ಮತ್ತೆ ‘ನೈಸ್’ ರಣಕಹಳೆ ಮೊಳಗಿಸಿದ ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ 'ನೈಸ್' ವಿರುದ್ಧ ಹೋರಾಟಕ್ಕೆ ಧುಮುಕಿದ್ದು, ರೈತರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾಕ್ಕೆ ಖಡಕ್ ಎಚ್ಚರಿಕೆ ನೀಡಿದ್ರು. ನೈಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಬೆಂಗಳೂರಿಂದ ಮೈಸೂರಿನವರೆಗೆ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಭೂಮಿ ವಾಪಸ್ ನೀಡದಿದ್ದರೆ ರಾಜ್ಯಮಟ್ಟದಲ್ಲಿ ಹೋರಾಡುವ ಎಚ್ಚರಿಕೆ ನೀಡಿದ್ದಾರೆ.
ಅಂದಹಾಗೆ ನೈಸ್ ಸಂತ್ರಸ್ತ ರೈತರ ಹೋರಾಟ ಸಮಿತಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘ ಆಯೋಜಿಸಿದ್ದ 'ದುಂಡು ಮೇಜಿನ ಸಭೆ'ಯಲ್ಲಿ ರೈತ ಮುಖಂಡರು ಚರ್ಚೆ ನಡೆಸಿ ಎಚ್ಡಿಕೆ ಮಾತನಾಡಿದರು. ಇನ್ನು ಮೂಲ ಒಪ್ಪಂದ ಚೌಕಟ್ಟು ಉಲ್ಲಂಘನೆ ಮಾಡಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಜತೆ ಮಾಡಿಕೊಂಡಿರುವ ನೈಸ್ ಕಂಪನಿಯ ಎಲ್ಲ ಒಪ್ಪಂದ ರದ್ದುಪಡಿಸಬೇಕು ಎಂದು ಎಚ್ಡಿಕೆ ಇದೇ ವೇಳೆ ಆಗ್ರಹಿಸಿದರು. ಇದರ ಜೊತೆ ನೈಸ್ ಕಂಪನಿಯ ಬಿಎಂಐಸಿ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಹೆಚ್ಚಿನ ಪರಿಹಾರಕ್ಕೆ ಎಚ್ಡಿಕೆ ಆಗ್ರಹ
ನೈಸ್ ಹಗರಣಕ್ಕೆ ಸಂಬಂಧಿಸಿದ ಸದನ ಸಮಿತಿ ಮತ್ತು ಸಂಪುಟ ಉಪ ಸಮಿತಿ ನೀಡಿದ ವರದಿ ಜಾರಿಗೊಳಿಸಿ. ಟೋಲ್ ಸಂಗ್ರಹಿಸುತ್ತಿರುವ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ 2013ರ ಭೂಸ್ವಾಧೀನ ಕಾಯ್ದೆಯ ಅನ್ವಯ ನಿವೇಶನ ಹಾಗೂ ಹೆಚ್ಚಿನ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯ ಮಾಡಲಾಯಿತು. ಹಾಗೇ ರೈತರ ಬೇಡಿಕೆ ಈಡೇರಿಸದೆ ಇದ್ದರೆ, ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ರಾಜ್ಯ ಸರ್ಕಾರಕ್ಕೆ ಇದೇ ವೇಳೆ ನೀಡಲಾಯಿತು.
ರೈತ ಸಂಘಟನೆಗಳ ಸಾಥ್
ಕರ್ನಾಟಕ ಪ್ರಾಂತ್ಯ ರೈತ ಸಂಘದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ದಲಿತ ಸಂಘರ್ಷ ಸಮಿತಿಯ ವಿ.ನಾಗರಾಜ್, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ್ಯ ರೈತ ಸಂಘದ ಉಪಾಧ್ಯಕ್ಷ ಬಸವರಾಜು, ಕರ್ನಾಟಕ ಪ್ರಾಂತ್ಯ ಕೂಲಿಕಾರರ ಸಂಘದ ಅಧ್ಯಕ್ಷ ಪುಟ್ಟಮಾದು, ಜನವಾದಿ ಮಹಿಳಾ ಸಂಘಟನೆ ಪ್ರಧಾನ ಕಾರ್ಯದರ್ಶಿ ದೇವಿ, ಟ್ರೇಡ್ ಯೂನಿಯನ್ ಅಧ್ಯಕ್ಷ ಮೀನಾಕ್ಷಿ ಸುಂದರಂ, ನೈಸ್ ಸಂತ್ರಸ್ತ ಹೋರಾಟ ಸಮಿತಿ ಅಧ್ಯಕ್ಷ ವೆಂಕಟಾಚಲಯ್ಯ ಸೇರಿ ಅನೇಕ ಮುಖಂಡರು ಹಾಜರಿದ್ದರು.
ಒಟ್ನಲ್ಲಿ ಮಾಜಿ ಸಿಎಂ ಮತ್ತೆ ನೈಸ್ ವಿರುದ್ಧ ಗುಡುಗಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಾಗಿ ಮುಂದಿನ ದಿನದಲ್ಲಿ ರಾಜ್ಯ ಸರ್ಕಾರ & ಕಾಂಗ್ರೆಸ್ ನಾಯಕರು ಈ ಬೇಡಿಕೆ ಹಾಗೂ ಆಗ್ರಹಕ್ಕೆ ಯಾವ ರೀತಿ ಪ್ರತಿಕ್ರಿಯೆ ನೀಡ್ತಾರೆ ಅಂತಾ ಕಾದು ನೋಡಬೇಕಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications