ಗಾರ್ಮೆಂಟ್ಸ್ ನೌಕರರ ನಿಜವಾದ ಸಮಸ್ಯೆ ಯಾರೂ ಕೇಳಲಿಲ್ಲ
ಬೆಂಗಳೂರು, ಏಪ್ರಿಲ್ 25 : ಕೇಂದ್ರ ಸರ್ಕಾರದ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ನೌಕರರು ಕಳೆದ ವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಗಲಭೆಗೆ ಕಾರಣವಾಯಿತು. ಆದರೆ, ಗಾರ್ಮೆಂಟ್ಸ್ ನೌಕರರ ನಿಜವಾದ ಸಮಸ್ಯೆ ಬಗ್ಗೆ ಯಾರೂ ಧ್ವನಿ ಎತ್ತಲಿಲ್ಲ.
ಸರ್ಕಾರ ಹೊಸ ಪಿಎಫ್ ನೀತಿಯನ್ನು ವಾಪಸ್ ಪಡೆಯಿತು. ಮಾಧ್ಯಮಗಳು ಪ್ರತಿಭಟನೆಯನ್ನು ಮರೆತವು. ಆದರೆ, ರಾಜ್ಯದಲ್ಲಿ ಸುಮಾರು 8 ಲಕ್ಷದಷ್ಟಿರುವ ಗಾರ್ಮೆಂಟ್ಸ್ ನೌಕರರ ಸಮಸ್ಯೆ ಬಗ್ಗೆ ಯಾರೂ ಗಮನಹರಿಸಿಲ್ಲ. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ಶೇ 85 ರಷ್ಟು ನೌಕರರು ಮಹಿಳೆಯರು. ಇವರ ಸಮಸ್ಯೆಯನ್ನೂ ಯಾರೂ ಕೇಳಲಿಲ್ಲ. [ಪಿಎಫ್ ಗಲಭೆ : ಲಾಭ ಎಲ್ಲರಿಗೆ, ನಷ್ಟ ಮಾತ್ರ ನೌಕರರಿಗೆ!]

ಕಡಿಮೆ ವೇತನ, ಹೆಚ್ಚು ಕೆಲಸ, ಲೈಂಗಿಕ ಕಿರುಕುಳ ಮುಂತಾದ ಸಮಸ್ಯೆಗಳನ್ನು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ಮಹಿಳೆಯರು ಎದುರಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ನಡೆದ ಗಲಭೆಗೆ ನೌಕರರನ್ನು ದೂರುವ ಜನರು ಅವರ ಸಮಸ್ಯೆಗಳತ್ತ ಗಮನ ಹರಿಸಲಿಲ್ಲ. [ಬೆಂಗಳೂರು : ಪ್ರತಿಭಟನೆ ಗಲಭೆ ಆಗಿದ್ದು ಹೇಗೆ?]
ಗಲಭೆಗೆ ನಾವು ಕಾರಣವಲ್ಲ : ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗಾರ್ಮೆಂಟ್ಸ್ ಮತ್ತು ಟೆಕ್ಸ್ಟೈಲ್ಸ್ ನೌಕರರ ಸಂಘದ ಅಧ್ಯಕ್ಷೆ ಪ್ರತಿಭಾ ಅವರು, 'ನೌಕರರ ಪ್ರತಿಭಟನೆ ವೇಳೆ ನಡೆದ ಗಲಭೆಗೆ ನಾವು ಕಾರಣರಲ್ಲ' ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. [ಪಿಎಫ್ ವಿಥ್ ಡ್ರಾ ನಿಯಮಕ್ಕೆ ಜುಲೈ 31ರ ತನಕ ಬ್ರೇಕ್]
'ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ನೌಕರರು ಪ್ರತಿದಿನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ವಾರ ನಡೆದ ಪ್ರತಿಭಟನೆಯಲ್ಲಿ ಅದರ ಅಕ್ರೋಶವೂ ಇತ್ತು. ಪೊಲೀಸರು ಹೇಳುವಂತೆ ಗಲಭೆಯಲ್ಲಿ ಕೆಲವು ಸಮಾಜ ಘಾತಕ ಶಕ್ತಿಗಳ ಕೈವಾಡವಿದೆ' ಎನ್ನುತ್ತಾರೆ ಪ್ರತಿಭಾ. [ಮಂಗಳವಾರ ಬೆಂಗಳೂರ ಶಾಂತಿ ಕದಡಿದವರು ಯಾರು?]

'ಗಾರ್ಮೆಂಟ್ಸ್ನಲ್ಲಿ ಕೆಲವು ಮಾಡುವ ಮಹಿಳೆಯರು ಮಾಸಿಕ 7000 ರೂ. ವೇತನ ಪಡೆಯುತ್ತಾರೆ. ಪ್ರತಿಭಟನೆ ನಡೆದ ದಿನ ಕೆಲಸಕ್ಕೆ ಹಾಜರಾಗಿರಲಿಲ್ಲ. ಒಂದು ದಿನದ ವೇತನವನ್ನು ಈ ತಿಂಗಳು ರದ್ದುಗೊಳಿಸುವ ಸಾಧ್ಯತೆ ಇದೆ' ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications