ಬಿಜೆಪಿಯೇ ಸೂತ್ರದಾರ, ಇವರೆಲ್ಲ ಪಾತ್ರಧಾರಿಗಳು: ಇದು ಡ್ರಾಮಾ ಪೊಲಿಟಿಷಿಯನ್ಸ್!
ಬೆಂಗಳೂರು, ನವೆಂಬರ್.14: ಡ್ರಾಮಾ ಜೂನಿಯರ್ಸ್, ಡ್ರಾಮಾ ಸೀನಿಯರ್ಸ್ ಬಗ್ಗೆ ಕೇಳಿದ್ದೀರಿ ಅಲ್ವಾ. ಇದು ಅದೆರಡಕ್ಕಿಂತ ಫುಲ್ ಡಿಫರೆಂಟ್. ಯಾಕೆಂದರೆ ಇದು ಡ್ರಾಮಾ ಪೊಲಿಟಿಶಿಯನ್ಸ್. ಈ ಮಾತನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿದ್ದಾರೆ.
ರಾಜ್ಯದಲ್ಲಿ ಉಪ ಚುನಾವಣೆ ಕಾವು ಏರುತ್ತಿದೆ. 16 ಮಂದಿ ಅನರ್ಹ ಶಾಸಕರು ಕೇಸರಿ ಬಾವುಟ ಹಿಡಿದು ಸಂಭ್ರಮಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಗರು ನಡೆಸುತ್ತಿರುವ ನಾಟಕದ ಮುಂದುವರಿದ ಭಾಗ ಅಂತಾ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈತ್ರಿ ಸರ್ಕಾರಕ್ಕೆ ಬೆನ್ನು ತೋರಿಸಿ ಹೋಗಿದ್ದು. ಪಕ್ಷಾಂತರ ಕಾಯ್ದೆಗೆ ವಿರುದ್ಧವಾಗಿ ಪಕ್ಷ ತೊರೆದಿದ್ದು. 17 ಮಂದಿ ಶಾಸಕರೆಲ್ಲ ರಾಜೀನಾಮೆ ಸಲ್ಲಿಸಿದ್ದು ಎಲ್ಲವೂ ಬಿಜೆಪಿಗರೇ ಆಡಿಸಿದ ನಾಟಕ. ಈಗ ಅನರ್ಹ ಶಾಸಕರೆಲ್ಲ ಬಿಜೆಪಿ ಸೇರ್ಪಡೆಗೊಂಡಿದ್ದು ಅದರ ಮುಂದುವರಿದ ಭಾಗ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಅನರ್ಹ ಶಾಸಕರೆಲ್ಲ ಪಾತ್ರಧಾರಿಗಳು!
ರಾಜ್ಯದಲ್ಲಿ ಈ ಹಿಂದೆ ನಡೆದಿರುವ ಹಾಗೂ ಈಗ ನಡೆಯುತ್ತಿರುವ ರಾಜಕೀಯ ನಾಟಕಕ್ಕೆಲ್ಲ ಬಿಜೆಪಿಗೇ ಸೂತ್ರಧಾರಿಗಳು ಎಂದು ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿ ನಾಯಕರು ಆಡಿಸಿದಂತೆ ಇವರು ಆಡಿದ್ದಾರೆ. ಈಗಲೂ ರಾಜ್ಯದಲ್ಲಿ ಡ್ರಾಮಾ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ ಈಗ ಅವರಿಗೆ ಟಿಕೆಟ್ ನೀಡಿದ್ದು, ಅದರ ಮುಂದುವರಿದ ಭಾಗ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಅವರೆಲ್ಲ ಈಗ ಅನರ್ಹ ಶಾಸಕರು ಸ್ವಾಮಿ!
16 ಮಂದಿ ಶಾಸಕರಿಗೆ ಬಿಜೆಪಿ ಟಿಕೆಟ್ ಘೋಷಿಸಿದ್ದು ಆಗಿದೆ. ಆದರೆ, ಅವರೆಲ್ಲ ಈಗ ಹಾಲಿ ಶಾಸಕರಲ್ಲ. ಮಾಜಿ ಶಾಸಕರೂ ಅಲ್ಲ, ಸುಪ್ರೀಂಕೋರ್ಟ್ ತೀರ್ಪಿನಲ್ಲೇ ಹೇಳಿದಂತೆ ಅವರೆಲ್ಲ ಅನರ್ಹ ಶಾಸಕರು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಅವರು ಸೇರಿದ್ದು ಬಿಜೆಪಿಗೆ, ಅರ್ಹರ ಪಟ್ಟಿಗಲ್ಲ!
ಮೈತ್ರಿ ಸರ್ಕಾರಕ್ಕೆ ಮೋಸ ಮಾಡಿ ಹೋಗಿರುವ 16 ಮಂದಿಯನ್ನು ಅನರ್ಹರು ಎಂದು ಸ್ವತಃ ಸುಪ್ರೀಂಕೋರ್ಟ್ ಹೇಳಿದೆ. ಈ ಹಣೆಪಟ್ಟಿಯನ್ನು ಹೊತ್ತುಕೊಂಡು ಅವರೆಲ್ಲ ಚುನಾವಣೆಗೆ ಹೋಗಬೇಕು. ಬಿಜೆಪಿ ಸೇರ್ಪಡೆಗೊಂಡರೆ, ಚುನಾವಣೆಯಲ್ಲಿ ಸ್ಪರ್ಧಿಸಿದರೆ ಈ ಹಣೆಪಟ್ಟಿ ಕಳಚುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅನರ್ಹಗೊಂಡ ಶಾಸಕರೆಲ್ಲ ತಿರಸ್ಕೃತರು!
ಸುಪ್ರೀಂಕೋರ್ಟ್ ಅವರನ್ನು ಅನರ್ಹ ಶಾಸಕರು ಎಂದ ಮೇಲೆ ಅಂಥ ನಾಯಕರನ್ನು ಮತದಾರರು ಹೇಗೆ ತಾನೆ ಒಪ್ಪಿಕೊಳ್ಳುತ್ತಾರೆ ಹೇಳಿ. ಇಂಥ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸಿದರೂ ಮತದಾರರು ಅವರನ್ನು ತಿರಸ್ಕರಿಸುತ್ತಾರೆ. ಉಪ ಚುನಾವಣೆಯಲ್ಲಿ ಅವರ ಆಟ ಏನೂ ನಡೆಯೋದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications