Breaking; ಬೆಂಗಳೂರು, ಲಾಲ್ಬಾಗ್ನಲ್ಲಿ ಕ್ಯಾಮರಾ ನಿಷೇಧ
ಬೆಂಗಳೂರು, ಏಪ್ರಿಲ್ 21; ಉದ್ಯಾನ ನಗರಿ ಬೆಂಗಳೂರಿನ ಲಾಲ್ಬಾಗ್ನಲ್ಲಿ ಡಿಜಿಟಲ್ ಕ್ಯಾಮರಾ ನಿಷೇಧ ಮಾಡಲಾಗಿದೆ. ಕಳೆದವಾರ ಜೋಡಿಯೊಂದು ಕ್ಯಾಮರಾ ತೆಗೆದುಕೊಂಡು ಹೋಗಿ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿತ್ತು, 500 ರೂ. ದಂಡ ಕಟ್ಟಿದ್ದರು.
ಲಾಲ್ಬಾಗ್ನಲ್ಲಿ ಡಿಜಿಟಲ್ ಕ್ಯಾಮರಾ ನಿಷೇಧ ಮಾಡುವ ಪ್ರಸ್ತಾವನೆಯನ್ನು ಸಲಹಾ ಸಮಿತಿ ಮುಂದೆ ತರಲಾಗಿತ್ತು. ಸಮಿತಿ ಒಪ್ಪಿಗೆ ನೀಡಿದ ಮೇಲೆ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ.

ಡಿಜಿಟಲ್ ಕ್ಯಾಮರಾವನ್ನು ಲಾಲ್ಬಾಗ್ ಒಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ 500 ರೂ. ದಂಡ ವಿಧಿಸಲಾಗುತ್ತದೆ.
ಲಾಲ್ಬಾಗ್ ಒಳಗೆ ಡಿಜಿಟಲ್ ಕ್ಯಾಮರಾ ಬಳಕೆಯಿಂದ ಹಕ್ಕಿಗಳಿಗೆ ಮತ್ತು ಜೇನುಗಳಿಗೆ ಸಮಸ್ಯೆಯಾಗುತ್ತಿದೆ. ಕ್ಯಾಮರಾ ಫ್ಲಾಷ್ನಿಂದಾಗಿ ಜೇನು ಹುಳುಗಳು ಎದ್ದು ದಾಳಿ ನಡೆಸುವ ಸಾಧ್ಯತೆ ಇದೆ. 2015 ಮತ್ತು 2016ರಲ್ಲಿ ಉದ್ಯಾನದಲ್ಲಿ ಜೇನು ದಾಳಿ ನಡೆಸಿದ ಪ್ರಕರಣಗಳು ನಡೆದಿದ್ದವು.
ತೋಟಗಾರಿಕಾ ಇಲಾಖೆ ಅಧಿಕಾರಿಯೊಬ್ಬರು ಈ ಕುರಿತು ಮಾತನಾಡಿದ್ದು, ಹಲವಾರು ವರ್ಷಗಳಿಂದ ಡಿಜಿಟಲ್ ಕ್ಯಾಮರಾ ನಿಷೇಧ ಮಾಡಬೇಕು ಎಂಬ ಪ್ರಸ್ತಾವನೆ ಇತ್ತು. ಲಾಲ್ಬಾಗ್ ಒಳಗೆ ಕ್ಯಾಮರಾ ಬಳಕೆ ಮಾಡುವು ಜೊತೆಗೆ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಸೇರಿದಂತೆ ಇತರ ಫೋಟೋ ಶೂಟ್ ನಡೆಯುವ ಕುರಿತು ದೂರುಗಳು ಬಂದಿದ್ದವರು ಎಂದು ಹೇಳಿದ್ದಾರೆ.
ಲಾಲ್ಬಾಗ್ ನಿರ್ವಹಣೆ ನೋಡಿಕೊಳ್ಳುವ ತೋಟಗಾರಿಕಾ ಇಲಾಖೆ ಉದ್ಯಾನದವೊಳಗೆ ಪ್ರೊಫೆಷನಲ್ ಕ್ಯಾಮರಾ ಮತ್ತು ಫೋಟೋ ಶೂಟ್ ನಿಷೇಧಿಸಿತ್ತು. ಆದರೆ ಆಗಮಿಸುವ ಜನರು ಡಿಜಿಟಲ್ ಕ್ಯಾಮರಾ ತೆಗೆದುಕೊಂಡು ಹೋಗುತ್ತಿದ್ದರು. ಈಗ ಆ ಕ್ಯಾಮರಾವನ್ನು ಸಹ ನಿಷೇಧಿಸಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications