ಮಧ್ಯಪ್ರದೇಶದ ಶಾಸಕರಿರುವ ರೆಸಾರ್ಟ್ ಎದುರು ದಿಗ್ವಿಜಯ್ ಸಿಂಗ್ ಧರಣಿ: ಬಂಧನ
ಬೆಂಗಳೂರು, ಮಾರ್ಚ್ 18: ಮಧ್ಯಪ್ರದೇಶ ಸರ್ಕಾರದ ಹೈಡ್ರಾಮಾ ಕರ್ನಾಟಕದಲ್ಲಿ ಮುಂದುವರೆದಿದೆ.
ಬೆಂಗಳೂರಿನ ರೆಸಾರ್ಟ್ನಲ್ಲಿರುವ ಮಧ್ಯಪ್ರದೇಶದ ಕಾಂಗ್ರೆಸ್ ಶಾಕರನ್ನು ಕರೆತರಲು ಕಾಂಗ್ರೆಸ್ ಸಾಕಷ್ಟು ಪ್ರಯತ್ನ ಪಡುತ್ತಿದೆ. ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಮಧ್ಯಪ್ರದೇಶದ ಶಾಸಕರು ತಂಗಿರುವ ರೆಸಾರ್ಟ್ ಮುಂದೆ ಧರಣಿಗೆ ಕುಳಿತಿದ್ದಾರೆ. ದಿಗ್ವಿಜಯ್ ಸಿಂಗ್ ನಡೆಸುತ್ತಿರುವ ಧರಣಿಗೆ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ.
ಅವರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು. ಅಲ್ಲಿ ಕೆಲ ಹೊತ್ತು ಮಾತುಕತೆ ನಡೆಸಿ ಇಂದು ಬೆಳಗ್ಗೆ ನೇರವಾಗಿ ಯಲಹಂಕದ ರಮಡ ರೆಸಾರ್ಟ್ ಬಳಿ ತೆರಳಿದರು.
ಧರಣಿ ನಿರತ ಕಾಂಗ್ರೆಸ್ ನಾಯಕರನ್ನು ಅಲ್ಲಿಂದ ಕಳುಹಿಸಲು ಪೊಲೀಸರು ಶತಪ್ರಯತ್ನ ಮಾಡಿದರು. ಆದರೆ ನಾಯಕರು ಜಪ್ಪೆಂದರೂ ಸ್ಥಳ ಬಿಟ್ಟು ಕದಲಲು ಸಿದ್ಧರಿರಲಿಲ್ಲ. ಸ್ಥಳದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನರು ಸೇರಿ ಟ್ರಾಫಿಕ್ ಜಾಮ್ ಉಂಟಾಯಿತು.

21 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರು
ಮಧ್ಯ ಪ್ರದೇಶದ 21 ಜನ ಬಂಡಾಯ ಕಾಂಗ್ರೆಸ್ ಶಾಸಕರಲ್ಲಿ ಹಲವರು ಕಳೆದ ಹಲವು ದಿನಗಳಿಂದ ಬೆಂಗಳೂರಿನ ಯಲಹಂಕ ಬಳಿಯ ರಮಡ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದಾರೆ. ಕರ್ನಾಟಕದ ಬಿಜೆಪಿ ನಾಯಕರ ರಕ್ಷಣೆಯಲ್ಲಿ ಪೊಲೀಸ್ ಭದ್ರತೆಯೊಂದಿಗೆ ಅವರನ್ನು ಕೂಡಿಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕರು ಇಷ್ಟು ದಿನ ಆರೋಪಿಸುತ್ತಲೇ ಬಂದಿದ್ದರು.

ಮಧ್ಯಪ್ರದೇಶ ಸರ್ಕಾರದ ಬಿಕ್ಕಟ್ಟು ಹಾಗೆಯೇ ಇದೆ
ಮಧ್ಯ ಪ್ರದೇಶದ ಸರ್ಕಾರದ ಬಿಕ್ಕಟ್ಟು ಮುಂದುವರಿದೇ ಇದೆ. ಇದಕ್ಕೆ ಇತಿಶ್ರೀ ಹಾಡಿ ಬಂಡಾಯ ಶಾಸಕರ ಮನವೊಲಿಸಿ ಅಲ್ಲಿಗೆ ವಾಪಸ್ ಕರೆದುಕೊಂಡು ಹೋಗಬೇಕೆಂದು ಕಳೆದ ತಡರಾತ್ರಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಬೆಂಗಳೂರಿಗೆ ಬಂದಿದ್ದಾರೆ.

ಜನರಿಗೆ ಸಂಚಾರ ದಟ್ಟಣೆ ಬಿಸಿ
ಬೆಳ್ಳಂಬೆಳಗ್ಗೆ ಆ ಹಾದಿಯಲ್ಲಿ ಓಡಾಡುವ ಜನರಿಗೆ ಸಂಚಾರ ದಟ್ಟಣೆ ಬಿಸಿ ತಟ್ಟಿತು. ಪೊಲೀಸರು ಕಾಂಗ್ರೆಸ್ ನಾಯಕರನ್ನು ಬಲವಂತವಾಗಿ ಪೊಲೀಸ್ ವಾಹನದಲ್ಲಿ ಕೂರಿಸಿ ಅಮೃತಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ದರು. ಪೊಲೀಸರು ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ರಮಾಡಾ ರೆಸಾರ್ಟ್ ಮುಂದೆ ದಿಗ್ವಿಜಯ್ ಸಿಂಗ್ ಧರಣಿ
ಬೆಂಗಳೂರು ಹೊರವಲಯದಲ್ಲಿರುವ ರಮಾಡ ರೆಸಾರ್ಟ್ ಮುಂದೆ ಹೈ ಡ್ರಾಮಾ ನಡೆಯುತ್ತಿದೆ. ನಮ್ಮ ಶಾಸಕರನ್ನು ಬಲವಂತವಾಗಿ ಇರಿಸಲಾಗಿದೆ.
ಅವರ ಭೇಟಿಗೆ ಅವಕಾಶ ಕಲ್ಪಿಸಬೇಕೆಂದು ದಿಗ್ವಿಜಯ್ ಸಿಂಗ್ ಪಟ್ಟು ಹಿಡಿದು ರೆಸಾರ್ಟ್ ಮುಂದಿನ ರಸ್ತೆಯಲ್ಲಿ ಕುಳಿತು ಧರಣಿಗೆ ಮುಂದಾಗಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications