ಗಾರ್ಮೆಂಟ್ಸ್ ನೌಕರರ ನಿಜವಾದ ಸಮಸ್ಯೆ ಯಾರೂ ಕೇಳಲಿಲ್ಲ
ಬೆಂಗಳೂರು, ಏಪ್ರಿಲ್ 25 : ಕೇಂದ್ರ ಸರ್ಕಾರದ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ನೌಕರರು ಕಳೆದ ವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಗಲಭೆಗೆ ಕಾರಣವಾಯಿತು. ಆದರೆ, ಗಾರ್ಮೆಂಟ್ಸ್ ನೌಕರರ ನಿಜವಾದ ಸಮಸ್ಯೆ ಬಗ್ಗೆ ಯಾರೂ ಧ್ವನಿ ಎತ್ತಲಿಲ್ಲ.
ಸರ್ಕಾರ ಹೊಸ ಪಿಎಫ್ ನೀತಿಯನ್ನು ವಾಪಸ್ ಪಡೆಯಿತು. ಮಾಧ್ಯಮಗಳು ಪ್ರತಿಭಟನೆಯನ್ನು ಮರೆತವು. ಆದರೆ, ರಾಜ್ಯದಲ್ಲಿ ಸುಮಾರು 8 ಲಕ್ಷದಷ್ಟಿರುವ ಗಾರ್ಮೆಂಟ್ಸ್ ನೌಕರರ ಸಮಸ್ಯೆ ಬಗ್ಗೆ ಯಾರೂ ಗಮನಹರಿಸಿಲ್ಲ. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ಶೇ 85 ರಷ್ಟು ನೌಕರರು ಮಹಿಳೆಯರು. ಇವರ ಸಮಸ್ಯೆಯನ್ನೂ ಯಾರೂ ಕೇಳಲಿಲ್ಲ. [ಪಿಎಫ್ ಗಲಭೆ : ಲಾಭ ಎಲ್ಲರಿಗೆ, ನಷ್ಟ ಮಾತ್ರ ನೌಕರರಿಗೆ!]

ಕಡಿಮೆ ವೇತನ, ಹೆಚ್ಚು ಕೆಲಸ, ಲೈಂಗಿಕ ಕಿರುಕುಳ ಮುಂತಾದ ಸಮಸ್ಯೆಗಳನ್ನು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ಮಹಿಳೆಯರು ಎದುರಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ನಡೆದ ಗಲಭೆಗೆ ನೌಕರರನ್ನು ದೂರುವ ಜನರು ಅವರ ಸಮಸ್ಯೆಗಳತ್ತ ಗಮನ ಹರಿಸಲಿಲ್ಲ. [ಬೆಂಗಳೂರು : ಪ್ರತಿಭಟನೆ ಗಲಭೆ ಆಗಿದ್ದು ಹೇಗೆ?]
ಗಲಭೆಗೆ ನಾವು ಕಾರಣವಲ್ಲ : ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗಾರ್ಮೆಂಟ್ಸ್ ಮತ್ತು ಟೆಕ್ಸ್ಟೈಲ್ಸ್ ನೌಕರರ ಸಂಘದ ಅಧ್ಯಕ್ಷೆ ಪ್ರತಿಭಾ ಅವರು, 'ನೌಕರರ ಪ್ರತಿಭಟನೆ ವೇಳೆ ನಡೆದ ಗಲಭೆಗೆ ನಾವು ಕಾರಣರಲ್ಲ' ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. [ಪಿಎಫ್ ವಿಥ್ ಡ್ರಾ ನಿಯಮಕ್ಕೆ ಜುಲೈ 31ರ ತನಕ ಬ್ರೇಕ್]
'ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ನೌಕರರು ಪ್ರತಿದಿನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ವಾರ ನಡೆದ ಪ್ರತಿಭಟನೆಯಲ್ಲಿ ಅದರ ಅಕ್ರೋಶವೂ ಇತ್ತು. ಪೊಲೀಸರು ಹೇಳುವಂತೆ ಗಲಭೆಯಲ್ಲಿ ಕೆಲವು ಸಮಾಜ ಘಾತಕ ಶಕ್ತಿಗಳ ಕೈವಾಡವಿದೆ' ಎನ್ನುತ್ತಾರೆ ಪ್ರತಿಭಾ. [ಮಂಗಳವಾರ ಬೆಂಗಳೂರ ಶಾಂತಿ ಕದಡಿದವರು ಯಾರು?]

'ಗಾರ್ಮೆಂಟ್ಸ್ನಲ್ಲಿ ಕೆಲವು ಮಾಡುವ ಮಹಿಳೆಯರು ಮಾಸಿಕ 7000 ರೂ. ವೇತನ ಪಡೆಯುತ್ತಾರೆ. ಪ್ರತಿಭಟನೆ ನಡೆದ ದಿನ ಕೆಲಸಕ್ಕೆ ಹಾಜರಾಗಿರಲಿಲ್ಲ. ಒಂದು ದಿನದ ವೇತನವನ್ನು ಈ ತಿಂಗಳು ರದ್ದುಗೊಳಿಸುವ ಸಾಧ್ಯತೆ ಇದೆ' ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications