ದೀಪಾವಳಿ ಸಂಭ್ರಮ; ಕಣ್ಣಿನ ಸುರಕ್ಷತೆ ಬಗ್ಗೆ ಗಮನ ಹರಿಸಿ
ಬೆಂಗಳೂರು, ಅಕ್ಟೋಬರ್ 28 : ದೀಪಾವಳಿ ಸಂದರ್ಭದಲ್ಲಿ ಕಣ್ಣಿನ ಸುರಕ್ಷತೆ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ನಾರಾಯಣ ನೇತ್ರಾಲಯ ಮನವಿ ಮಾಡಿದೆ. ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಜೊತೆಯಲ್ಲಿ ಇರುವಂತೆ ಸೂಚಿಸಿದೆ.
ಕಳೆದ ವರ್ಷದ ದೀಪಾವಳಿ ಹಬ್ಬದಲ್ಲಿ ನಾರಾಯಣ ನೇತ್ರಾಲಯ ಶೇ 40ರಷ್ಟು ಪಟಾಕಿಯಿಂದ ಕಣ್ಣಿಗೆ ಗಾಯಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಕಣ್ಣು ಸೂಕ್ಷ್ಮವಾದ ಅಂಗವಾಗಿದ್ದು, ಅದಕ್ಕೆ ಸಣ್ಣ ಪೆಟ್ಟು ಬಿದ್ದರೂ ಕೂಡಾ ಗಂಭೀರ ಹಾನಿಯಾಗುತ್ತದೆ ಎಂದು ಹೇಳಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಮ್ಮ ಕಣ್ಣಿನ ಸುರಕ್ಷತೆ ಬಗ್ಗೆ ಎಚ್ಚರ ವಹಿಸುವುದು ಬಹುಮುಖ್ಯ ಎಂದು ತಿಳಿಸಿದೆ. ಪಟಾಕಿ ಹಚ್ಚುವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ನೇತ್ರಾಲಯ ಪಟ್ಟಿ ಮಾಡಿದೆ.

* ದೃಡಿಕರಿಸಲಾರದ ಹಾಗೂ ಐಎಸ್ಓದಿಂದ ಅನುಮೋದನೆ ಪಡೆಯದ ಪಟಾಕಿಗಳನ್ನು ಸಿಡಿಸಬೇಡಿ
* ಮಕ್ಕಳು ಹಿರಿಯರ ಉಸ್ತುವಾರಿ ಇಲ್ಲದೆ ಯಾವುದೇ ಬಗೆಯ ಪಟಾಕಿಯನ್ನು ಹಚ್ಚದಂತೆ ನೋಡಿಕೊಳ್ಳಿ
* ಪಟಾಕಿ ಹಚ್ಚುವ ಸಂದರ್ಭದಲ್ಲಿ ತಪ್ಪದೇ ರಕ್ಷಣಾತ್ಮಕ ಕನ್ನಡಕವನ್ನು ಬಳಸಿರಿ
* ರಾಕೆಟ್ ಹಚ್ಚುವಾಗ ಕಲ್ಲು, ಬಾಟಲಿ, ಟಿನ್ ಬಳಕೆ ಮಾಡಬೇಡಿ
* ದೀಪ ಮತ್ತು ಮೇಣದ ಬತ್ತಿಯನ್ನು ಪಟಾಕಿಗಳಿಂದ ದೂರವಿಡಿ
* ಸಿಂಥೆಟಿಕ್ ಬಟ್ಟೆ, ಶಿರೋವಸ್ತ್ರ, ದುಪಟ್ಟಾ ಮುಂತಾದ ತೆಳುವಾದ ಉಡುಪುಗಳನ್ನು ಉಪಯೋಗಿಸಬೇಡಿ
* ಅಗ್ನಿ ಆಕಸ್ಮಿಕದ ಸಮಯದಲ್ಲಿ ಬೆಂಕಿ ಹರಡುವುದನ್ನು ತಡೆಯಲು ಮರಳು, ನೀರು ತುಂಬಿದ ಬಕೆಟ್ಗಳನ್ನು ಪಕ್ಕದಲ್ಲಿ ಇಟ್ಟಿರಿ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್












Click it and Unblock the Notifications