ಡಿಜಿಟಲ್ ಇಂಡಿಯಾ ನಮ್ಮ ಜೀವನದ ಭಾಗವಾಗಿ ಬದಲಾಗಿದೆ, ಆಡಳಿತದ ಮಾದರಿಯಾಗಿದೆ: ನರೇಂದ್ರ ಮೋದಿ
ನವದೆಹಲಿ, ನವೆಂಬರ್ 19: ಭಾರತದಲ್ಲಿ ಡಿಜಿಟಲ್ ಇಂಡಿಯಾದ ಕ್ರಾಂತಿಯಿಂದಾಗಿ ನಮ್ಮ ಜೀವನದ ಭಾಗವಾಗಿ ಬದಲಾವಣೆಯಾಗಿದ್ದು, ಭೀಮ್ ಯುಪಿಐ ಸೇರಿದಂತೆ ಪಾವತಿ ಆ್ಯಪ್ಗಳು ಅದಕ್ಕೆ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
'ಬೆಂಗಳೂರು ಟೆಕ್ ಸಮ್ಮಿಟ್-2020'ನ್ನು ಡಿಜಿಟಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಇಂದು ನಾವು ಮಾಹಿತಿ ಯುಗದ ಮಧ್ಯಭಾಗದಲ್ಲಿದ್ದೇವೆ. ಈ ಯುಗದಲ್ಲಿ ಯಾರು ಮೊದಲು ಹೆಜ್ಜೆಯಿಡುತ್ತಾರೆ ಎಂಬುದು ಮುಖ್ಯವಲ್ಲ. ಯಾರು ಉತ್ತಮವಾಗಿ ಮುಂದಡಿ ಇರುತ್ತಾರೆ ಎಂಬುದು ಮುಖ್ಯ ಎಂದಿದ್ದಾರೆ.
ವರ್ಕ್ ಫ್ರಮ್ ಹೋಮ್ ಕುರಿತು ಮಾತನಾಡಿದ ಪ್ರಧಾನಿ, ಟೆಕ್ನಾಲಜಿ ಎಷ್ಟರ ಮಟ್ಟಿಗೆ ಸಹಕಾರಿ ಎಂಬುದಕ್ಕೆ ಉದಾಹರಣೆಯಾಗಿದೆ ಎಂದಿದ್ದಾರೆ. ಕುಳಿತಲ್ಲಿಯೇ ನಾನು ವಿಶ್ವದ ಬುದ್ದಿಶಾಲಿ ಟೆಕ್ ಜನರನ್ನು ಭೇಟಿಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಟೆಕ್ ಸಲಕರಣೆಗಳು ಜನರಿಗೆ ಮತ್ತಷ್ಟು ಅನುಕೂಲವನ್ನುಂಟು ಮಾಡಲಿವೆ.

ಕೈಗಾರಿಕಾ ಯುಗದಲ್ಲಿ ವಿಸ್ತರಣೆ ಗಡಿ ಸೀಮಿತವಾಗಿತ್ತು. ಆದರೆ ಮಾಹಿತಿ ಯುಗವು ಗಡಿಯನ್ನೂ ಮೀರಿದ್ದು, ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುತ್ತಿದೆ. ನಾವು ಬುದ್ದಿಶಾಲಿ ಜನರನ್ನು ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ತಲುಪಲಿದ್ದೇವೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೈಬರ್ ಭದ್ರತಾ ಪರಿಹಾರಗಳನ್ನು ಅಭಿವೃದ್ಧಿಪಡಿಸುವಲ್ಲಿ ದೇಶದ ಯುವಜನತೆ ಪ್ರಮುಖ ಪಾತ್ರ ವಹಿಸುತ್ತಾರೆ. ಈ ವಿಷಯದಲ್ಲಿ ಯುವಜನತೆಯ ಸಾಮರ್ಥ್ಯ, ಪ್ರತಿಭೆ, ಅವರಿಗೆ ಸಿಗುವ ಅವಕಾಶಕ್ಕೆ ಕೊನೆಯೇ ಇಲ್ಲ, ಅಸಾಧಾರಣವಾದ ಯುವಶಕ್ತಿಯನ್ನು ನಾವು ಬಳಸಿಕೊಳ್ಳಬೇಕು ಎಂದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications