Nikhil Kumaraswamy: ನಿಖಿಲ್ ಕುಮಾರಸ್ವಾಮಿಗೆ ಆರಂಭಿಕ ಆಘಾತ, ಸಿಪಿ ಯೋಗೇಶ್ವರ್ ಮನ್ನಡೆ!
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಇಡೀ ರಾಜ್ಯದ ಗಮನ ಚನ್ನಪಟ್ಟಣ ಕ್ಷೇತ್ರದ ಮೇಲೆ ನೆಟ್ಟಿದೆ. ಅದರಲ್ಲೂ ಈ ಬಾರಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವು ಗ್ಯಾರಂಟಿ ಎಂಬ ಮಾತು ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಭರ್ಜರಿ ಪ್ರಚಾರ ಕೂಡ ನಡೆಸಲಾಗಿತ್ತು. ಆದರೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶದ ಆರಂಭಿಕ ಟ್ರೆಂಡ್ ನಿಖಿಲ್ ಕುಮಾರಸ್ವಾಮಿಗೆ ಭಾರಿ ದೊಡ್ಡ ಆಘಾತ ನೀಡಿದೆ!
ಹೌದು, ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದು ಈ ಬಾರಿ ವಿಧಾನಸಭೆಗೆ ಭರ್ಜರಿ ಎಂಟ್ರಿ ಕೊಡುವುದು ಗ್ಯಾರಂಟಿ ಎನ್ನಲಾಗಿತ್ತು. ಇದೇ ಕಾರಣ ಭರ್ಜರಿ ಕ್ಯಾಂಪೇನ್ ಕೂಡ ನಡೆಸಲಾಗಿತ್ತು. ಆದ್ರೆ ಈಗ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಮತ ಎಣಿಕೆ ಕಾರ್ಯ ಆರಂಭವಾದ ನಂತರ ಪರಿಸ್ಥಿತಿ ಬದಲಾಗಿ ಹೋಗುತ್ತಿದೆ. ಅದರಲ್ಲೂ ನಿಖಿಲ್ ಕುಮಾರಸ್ವಾಮಿ ಆರಂಭಿಕ ಹಂತದಲ್ಲೇ ಹಿನ್ನಡೆ ಅನುಭವಿಸುವ ಮೂಲಕ ಸಿಪಿ ಯೋಗೇಶ್ವರ್....

ಸಿಪಿ ಯೋಗೇಶ್ವರ್ ಗೆಲುವಿನ ಕಡೆಗೆ?
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಯ, ಆರಂಭಿಕ ಹಂತದಲ್ಲೇ ನಿಖಿಲ್ಗೆ ಹಿನ್ನಡೆ ಕಂಡುಬಂತು. ಈ ಸಮಯದಲ್ಲಿ ಸಿಪಿ ಯೋಗೇಶ್ವರ್ ಅವರು ಮುನ್ನಡೆ ಪಡೆದರು. ಹೀಗೆ ಫಲಿತಾಂಶಕ್ಕೆ ಕಾದು ಕೂತಿದ್ದ ನಿಖಿಲ್ ಕುಮಾರಸ್ವಾಮಿ & ಅವರ ಬೆಂಬಲಿಗರಿಗೆ ಇದು ಆಘಾತ ನೀಡಿತ್ತು. ಹೀಗಿದ್ದರೂ, ಆರಂಭಿಕ ಟ್ರೆಂಡ್ ಮಾತ್ರ ಎಂಬ ನೆಮ್ಮದಿ ಇತ್ತು. ಹಾಗಿದ್ರೆ ಈಗ ಏನಾಗಿದೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದಲ್ಲಿ? ಮುಂದೆ ಓದಿ.
ನಿಖಿಲ್ ಕುಮಾರಸ್ವಾಮಿ ಕಂಬ್ಯಾಕ್!
ಅಂದಹಾಗೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಯ ಆರಂಭಿಕ ಹಂತದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಹಿನ್ನಡೆ ಕಂಡು ಬಂದರೂ, ನಂತರದಲ್ಲಿ ಪರಿಸ್ಥಿತಿ ಈಗ ಬದಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ರಿಸಲ್ಟ್ ಹಾವು-ಏಣಿ ಆಟಕ್ಕೆ ಸಾಕ್ಷಿಯು ಆಗುತ್ತಿದೆ.
ಚನ್ನಪಟ್ಟಣದಲ್ಲಿ ಗೆಲುವು ಗ್ಯಾರಂಟಿ?
2019ರ ಮಂಡ್ಯ ಲೋಕಸಭಾ ಚುನಾವಣೆ & 2023 ರ ರಾಮನಗರ ವಿಧಾನಸಭೆ ಚುನಾವಣೆ ಸೋಲು ನಿಖಿಲ್ ಕುಮಾರಸ್ವಾಮಿ ಅವರ ಜೀವನದಲ್ಲಿ ದೊಡ್ಡ ಪಾಠ ಕಲಿಸಿವೆ. ಇದೇ ಕಾರಣಕ್ಕೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದ ನಿಖಿಲ್ ಅವರಿಗೆ ಗೆಲುವು ಬಹುತೇಕ ಗ್ಯಾರಂಟಿ ಆಗಿದೆ.
ಸ್ವತಃ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ನಿಖಿಲ್ ಅವರ ಪರ ಮತಯಾಚನೆ ಮಾಡಿದ್ದರು. ಇಷ್ಟೆಲ್ಲಾ ಪ್ರಯತ್ನದ ನಡುವೆ ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸುತ್ತಾರೆ ಎನ್ನಲಾಗುತ್ತಿದೆ. ಆದರೆ ಆರಂಭಿಕ ಹಂತದಲ್ಲಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡು, ನಿಖಿಲ್ ಅವರಿಗೆ ಶಾಕ್ ಕೊಟ್ಟಿದ್ದರು. ಆದ್ರೆ ಇದೀಗ ಮತ್ತೆ ನಿಖಿಲ್ ಕುಮಾರಸ್ವಾಮಿ ಅವರು ಕಂಬ್ಯಾಕ್ ಮಾಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications