ಪ]
ಒಂದು ವರ್ಷದಿಂದ ಗೋವಿಂದರಾಜ್ ಏಕೆ ದೂರು ನೀಡಿಲ್ಲ ಎಂಬುದು ಈಗ ಉದ್ಭವಿಸಿರುವ ಪ್ರಶ್ನೆ. ಅಂದಹಾಗೆ, ಈ ಬಗ್ಗೆ ಇಂದಿರಾನಗರ್ ಪೊಲೀಸ್ ಠಾಣೆಯಲ್ಲಿ 166(a), 193, 182, 341, 109, 406, 218, 409, 457, 120B, 34, 380, 472 ಮತ್ತು 471ರ ಅಡಿಯಲ್ಲಿ ಎಫ್ ಐಆರ್ ಆಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications