ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಬಿಜೆಪಿ ಧರ್ಮ ಮತ್ತು ಜಾತಿ ಆಧಾರದ ಮೇಲೆ ದೇಶವನ್ನು ಒಡೆಯುತ್ತಿದೆ'

|
Google Oneindia Kannada News

ಬೆಂಗಳೂರು, ಏಪ್ರಿಲ್ 8: 70 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕೈಯಲ್ಲಿ ದೇಶ ಸುರಕ್ಷಿತವಾಗಿಯೇ ಇತ್ತು. 5 ವರ್ಷಗಳಲ್ಲಿ ತಾವು ಮಾಡಿರುವ ಸಾಧನೆಗಳ ಬಗ್ಗೆ ಹೇಳದೆ ಧರ್ಮದ ಆಧಾರದ ಮೇಲೆ ಮತ ಕೇಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಬಿಜೆಪಿ ಪಕ್ಷದ ದೇಶವನ್ನು ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಒಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಅವರ ಪರ ಇಂದು ಪದ್ಮನಾಭನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ನಂತರ ಮಾತನಾಡಿದರು.

ಕೋಮುವಾದಿ ಶಕ್ತಿಗಳನ್ನು ತಿರಸ್ಕರಿಸಿ: ಬಿ ಕೆ ಹರಿಪ್ರಸಾದ್ಕೋಮುವಾದಿ ಶಕ್ತಿಗಳನ್ನು ತಿರಸ್ಕರಿಸಿ: ಬಿ ಕೆ ಹರಿಪ್ರಸಾದ್

ಕಾಂಗ್ರೆಸ್ ಪಕ್ಷ ಯಾವತ್ತೂ ಕೂಡಾ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ತಾರತಮ್ಯ ಮಾಡಿಲ್ಲ. ನರೆಂದ್ರ ಮೋದಿ ಅವರು 5 ವರ್ಷಗಳ ಸಾಧನೆಯನ್ನು ಹೇಳುವುದೇ ಇಲ್ಲ. ಕೇವಲ ಧರ್ಮದ ಆಧಾರದ ಮೇಲೆ ಮತದ ಕೇಳುತ್ತಿದ್ದಾರೆ.

ಇಂಡಿಯಾ ಟಿವಿ ಸಮೀಕ್ಷೆ: ಮ್ಯಾಜಿಕ್ ನಂಬರ್ 272 ದಾಟಲಿದೆ ಎನ್ಡಿಎ ಇಂಡಿಯಾ ಟಿವಿ ಸಮೀಕ್ಷೆ: ಮ್ಯಾಜಿಕ್ ನಂಬರ್ 272 ದಾಟಲಿದೆ ಎನ್ಡಿಎ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಮಾತನಾಡಿ, ದೇಶದ ಅಭಿವೃದ್ದಿ ಹಾಗೂ ರಾಜ್ಯದ ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಬೇಕಾಗಿದೆ ಎಂದರು.

ಕಾಂಗ್ರೆಸ್ ಬೆಂಗಳೂರಿಗೆ ಹಲವಾರು ಕೊಡುಗೆ ನೀಡಿದೆ

ಕಾಂಗ್ರೆಸ್ ಬೆಂಗಳೂರಿಗೆ ಹಲವಾರು ಕೊಡುಗೆ ನೀಡಿದೆ

ನೆಹರೂ ಕಾಲದಿಂದಲೂ ಕಾಂಗ್ರೆಸ್ ಬೆಂಗಳೂರು ನಗರಕ್ಕೆ ಹಲವಾರು ಕೊಡುಗೆಗಳನ್ನು ನೀಡಿದೆ. ಹೆಚ್ ಎ ಎಲ್, ಬಿ ಹೆಚ್ ಇ ಎಲ್ ನಂತಹ ಸಾರ್ವಜನಿಕ ಉದ್ದಿಮೆಗಳನ್ನು ಇಲ್ಲಿ ಪ್ರಾರಂಭಿಸಿದೆ. ನಗರದ ಅಭಿವೃದ್ದಿಯಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಹಿರಿದಾಗಿದೆ. ಈ ಬಾರಿ ಬೆಂಗಳೂರು ದಕ್ಷಿಣದಲ್ಲಿ ಹಿರಿಯ ಮುತ್ಸದ್ದಿ ನಾಯಕ ಹರಿಪ್ರಸಾದ್ ಕಣದಲ್ಲಿದ್ದಾರೆ. ನಗರದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ನಿಶ್ಚಿತ ಎಂದು ದಿನೇಶ್ ಗುಂಡೂರಾವ್ ಹೇಳಿದರು.

70 ವರ್ಷಗಳಿಂದ ದೇಶ ಸುರಕ್ಷಿತವಾಗಿಲ್ಲವೇ

70 ವರ್ಷಗಳಿಂದ ದೇಶ ಸುರಕ್ಷಿತವಾಗಿಲ್ಲವೇ

70 ವರ್ಷಗಳಿಂದ ದೇಶ ಸುರಕ್ಷಿತವಾಗಿಲ್ಲವೇ ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ದೇಶವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಭಾಷಣಗಳಲ್ಲೂ ಪಾಕಿಸ್ಥಾನದ ಬಗ್ಗೆಯೇ ಪ್ರಸ್ತಾಪಿಸುತ್ತಿದ್ದಾರೆ. ಭಾರತದಲ್ಲಿ ಚುನಾವಣೆ ನಡೆಯುತ್ತಿದ್ದೆಯೇ ಅಥವಾ ಪಾಕಿಸ್ತಾನದಲ್ಲಿ ಚುನಾವಣೆ ನಡೆಯುತ್ತಿದೆಯೋ ಗೊತ್ತಾಗುತ್ತಿಲ್ಲ ಎಂದರು.

ಬಿ ಕೆ ಹರಿಪ್ರಸಾದ್ ಮಾತನಾಡಿ

ಬಿ ಕೆ ಹರಿಪ್ರಸಾದ್ ಮಾತನಾಡಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಮಾತನಾಡಿ, ದೇಶದ ಅಭಿವೃದ್ದಿ ಹಾಗೂ ರಾಜ್ಯದ ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಬೇಕಾಗಿದೆ. ಕ್ಷೇತ್ರದಾದ್ಯಂತ ಒಳ್ಳೆಯ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಕೊಡುಗೆಗಳ ಆಧಾರದ ಮೇಲೆ ಜನ ಮತ ನೀಡಲಿದ್ದಾರೆ ಎಂದರು.

ಕೋಮುವಾದಿ ಶಕ್ತಿಗಳನ್ನು ತಿರಸ್ಕರಿಸಿ

ಕೋಮುವಾದಿ ಶಕ್ತಿಗಳನ್ನು ತಿರಸ್ಕರಿಸಿ

ಬಿಟಿಎಂ ಲೇಔಟ್ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿಂದು ಬಿರುಸಿನ ಪ್ರಚಾರ ನಡೆಸಿದ ಅವರು ಭರ್ಜರಿ ರೋಡ್ ಶೋ ನಡೆಸಿದರು. ಮಾಜಿ ಗೃಹ ಸಚಿವ ಹಾಗೂ ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯರೆಡ್ಡಿ ಅವರ ಜೊತೆಯಲ್ಲಿ ಬಿರುಸಿನ ರೊಡ್ ಶೋ ನಡೆಸಿ ಮಾತನಾಡಿದ ಬಿಕೆ ಹರಿಪ್ರಸಾದ್, ಕೇವಲ ಧರ್ಮದ ಆಧಾರದ ಮೇಲೆ ಮತ ಕೇಳುತ್ತಿರುವ ಬಿಜೆಪಿ ದೇಶಕ್ಕೆ ತಾನು ಮಾಡಿರುವ ಹಾನಿಗಳನ್ನು ಮರೆಮಾಚುತ್ತಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Elections 2019: Today KPCC President Dinesh Gundurao participated in the Road show at Padmanabha Nagar. Bangalore South Constituency congress candidate B.K Hariprasad, Farmer Minister Motamma were present on the occasion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X