ದೇವೇಗೌಡರ ಫೋನ್ ಕರೆ ಸ್ವೀಕರಿಸಲಿಲ್ಲವೇ ಯಡಿಯೂರಪ್ಪ?
Recommended Video
ಬೆಂಗಳೂರು, ನವೆಂಬರ್ 6: ಸರ್ಕಾರದ ಜೊತೆ ನಾವಿದ್ದೀವಿ ಎಂದು ಅಭಯ ನೀಡಲು ಹಾಗೆಯೇ ಯಾದಗಿರಿ ಸಬ್ಇನ್ಸ್ಪೆಕ್ಟರ್ ವಿಚಾರ ದೇವೇಗೌಡರು ಕರೆ ಮಾಡಿದ್ದರು ಆದರೆ ಯಡಿಯೂರಪ್ಪ ಕರೆಯನ್ನು ಸ್ವೀಕರಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಆದರೆ ನನಗೆ ದೇವೇಗೌಡರಿಂದ ಯಾವುದೇ ಕರೆ ಬಂದಿಲ್ಲ, ದೇವೇಗೌಡರು ಕರೆ ಮಾಡಿದ್ದರು ಎನ್ನುವುದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ದೇವೇಗೌಡರಿಗೆ ಯಾವುದು ಸರಿ ಯಾವುದು ತಪ್ಪು ಎಂದು ತೀರ್ಮಾನ ಮಾಡುವ ಶಕ್ತಿ ಇದೆ, ನಾನು ದೇವೇಗೌಡರ ಹೆಸರನ್ನೂ ಯಾವುದೇ ಸಮಯದಲ್ಲೂ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.

ದೇವೇಗೌಡರ ಹೋರಾಟಕ್ಕೆ ಎಚ್ಚೆತ್ತ ಯಡಿಯೂರಪ್ಪ
ಯಾದಗಿರಿ ಸಬ್ ಇನ್ಸ್ಪೆಕ್ಟರ್ ವರ್ಗಾವಣೆ ಮಾಡಲಾಗಿದೆ. ಅವರನ್ನು ರಜೆ ಮೇಲೆ ತೆರಳುವಂತೆ ಹೇಳಿದ್ದೇನೆ.ಅವರು ಯಾದಗಿರಿಯನ್ನು ಬಿಟ್ಟು ಬೇರೆ ಕಡೆಗೆ ಹೋಗುತ್ತಾರೆ.

ದೇವೇಗೌಡರು ನಿರ್ಧಾರವನ್ನು ಒಪ್ಪಿಕೊಳ್ಳುವ ಭರವಸೆ ಇದೆ
ದೇವೇಗೌಡರು ಮಾಜಿ ಪ್ರಧಾನಿಗಳು ನಮ್ಮ ನಿರ್ಧಾರವನ್ನು ಒಪ್ಪಿಕೊಳ್ಳುತ್ತಾರೆ ಎನ್ನುವ ಭರವಸೆ ನನಗಿದೆ. ಯಾದಗಿರಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಸಬ್ಇನ್ಸ್ಪೆಕ್ಟರ್ ದೌರ್ಜ್ಯವೆಸಗಿದ್ದರು ಎಂದು ಹೇಳಲಾಗಿತ್ತು.

ನವೆಂಬರ್ 15ರಂದು ಸಿಎಂ ಮನೆ ಮುಂದೆ ಪ್ರತಿಭಟನೆಗೆ ನಿರ್ಧರಿಸಿದ್ದರು
ಜೆಡಿಎಸ್ ಕಾರ್ಯಕರ್ತ ಬಾಯಲ್ಲಿ ಪಿಸ್ತೂಲ್ ಇಟ್ಟು ದೌರ್ಜನ್ಯ ಎಸಗಿರುವ ಯಾದಗಿರಿ ನಗರ ಠಾಣೆ ಸಬ್ಇನ್ಸ್ಪೆಕ್ಟರ್ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಯಡಿಯೂರಪ್ಪ ನಿವಾಸದ ಎದುರು ನವೆಂಬರ್ 15ರಂದು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಘಟನೆ ಹಿನ್ನೆಲೆ ಏನು?
ಗುರುಮಿಟಕಲ್ ಕ್ಷೇತ್ರದ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮಾರ್ಕಂಡಪ್ಪ ಮಾನೇಗಾರ್ ಅವರನ್ನು ಅಮಾನವೀಯವಾಗಿ ಸಬ್ಇನ್ಸ್ಪೆಕ್ಟರ್ ಬಾಪುಗೌಡ ಥಳಿಸಿದ್ದರು. ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಡಿಯೂರಪ್ಪಗೆ ದೇವೇಗೌಡರು ಪತ್ರ ಬರೆದಿದ್ದರು. ಡಿಐಜಿಗೂ ಕರೆ ಮಾಡಿ ವಿಷಯ ತಿಳಿಸಿದ್ದರು. ಇದೀಗ ಯಡಿಯೂರಪ್ಪ ಪೊಲೀಸ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications