Induastry: ರೈತರಿಂದ ನೇರ ಭೂಮಿ ಖರೀದಿ, ಹೆಚ್ಚುವರಿ ಪರಿಹಾರದ ಪ್ರಮೇಯವಿಲ್ಲ: ಎಂಬಿ ಪಾಟೀಲ್
ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯಾದ ಕಲಬುರಗಿಯ ಸೇಡಂ ತಾಲ್ಲೂಕಿನಲ್ಲಿ ರಾಜಶ್ರೀ ಸಿಮೆಂಟ್ಸ್ ಕಂಪನಿಗೆ ಸಿಮೆಂಟ್ ಕಾರ್ಖಾನೆ ಸ್ಥಾಪನೆಗೆ 573 ಎಕರೆ ಮತ್ತು ಗಣಿಗಾರಿಕೆಗೆಂದು 398.23 ಎಕರೆ ಜಮೀನನ್ನು ರೈತರಿಂದ ನೇರವಾಗಿ ಖರೀದಿಸಲು 2010ರಲ್ಲೇ ಅನುಮೋದನೆ ನೀಡಲಾಗಿತ್ತು. ಹೀಗಾಗಿ, ಈಗ ಸಂತ್ರಸ್ತ ರೈತರಿಗೆ ಹೆಚ್ಚಿನ ಪರಿಹಾರ ಕೊಡಬೇಕೆಂದು ಆಗ್ರಹಿಸುವುದು ಸರಿಯಲ್ಲ ಮತ್ತು ಇದರಲ್ಲಿ ಸರ್ಕಾರದ ಪಾತ್ರವೂ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.
ನೆನ್ನೆಯಿಂದ ವಿಧಾನ ಪರಿಷತ್ ಅಧಿವೇಶನ ನಡೆಯುತ್ತಿದೆ. ಈ ವೇಳೆ ವಿಧಾನಪರಿಷತ್ ಸದಸ್ಯ ಡಾ.ತಳವಾರ್ ಸಾಬಣ್ಣ ಅವರು ಮಂಗಳವಾರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಸೇಡಂ ತಾಲ್ಲೂಕಿನ ಹಂಗನಹಳ್ಳಿ ಊಡಗಿ, ಹುಡಾ(ಬಿ) ಮತ್ತು ನೃಪತುಂಗ ನಗರಗಳಲ್ಲಿ ರಾಜಶ್ರೀ ಸಿಮೆಂಟ್ಸ್ ಭೂಮಿ ಕೇಳಿತ್ತು. ಅದರ ಮನವಿಯನ್ನು ಪರಿಗಣಿಸಿ 2010ರ ನ.27ರಂದು ಮತ್ತು 2011ರ ಜ.25ರಂದು ಸರ್ಕಾರ 1961ರ ಭೂ ಸುಧಾರಣೆ ಕಾಯ್ದೆಯಡಿ ಅನುಮೋದನೆ ನೀಡಿತ್ತು.

ಇದರ ನಂತರ ಕಂಪನಿಯು ಭೂ ಖರೀದಿಗೆ ಸಂಬಂಧಿಸಿದಂತೆ ರೈತರೊಂದಿಗೆ ನೇರ ಒಪ್ಪಂದ ಮಾಡಿಕೊಂಡಿತ್ತು. ಆಗ ಎಕರೆಗೆ 70 ಸಾವಿರ ರೂ. ಬೆಲೆ ಇತ್ತು. ಅಂತಹ ಸಂದರ್ಭದಲ್ಲಿ ಕಂಪನಿಯು 921 ಎಕರೆ ಖರೀದಿಸಿದ್ದು, ಪ್ರತೀ ಎಕರೆಗೆ 3.50 ಲಕ್ಷ ರೂ. ಪರಿಹಾರಧನ ನೀಡಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂತ್ರಸ್ತ ರೈತರು, ತಮ್ಮ ಕುಟುಂಬಗಳ ತಲಾ ಒಬ್ಬರಿಗೆ ಕಾರ್ಖಾನೆಯಲ್ಲಿ ಕೆಲಸ ಕೊಡಬೇಕೆಂಬ ಆಗ್ರಹ ಮುಂದಿಟ್ಟಿದ್ದರು. ಆಗ ಕಾರ್ಖಾನೆಯು ಉದ್ಯೋಗದ ಬದಲು ಎಕರೆಗೆ ತಲಾ 2.75 ಲಕ್ಷ ರೂ. ಹೆಚ್ಚುವರಿ ಹಣವನ್ನೇ ನೀಡಿತು. ಇದಾದ ಮೇಲೂ ಕೆಲವು ರೈತರು ಮತ್ತೂ ಹೆಚ್ಚಿನ ಪರಿಹಾರಕ್ಕಾಗಿ ಒತ್ತಾಯಿಸಿದರು. ಆಗ ಕಾರ್ಖಾನೆಯು ಎಲ್ಲ ಸಂತ್ರಸ್ತ ರೈತರಿಗೂ ಪುನಃ ಹೆಚ್ಚುವರಿಯಾಗಿ ಎಕರೆಗೆ 1.75 ಲಕ್ಷ ರೂ. ಕೊಟ್ಟಿದೆ. ಅಂದರೆ, ಒಟ್ಟಾರೆಯಾಗಿ ಅದು ಒಂದು ಎಕರೆಗೆ ತಲಾ 8 ಲಕ್ಷ ರೂ. ಮೊತ್ತವನ್ನು ಪರಿಹಾರವಾಗಿ ನೀಡಿದೆ ಎಂದು ಅವರು ವಿವರಿಸಿದರು.
ಕಂಪನಿ ಮತ್ತು ರೈತರ ನಡುವೆಯೇ ಒಪ್ಪಂದವಾಗಿದ್ದರಿಂದ ಇದರಲ್ಲಿ 1961ರ ಭೂ ಸುಧಾರಣಾ ಕಾಯ್ದೆ ಅನ್ವಯಿಸುವುದಿಲ್ಲ. ಈ ವರ್ಷದ ಮಾರ್ಚ್ವರೆಗಿನ ಅಂಕಿಅಂಶಗಳ ಪ್ರಕಾರ, ಈ ಕಂಪನಿಯು ಒಟ್ಟು 1,345 ಸ್ಥಳೀಯರಿಗೆ ಉದ್ಯೋಗ ನೀಡಲಾಗಿದೆ. ಇದು ಒಟ್ಟು ಉದ್ಯೋಗಿಗಳ ಸಂಖ್ಯೆಯಲ್ಲಿ ಶೇಕಡ 80ಕ್ಕಿಂತ ಹೆಚ್ಚಾಗಿದೆ ಎಂದು ಸಚಿವರು ಹೇಳಿದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications