ಉಪ ಚುನಾವಣೆಗೆ ತಡೆ ನೀಡಲು ಅನರ್ಹ ಶಾಸಕರಿಂದ ಸುಪ್ರೀಂಗೆ ಮೊರೆ
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 21: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಇಂದು ಘೋಷಣೆಯಾಗಿದ್ದು. ಆಯೋಗದ ನಿರ್ಣಯ ಅನರ್ಹ ಶಾಸಕರ ಜಂಘಾಬಲ ಉಡುಗಿಸಿದೆ.
ಅನರ್ಹತೆ ವಿರುದ್ಧ ಮರುಪರಿಶೀಲನಾ ಅರ್ಜಿಯನ್ನು ಈಗಾಗಲೇ ಅನರ್ಹ ಶಾಸಕರು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದಾರೆ. ಆದರೆ ಅರ್ಜಿಯ ತುರ್ತು ವಿಚಾರಣೆ ನಡೆಸಲಾಗಿಲ್ಲ. ಆದರೆ ಈ ನಡುವೆ ಈಗ ಹಠಾತ್ತನೆ ಉಪ ಚುನಾವಣೆ ಘೋಷಣೆ ಆಗಿದ್ದು ಅನರ್ಹ ಶಾಸಕರ ಆತಂಕಕ್ಕೆ ಈಡಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅನರ್ಹ ಶಾಸಕರಲ್ಲಿ ಒಬ್ಬರಾದ ಸುಧಾಕರ್ ಅವರು, ಈಗಾಗಲೇ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಹಾಕಿದ್ದು, ಉಪಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಮತ್ತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

'ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ನಮ್ಮನ್ನು ಅಸಾಂವಿಧಾನಿಕವಾಗಿ, ಕಾನೂನು ಬಾಹಿರವಾಗಿ ಅನರ್ಹಗೊಳಿಸಿದ್ದಾರೆ. ಇದು ನ್ಯಾಯಾಲಯಕ್ಕೆ ಮನವರಿಕೆ ಆಗಲಿದೆ' ಎಂದು ಹೇಳಿದ್ದಾರೆ.
'ಸೋಮವಾರ ನಮ್ಮ ಅರ್ಜಿ ವಿಚಾರಣೆಗೆ ಬರಲಿದ್ದು, ನ್ಯಾಯಾಲಯವು ಉಪಚುನಾವಣೆಗೆ ತಡೆಯಾಜ್ಞೆ ನೀಡಲಿದೆ ಎಂಬ ನಂಬಿಕೆ ಇದೆ ನಮ್ಮ ವಕೀಲರು ಈ ಬಗ್ಗೆ ಸೋಮವಾರ ಮತ್ತೊಂದು ಮನವಿ ಸಲ್ಲಿಸಲಿದ್ದಾರೆ' ಎಂದು ಅವರು ಹೇಳಿದರು.
'ಯಾವುದೇ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಸ್ಥಾನ ಖಾಲಿಯಾದರೆ ಅದನ್ನು ಆರು ತಿಂಗಳ ಒಳಗೆ ತುಂಬುವುದು ಆಯೋಗದ ಕರ್ತವ್ಯ, ಅದಕ್ಕೆ ಅನುಸಾರವಾಗಿಯೇ ಚುನಾವಣೆ ಘೋಷಿಸಲಾಗಿದೆ. ಆದರೆ ಅಧಿಸೂಚನೆ ಇನ್ನೂ ಹೊರಡಿಸಲಾಗಿಲ್ಲ, ಈಗ ವೇಳಾಪಟ್ಟಿ ಮಾತ್ರವೇ ಘೋಷಣೆ ಆಗಿದೆ' ಎಂದು ಸುಧಾಕರ್ ಹೇಳಿದರು.
ಪಿಎಲ್ಡಿ ಬ್ಯಾಂಕಿನ ಸಭೆಯಲ್ಲಿ ಭಾಗವಹಿಸಿದ್ದ ಸುಧಾಕರ್ ಅವರು, ಚುನಾವಣೆ ಘೋಷಣೆ ಆದ ಸುದ್ದಿ ತಿಳಿದ ಕೂಡಲೇ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ನಗರಕ್ಕೆ ಬಂದು ಯಡಿಯೂರಪ್ಪ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡರು ಎನ್ನಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications