Caste Survey: ಸಮೀಕ್ಷೆಯಿಂದ ಮತಾಂತರ! ಪ್ರಹ್ಲಾದ್ ಜೋಶಿಗೆ ಆರೋಗ್ಯ ಸಚಿವರ ತಿರುಗೇಟು
ಬೆಂಗಳೂರು, ಅಕ್ಟೋಬರ್ 06: ಕರ್ನಾಟಕ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಿದೆ. ಈ ಸಮೀಕ್ಷೆ ಹಿಂದೂಗಳ ಮತಾಂತರಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಆರೋಪಿಸಿದ್ದರು. ಈ ವಿಚಾರವಾಗಿ ಸಚಿವರಾದ ಪ್ರಿಯಾಂಕ್ ಖರ್ಗೆ ಬೆನ್ನಲ್ಲೆ ದಿನೇಶ್ ಗುಂಡೂರಾವ್ ಅವರು ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆಯಿಂದ ಮತಾಂತರಕ್ಕೆ ಪ್ರೋತ್ಸಾಹ ಸಿಗಲಿದೆ ಎಂದಿದ್ದು, ಅದ್ಹೇಗೆ ಮತಾಂತರಕ್ಕೆ ಪ್ರೋತ್ಸಾಹ ನೀಡಲಿದೆ? ಎಂದು ಜೋಶಿಯವರಂತಹ ಬೃಹಸ್ಪತಿಗಳೇ ಸ್ಪಷ್ಟಪಡಿಸಬೇಕು. ಈ ರೀತಿಯ ಅತಾರ್ಕಿಕ ಚಿಂತನೆಗಳು ಬಿಜೆಪಿಯವರ ತಲೆಯಲ್ಲಿ ಹೇಗೆ ಹುಟ್ಟಿಕೊಳ್ಳುತ್ತವೋ ಆ ದೇವರೆ ಬಲ್ಲ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವುದು ಜಾತಿ ಗಣತಿಯಲ್ಲ. ಬದಲಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ. ಈ ಸಮೀಕ್ಷೆಯಿಂದ ರಾಜ್ಯದ ಜನರ ವಸ್ತುಸ್ಥಿತಿ ತಿಳಿಯಲಿದೆ. ಇದಕ್ಯಾಕೆ ಬಿಕೆಪಿಯವರ ವಿರೋಧ.? ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಯನ್ನು ವಿರೋಧಿಸುವ ಬಿಜೆಪಿಯವರು ಮುಂದಿನ ವರ್ಷದಿಂದ ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿಯನ್ನು ವಿರೋಧಿಸಲಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಸಚಿವರಾಗಿರುವ ಜೋಶಿಯವರು ಪ್ರಾರಂಭದಿಂದಲೂ ಸಮೀಕ್ಷೆಯ ಬಗ್ಗೆ ಜನರಲ್ಲಿ ಪೂರ್ವಗ್ರಹ ಬಿತ್ತುತ್ತಿದ್ದಾರೆ. ಜೋಶಿಯವರು ರಾಜ್ಯದ ಸಮೀಕ್ಷೆಯನ್ನು ವಿರೋಧಿಸುವಂತೆ ಕೇಂದ್ರದ ಜಾತಿ ಗಣತಿಯನ್ನೂ ವಿರೋಧಿಸಿ ತಮ್ಮದು ಇಬ್ಬಂದಿ ನಿಲುವಲ್ಲ ಎಂದು ಪ್ರದರ್ಶಿಸಲಿ. ಈ ತಾಕತ್ತು ಜೋಶಿಯವರಿಗಿದೆಯೆ.? ಎಂದು ಅವರು ತಿರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ರಿಯಾಕ್ಷನ್
ಇತ್ತೀಚೆಗೆ ಇದೇ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ನಿಮ್ಮ ಪಕ್ಷದ ನಾಯಕರು ಕುಟುಂಬ ಸಮೇತರಾಗಿ ಮತಾಂತರವಾಗಿದ್ದಾರೆ ಎಂದು ನಿಮ್ಮದೇ ಪಕ್ಷದವರು ತಿಳಿಸಿದ್ದರು. ಇವರ ಮತಾಂತರಕ್ಕೆ ಪ್ರೇರಣೆ ಯಾವುದು?. ನಿಮ್ಮ ಪಕ್ಷದವರಿಗಾಗಿ ಘರ್ ವಾಪಸಿ ಕಾರ್ಯಕ್ರಮ ಹಮ್ಮಿಕೊಳ್ಳುವಿರಾ?. ಸಮೀಕ್ಷೆಯಿಂದ ಮತಾಂತರವಾಗುತ್ತಾರೆ ಎಂದಾದರೆ, ನಿಮ್ಮ ಪ್ರಕಾರ, ಹಿಂದೂ ಧರ್ಮ ಅಷ್ಟು ದುರ್ಬಲವೇ ಎಂದು ಖರ್ಗೆ ಪ್ರಶ್ನಿಸಿದರು. ಜನರಿಗೆ ಬೇಕಿರುವುದು ಮ್ಯಾಜಿಕ್ ಮಾತುಗಳಲ್ಲ, ಲಾಜಿಕ್ ಮಾತುಗಳು ಎಂದು ಕೇಂದ್ರ ಸಚಿವರ ವಿರುದ್ಧ ಕಿಡಿ ಕಾರಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications