ಪ್ರವಾಹ ಸಂತ್ರಸ್ತರಿಗೆ ಭಾರಿ ಮೊತ್ತದ ನೆರವು ನೀಡಿದ ಅನರ್ಹ ಶಾಸಕ ಎಂಟಿಬಿ ನಾಗರಾಜು

Recommended Video

      ಅನರ್ಹ ಶಾಸಕ MTB ನಾಗರಾಜ್ ಯಡಿಯೂರಪ್ಪಗೆ ಕೋಟಿ ಕೊಟ್ಟಿದ್ದೇಕೆ..?

      ಹೊಸಕೋಟೆ, ಆಗಸ್ಟ್ 13: ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ಮರುಗಿರುವ ಅನರ್ಹ ಶಾಸಕ ಎಂಟಿಬಿ ನಾಗರಾಜು ಅವರು ಬರೋಬ್ಬರಿ ಒಂದು ಕೋಟಿ ರೂಪಾಯಿ ಹಣವನ್ನು ಸಂತ್ರಸ್ತರ ನೆರವಿಗೆ ನೀಡುವುದಾಗಿ ಹೇಳಿದ್ದಾರೆ.

      ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಎಂಟಿಬಿ ನಾಗರಾಜು ಅವರು, ಪ್ರಹಾವ ಸಂತ್ರಸ್ತರ ನೆರವಿಗಾಗಿ ಎಂಟಿಬಿ ಸಂಸ್ಥೆಯಿಂದ ಒಂದು ಕೋಟಿ ರೂಪಾಯಿ ಚೆಕ್ ಅನ್ನು ಸಿಎಂ ಯಡಿಯೂರಪ್ಪ ಅವರಿಗೆ ನೀಡುವುದಾಗಿ ಹೇಳಿದ್ದಾರೆ.

      ತಮ್ಮ ಮಗನ ಜೊತೆ ಚೆಕ್ ಹಿಡಿದು ಇಂತು ವಿಡಿಯೋಕ್ಕೆ ಮಾತನಾಡಿರುವ ಎಂಟಿಬಿ ನಾಗರಾಜು, 'ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಪ್ರವಾಹದಿಂದಾಗಿ, ಆಸ್ತಿಹಾನಿ, ಬೆಳೆಹಾನಿ, ಜೀವ ಹಾನಿ, ಜಾನುವಾರು ಹಾನಿ ಇನ್ನೂ ಸಾಕಷ್ಟು ಹಾನಿ ಆಗಿದೆ' ಎಂದಿದ್ದಾರೆ.

      Disqualified MLA MTB Nagaraju gave 1 crore to flood victims

      'ಪ್ರವಾಹ ಸಂತ್ರಸ್ತರಿಗೆ ಉದ್ಯಮಿಗಳು, ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ಭರಪೂರವಾಗಿ ನೆರವು ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಮಾಡಿರುವ ಮನವಿಗೆ ಓಗೊಟ್ಟು ನಾವು ಈ ನಿರ್ಣಯಕ್ಕೆ ತಳೆದಿದ್ದೇವೆ' ಎಂದು ಎಂಟಿಬಿ ನಾಗರಾಜು ಹೇಳಿದ್ದಾರೆ.

      ಎಂಟಿಬಿ ನಾಗರಾಜು ಅವರು ಕಾಂಗ್ರೆಸ್ ಪಕ್ಷದಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗಿದ್ದರು. ಆದರೆ ಆ ನಂತರ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮೈತ್ರಿ ಸರ್ಕಾರ ಉರುಳಲು ಸಹಾಯ ಮಾಡಿದರು. ಸ್ಪೀಕರ್ ಅವರು ಎಂಟಿಬಿ ನಾಗರಾಜು ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಅನರ್ಹರನ್ನಾಗಿಸಿದ್ದಾರೆ.

      ಎಂಟಿಬಿ ನಾಗರಾಜು ಅವರು ಅತ್ಯಂತ ಶ್ರೀಮಂತ ಶಾಸಕರೆಂಬ ಖ್ಯಾತಿ ಹೊಂದಿದ್ದರು. ಅವರು ಚುನಾವಣಾ ಆಯೋಗಕ್ಕೆ ನೀಡಿದ ಆಸ್ತಿ ವಿವರದಲ್ಲಿ 1015 ಕೋಟಿ ಆಸ್ತಿ ಹೊಂದಿರುವುದಾಗಿ ಮಾಹಿತಿ ನೀಡಿದ್ದರು. ವಾರ್ಷಿಕ ಆದಾಯವೇ 100 ಕೋಟಿಗೂ ಹೆಚ್ಚು ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+