ಕೊನೆಗೂ ಬೆಂಗಳೂರಿಗೆ ಬಂದ ಐವರು ಅತೃಪ್ತರು ಯಾರು?
ಬೆಂಗಳೂರು, ಜುಲೈ 29: ಕೊನೆಗೂ ಐವರು ಅತೃಪ್ತ ಶಾಸಕರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಮಧ್ಯರಾತ್ರಿ ಸುಮಾರು 12.50ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಭಾನುವಾರ ರಾತ್ರಿ ಐವರು ಅತೃಪ್ತರು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ದೆಹಲಿಗೆ ಹೋಗಿ ಸುಪ್ರಿಂಕೋರ್ಟಿಗೆ ಅರ್ಜಿ ಹಾಕುತ್ತಾರೆ. ಸ್ಪೀಕರ್ ಅನರ್ಹ ಆದೇಶ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಅಂದರು. ಇದೇ ವೇಳೆ ಡಿಕೆ ಶಿವಕುಮಾರ್ ಹೊಸಕೋಟೆಗೆ ಬರಲಿ, ಸಂತೋಷದಿಂದ ನಿಮ್ಮ ಸವಾಲನ್ನ ಸ್ವೀಕಾರ ಮಾಡುತ್ತೇನೆ ಎಂದು ಸವಾಲು ಹಾಕಿದರು.

ಕೆಂಪೇಗೌಡ ಏರ್ ಪೋರ್ಟಿಗೆ ಬೈರತಿ ಬಸವರಾಜು, ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಮುನಿರತ್ನ ಹಾಗೂ ಎಂ ಟಿಬಿ ನಾಗರಾಜ್ ಬಂದಿದ್ದಾರೆ.
ಮೊದಲು ಬಂದ ನಾಲ್ವರು ಅನರ್ಹರು ಕೂಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೇ ಹೊರಟಿದ್ದಾರೆ. ಸುಮಾರು 15 ನಿಮಿಷಗಳ ಬಳಿಕ ಒಬ್ಬಂಟಿಯಾಗಿ ಬಂದ ಎಂಟಿಬಿ ನಾಗರಾಜ್ ಅವರು, ನಾನು ಮುಂಬೈಯಿಂದ ಒಬ್ಬನೇ ಬಂದೆ. ಮುಂದೆ ನಾಲ್ಕು ಜನ ಹೋದರು. ಇನ್ನುಳಿದವರು ಮುಂಬೈನಲ್ಲಿದ್ದಾರೆ.
14 ಮತ್ತು 3 ಒಟ್ಟು 17 ಮಂದಿ ಶಾಸಕರು ಅನರ್ಹಗೊಂಡಿದ್ದು, ಇದರಲ್ಲಿ ಮೂವರು ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಮತ್ತೆ 14 ಮಂದಿ ಇಂದು ಸುಪ್ರೀಂ ಕದ ತಟ್ಟಲಿದ್ದಾರೆ. ಹೀಗಾಗಿ ಕೋರ್ಟ್ 17 ಮಂದಿಯ ಕೇಸನ್ನು ಒಟ್ಟಿಗೆ ತೆಗೆದುಕೊಂಡು ಏನ್ ತೀರ್ಪು ಕೊಡುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ.
ಸುದ್ದಿಗೋಷ್ಠಿ ಕರೆದಿದ್ದ ಸ್ಪೀಕರ್ ಅವರು ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರನ್ನು ಅನರ್ಹ ಗೊಳಿಸಿದ್ದರು.
ಆ ಬಳಿಕ ಇಂದು ಮತ್ತೆ ಸುದ್ದಿಗೋಷ್ಠಿ ಕರೆದು, ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಹೀಗೆ ಎಲ್ಲ 14 ಶಾಸಕರನ್ನೂ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications