ಉಕ್ಕು ಸೇತುವೆ ವಿರೋಧಿಸಿ ಕಿರುಚಿತ್ರ ಮಾಡಿ: ಪವನ್
ಬೆಂಗಳೂರು, ನವೆಂಬರ್, 2: ಬಸವೇಶ್ವರ ಸರ್ಕಲ್ ನಿಂದ ಹೆಬ್ಬಾಳದ ವರೆಗೆ ರಾಜ್ಯ ಸರ್ಕಾರ ನಿರ್ಮಿಸಲು ಹೊರಟಿರುವ ವಿವಾದಿತ ಉಕ್ಕು ಸೇತುವೆ ಯೋಜನೆ ವಿರೋಧಿಸಿ ಕಿರುಚಿತ್ರ ತಯಾರಿಸುವಂತೆ ಚಲನಚಿತ್ರ ನಿರ್ದೇಶಕ ಪವನ್ ಕುಮಾರ್ ಕಿರುಚಿತ್ರ ಸ್ಪರ್ಧೆ ಏರ್ಪಡಿಸಿದ್ದಾರೆ.
ಉಕ್ಕಿನ ಸೇತುವೆ ವಿರೋಧಿಸಿ ಸ್ವತಃ ಪವನ್ ಅವರೇ ಒಂದು ಕಿರುಚಿತ್ರ ನಿರ್ಮಿಸಿದ್ದು, ಅದನ್ನು ಅವರ ಫೇಸ್ ಬುಕ್ ಪೇಜ್ ಗೆ ಅಪ್ ಲೋಡ್ ಮಾಡಿದ್ದಾರೆ. ಚಿತ್ರದಲ್ಲಿ ಬೆಂಗಳೂರು ಜನತೆಗೆ ಬೇಕಿರುವುದು ಮರಗಳೇ ಹೊರತು ಉಕ್ಕು ಸೇತುವೆ ಅಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಅದೇ ರೀತಿ ಉಕ್ಕು ಸೇತುವೆ ವಿರೋಧಿಸಿ ನೀವು ಸಹ ಕಿರುಚಿತ್ರ ಮಾಡಿ ಎಂದು ನೆಟ್ಟಿಗರಲ್ಲಿ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ತಾವು ನಿರ್ದೇಶಿಸುವ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಅವರು ಹೇಳಿದ್ದಾರೆ.
ಉತ್ತಮ ಕಾನ್ಸೆಪ್ಟ್ ನೊಂದಿಗೆ ಭಿನ್ನವಾಗಿ ಯೋಚಿಸಿ ಉಕ್ಕಿನ ಸೇತುವೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಕಿರುಚಿತ್ರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಅವರು ಹೇಳಿದ್ದಾರೆ.
'ಉಕ್ಕಿನ ಸೇತುವೆ ಏಕೆ ಬೇಡ' ಎಂಬ ಹೆಸರಿನಲ್ಲಿ ಕೇವಲ ಒಂದು ನಿಮಿಷ ಕಾಲಾವಧಿಯ ಕಿರುಚಿತ್ರ ನಿರ್ಮಿಸಿ ನವೆಂಬರ್ 10 ರೊಳಗೆ ಈ ಲಿಂಕ್ http://bit.ly/steelflyovershortfilm ಗೆ ಕಳುಹಿಸುವಂತೆ ಮನವಿ ಮಾಡಿದ್ದಾರೆ.
ಕಿರುಚಿತ್ರಗಳ ಪೈಕಿ ಅತ್ಯುತ್ತಮವಾದ ಮೂರು ಚಿತ್ರಗಳನ್ನು ಮಾಡಿರುವ ವ್ಯಕ್ತಿಗೆ ಪವನ್ ಕುಮಾರ್ ಅವರ ಮುಂದಿನ ಚಿತ್ರದ ನಿರ್ದೇಶಕ ವಿಭಾಗದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸುವುದಾಗಿ ಅವರು ತಿಳಿಸಿದ್ದಾರೆ.
ಉತ್ತಮ ಕಿರುಚಿತ್ರಗಳನ್ನು ಪ್ರಕಾಶ್ ಬೆಳವಾಡಿ ಮತ್ತು ಪವನ್ ಕುಮಾರ್ ಅವರು ಆಯ್ಕೆಮಾಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪವನ್ ಅವರು "ಪ್ರಸ್ತುತ ದಿನಗಳಲ್ಲಿ ದೃಶ್ಯ ಮಾಧ್ಯಮ ಹೆಚ್ಚು ಪ್ರಭಾವಶಾಲಿ ಮಾಧ್ಯಮವಾಗಿದ್ದು, ಬಹುಬೇಗ ಜನರನ್ನು ತಲುಪುತ್ತದೆ" ಎಂದು ಹೇಳಿದ್ದಾರೆ.
ಪವನ್ ಅವರು ತಯಾರಿಸಿರುವ ಕಿರುತ್ರವನ್ನು ಕೇವಲ ಒಂದು ದಿನದಲ್ಲಿ ಎಂಟು ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಕಿರುಚಿತ್ರದ ಕುರಿತು ಮಾತನಾಡಿರುವ ಅವರು "ನಾನು ನಿರ್ಮಿಸಿರುವ ಕಿರುಚಿತ್ರಕ್ಕೆ ಇಷ್ಟೊಂದು ಅಭೂತಪೂರ್ವ ಪ್ರತಿಕ್ರಿಯೆ ಬಂದಿದೆ. 100ಜನ ನಿರ್ಮಿಸಿದರೆ ಮತ್ತಷ್ಟು ಜನರಿಗೆ ತಲುಪುತ್ತದೆ" ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications