ಅಕ್ರಮ ಆಸ್ತಿ ಗಳಿಕೆ: ಬಿಬಿಎಂಪಿ ಅಧಿಕಾರಿಗೆ 40 ಲಕ್ಷ ರೂ. ದಂಡ, 4 ವರ್ಷ ಶಿಕ್ಷೆ
ಬೆಂಗಳೂರು, ನವೆಂಬರ್ 15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕರ ನಿರ್ಧಾರಕ ಅಧಿಕಾರಿ ಮೇಲಿನ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆ ಅಧಿಕಾರಿಗೆ 40ಲಕ್ಷ ರೂ. ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಬಿಬಿಎಂಪಿಯ ಆರ್. ಪ್ರಸನ್ನಕುಮಾರ್ ಅಧಿಕಾರಿಯನ್ನು ದೋಷಿ ಎಂದು ಪರಿಗಣಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸೆಕ್ಷನ್ 13 (1) (ಇ) ಹಾಗೂ 13 (2) ಅಧಿಕಾರಿಗೆ 40ಲಕ್ಷ ರೂ. ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
ದಂಡದ ಹಣ ಪಾವತಿಸಲು ಅಪರಾಧಿಯು ವಿಫಲವಾದಲ್ಲಿ ಹೆಚ್ಚುವರಿಯಾಗಿ ನಾಲ್ಕು ತಿಂಗಳ ಅನುಭವಿಸಬೇಕು ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಲಕ್ಷ್ಮೀನಾರಾಯಣ್ ಭಟ್ ಸೂಚಿಸಿದ್ದಾರೆ.

ಬಿಬಿಎಂಪಿಯ ಸಹಾಯಕ ಕಂದಾಯ ಅಧಿಕಾರಿ ಕಚೇರಿಯಲ್ಲಿ ಮೌಲ್ಯ ನಿರ್ಧಾರ ಅಧಿಕಾರಿ (ಅಸಸರ್) ಆಗಿದ್ದ ಪ್ರಸನ್ನಕುಮಾರ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇಲೆ ಲೋಕಾಯುಕ್ತದಲ್ಲಿ ಪೊಲೀಸರು ದೂರು ದಾಖಲಿಸಿದ್ದರು. 2013ರ ವರ್ಷಾಂತ್ಯದ ಡಿಸೆಂಬರ್ನಲ್ಲಿ ಅಧಿಕಾರಿಯ ಮನೆ ಮೇಲೆ ದಾಳಿ ಮಾಡಲಾಗಿತ್ತು.
ಶೇ. 61.69ರಷ್ಟು ಅಕ್ರಮ ಆಸ್ತಿ ಗಳಿಕೆ
1994 ಅಕ್ಟೋಬರ್ನಲ್ಲಿ ಕರ ನಿರ್ಧಾರಕ ಅಧಿಕಾರಿಯಾಗಿ ಬಿಬಿಎಂಪಿಗೆ ನೇಮಕಗೊಂಡಿದ್ದರು. ಬಳಿಕ 1998 ರ ಅಕ್ಟೋಬರ್ ತಿಂಗಳಿನಿಂದ ಈವರೆಗೆ 2013ರ ಡಿಸೆಂಬರ್ವರೆಗೆ ಪ್ರಸನ್ನಕುಮಾರ್ ಅಕ್ರಮ ಗಳಿಕೆಯಲ್ಲಿ ತೊಡಗಿದ್ದರು. ಒಟ್ಟು 39 ಲಕ್ಷ ರೂ. ಹಣವನ್ನು ಸಂಪಾದಿಸಿದ್ದಾರೆ ಎಂದು ದಾಳಿ ನಂತರ ತಿಳಿದು ಬಂದಿದೆ. ಸಕ್ಷಮ ಪ್ರಾಧಿಕಾರದ ಅನುಮತಿ ಮೇರೆಗೆ ಆರೋಪಿ ವಿರುದ್ಧ ಆರೋಪ ಪಟ್ಟಿ ದಾಖಲಾಗಿತ್ತು. ಅಲ್ಲಿಂದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಬಂದಿತ್ತು.

ಅಧಿಕಾರಿಗಳು ಆರೋಪಿಯ ದಾಖಲೆ ಪರಿಶೀಲಿಸಿದಾಗ ಆತನ ಬಳಿ ಸ್ಥಿರ ಮತ್ತು ಚರಾಸ್ತಿ ಸೇರಿ ಒಟ್ಟು 62 ಲಕ್ಷಕ್ಕೂ ಅಧಿಕ ರೂ. ಇದೆ. ಒಟ್ಟು 39.52 ಲಕ್ಷ ರೂ. ಖರ್ಚು ಮಾಡಲಾಗಿದೆ. ಆರೋಪಿ ಒಟ್ಟು ಒಂದು ಕೋಟಿಯ ಒಡೆಯ ಎಂದು ಗೊತ್ತಾಗಿದೆ. ದೊರೆತ ಕಡತ, ಸಾಕ್ಷ್ಯಗಳ ಆಧಾರದ ಮೇಲೆ ಅಧಿಕಾರಿ ಒಟ್ಟು ಶೇ. 61.69ರಷ್ಟು ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications