ನಟ ಕಿಚ್ಚ ಸುದೀಪ್ಗೆ ಬೆದರಿಕೆ ಪತ್ರ ಪ್ರಕರಣ: ಡೈರೆಕ್ಟರ್ ರಮೇಶ್ ಕಿಟ್ಟಿ ಬಂಧನ
ಬೆಂಗಳೂರು, ಮೇ. 05: ಕೆಲವು ದಿನಗಳಿಂದ ಚಂದನವನದಲ್ಲಿ ಸದ್ದು ಮಾಡುತ್ತಿದ್ದ ಖ್ಯಾತ ನಟ ಕಿಚ್ಚ ಸುದೀಪ್ ಬೆದರಿಕೆ ಪತ್ರ ಪ್ರಕರಣಕ್ಕೆ ಅಂತ್ಯ ದೊರೆತಿದೆ. ಸಿಸಿಬಿ ಪೊಲೀಸರು ಶುಕ್ರವಾರ ಆರೋಪಿ ನಿರ್ದೇಶಕ ರಮೇಶ್ ಕಿಟ್ಟಿ ಎನ್ನುವವರನ್ನು ಬಂಧಿಸಿದ್ದಾರೆ. ಈ ಮೂಲಕ ಕೃತ್ಯವನ್ನು ಆಪ್ತರೆ ಮಾಡಿದ್ದಾರೆ ಎಂಬ ಸುದೀಪ್ ಅವರ ಹೇಳಿಕೆ ನಿಜವಾಗಿದೆ.
ಸ್ಯಾಂಡಲ್ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದರು ಎಂದು ಸಿಸಿಬಿ ಪೊಲೀಸರು ಆರೋಪಿ ಡೈರೆಕ್ಟರ್ ರಮೇಶ್ ಕಿಟ್ಟಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎನ್ನಲಾಗಿತ್ತು.ಕಿ ಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾಗಿದ್ದ ರಮೇಶ್ ಕಿಟ್ಟಿ ಸುದೀಪ್ ಅವರೊಟ್ಟಿಗೆ ಹಣಕಾಸು ವಿಷಯಕ್ಕೆ ಭಿನ್ನಾಭಿಪ್ರಾಯ ಉಂಟಾದ ಕಾರಣ ಬೆದರಿಕೆ ಪತ್ರ ಬರೆದಿದ್ದಾರೆ.

ನಟ ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ ಸುದೀಪ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಚಾರಿಟಬಲ್ ಟ್ರಸ್ಟ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಹೂಡಿಕೆ ಮಾಡಿದ್ದ ರಮೇಶ್ ಅವರಿಗೆ ಸುದೀಪ್ ಹಣ ವಾಪಸ್ಸು ನೀಡಿಲ್ಲ. ಹೀಗಾಗಿ ಭಿನ್ನಾಭಿಪ್ರಾಯ ಉಂಟಾದ ಕಾರಣ ತಾನೇ ಬೆದರಿಕೆ ಪತ್ರ ಬರೆದಿರುವುದಾಗಿ ಸಿಸಿಬಿ ಪೊಲೀಸರ ಬಳಿ ರಮೇಶ್ ಕಿಟ್ಟಿ ಒಪ್ಪಿಕೊಂಡಿದ್ದಾರೆಂದು ಹೇಳಲಾಗಿದೆ.
ಪ್ರಕರಣ ಸಂಬಂಧ ನಟ ಸುದೀಪ್ ಮ್ಯಾನೇಜರ್ ಆಗಿರುವ ಮಂಜುನಾಥ್ ಅಲಿಯಾಸ್ ಜಾಕ್ ಮಂಜು ಅವರು ಮಾರ್ಚ್ 29 ರಂದು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಬೆದರಿಕೆ ಪತ್ರದ ಕುರಿತು ದೂರು ನೀಡಿದ್ದರು. ಅಪರಿಚಿತ ಆರೋಪಿಗಳು ಮಾರ್ಚ್ 10 ರಂದು ಸುದೀಪ್ ಅವರ ಜೆಪಿ ನಗರದ ನಿವಾಸಕ್ಕೆ ಎರಡು ಬೆದರಿಕೆ ಪತ್ರಗಳನ್ನು ಕಳುಹಿಸಿದ್ದರು. ಸುದೀಪ್ ಅವರು ಪತ್ರವನ್ನು ಕಳುಹಿಸಿದ ವ್ಯಕ್ತಿಯ ಬಗ್ಗೆ ನನಗೆ ತಿಳಿದಿದೆ ಮತ್ತು ಅದು ಕನ್ನಡ ಚಿತ್ರರಂಗಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರು ಈ ಕೆಲಸ ಮಾಡಿದ್ದಾರೆ ಎಂದು ಈ ಹಿಂದೆ ಹೇಳಿದ್ದರು.

ಅನಾಮಧೇಯ ಬೆದರಿಕೆ ಪತ್ರಗಳು ದೊಮ್ಮಲೂರು ಭಾಗದಿಂದ ರವಾನೆಯಾಗಿರುವುದನ್ನು ಪತ್ತೆ ಹಚ್ಚಿದ ಆಯುಕ್ತರು ಪುಟ್ಟೇನಹಳ್ಳಿ ಠಾಣೆಯಿಂದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಕೇಂದ್ರ ಅಪರಾಧ ವಿಭಾಗದ (CCB ) ಪೊಲೀಸರು ಸೈಬರ್ ತಜ್ಞರ ನೆರವು ಕೋರಿದ್ದರು. ತನಿಖೆಗಾಗಿ ಸೈಬರ್ ಭದ್ರತಾ ತಜ್ಞರನ್ನು ನಿಯೋಜಿಸಲಾಗಿತ್ತು. ಸದ್ಯ ಪೊಲಿಸರು ಈ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಮತ್ತಷ್ಟು ಜನರ ಕೈವಾಡವಿರುವ ಶಂಕೆಯಲ್ಲಿ ತನಿಖೆಯನ್ನು ಮುಂದುವರೆಸಲಾಗುತ್ತಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ











Click it and Unblock the Notifications