ಅನರ್ಹ ಶಾಸಕರು ದೆಹಲಿಯತ್ತ ಪ್ರಯಾಣ ಬೆಳೆಸಿದ್ಯಾಕೆ?
ಬೆಂಗಳೂರು, ಆಗಸ್ಟ್ 21: ಅನರ್ಹ ಶಾಸಕರ ಎರಡು ತಂಡಗಳು ದೆಹಲಿಗೆ ಪ್ರಯಾಣ ಬೆಳೆಸಿವೆ. ಅಲ್ಲಿ ಬಿಜೆಪಿ ಹೈಕಮಾಂಡನ್ನು ಭೇಟಿ ಮಾಡಲಿವೆ.
ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನೆಯನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ 17 ಮಂದಿ ಶಾಸಕರು ದೆಹಲಿಗೆ ತೆರಳಿದ್ದಾರೆ.
ಸಂಪುಟದಲ್ಲಿ ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ನೀಡದೇ ಇರುವುದು ಅನರ್ಹ ಶಾಸಕ ನಾಯಕ ರಮೇಶ್ ಜಾರಕಿಹೊಳಿ ಕಸಿವಿಸಿಗೆ ಕಾರಣವಾಗಿದೆ. ಇದೇ ಸ್ಥಿತಿ ಇನ್ನುಳಿದ ಅನರ್ಹರನ್ನೂ ಕಾಡುತ್ತಿದೆ.

ಪ್ರಮುಖ ಖಾತೆಗಳನ್ನು ನೀಡುವುದಾಗಿ ಆಪರೇಷನ್ ಕಮಲದ ಸಂದರ್ಭದಲ್ಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅನರ್ಹ ಶಾಸಕರಿಗೆ ಭರವಸೆ ನೀಡಿದ್ದರು. ಎಲ್ಲವನ್ನೂ ಪಕ್ಕಾಮಾಡಿಕೊಂಡ ಮೇಲೆಯೇ 17 ಶಾಸಕರು ಮೈತ್ರಿ ಸರ್ಕಾರವನ್ನು ಉರುಳಿಸುವ ಕೆಲಸಕ್ಕೆ ಮುಂದಾಗಿದ್ದರು.
ಸದ್ಯಕ್ಕೆ ರಾಜಕೀಯ ಸ್ಥಿತಿ ಅತಂತ್ರವಾಗಿಯೇ ಮುಂದುವರೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಎರಡು ತಂಡಗಳಾಗಿ ಬಿಜೆಪಿ ವರಿಷ್ಠರ ಭೇಟಿಗಾಗಿ ದೆಹಲಿಯತ್ತ ಬುಧವಾರ ಪ್ರಯಾಣ ಬೆಳೆಸಿದರು.
ಬೆಳಗಾವಿ ಭಾಗದಿಂದ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿರುವ ಬಿಜೆಪಿ-ಆರ್ ಎಸ್ ಎಸ್ ನೀತಿಗೆ ಬೆಳಗಾವಿ ಸಾಹುಕಾರ ಬಣ ಕೋಪಗೊಂಡಿದೆ.
ಆದಷ್ಟು ಬೇಗ ತಮ್ಮ ರಾಜಕೀಯ ನಡೆಯನ್ನು ಭದ್ರಪಡಿಸಿಕೊಳ್ಳುವ ತರಾತುರಿಯಲ್ಲಿರುವ ಅನರ್ಹರು ಸುಪ್ರೀಂಕೋರ್ಟ್ ತೀರ್ಪಿನತ್ತ ತಮ್ಮೆಲ್ಲ ಗಮನವನ್ನು ಕೇಂದ್ರೀಕರಿಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಕೇಂದ್ರ ನಾಯಕರನ್ನು ಭೇಟಿ ಮಾಡಿ ಭರವಸೆಯನ್ನು ಪಡೆಯುವ ಉದ್ದೇಶವನ್ನೂ ಹೊಂದಿದ್ದಾರೆ.
ಬಿಜೆಪಿಯ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಪ್ರಮುಖ ಖಾತೆಗಳತ್ತ ಹಿರಿಯ ಸಚಿವರು ಕಣ್ಣಿಟ್ಟಿದ್ದಾರೆ. ಹೀಗಾಗಿ ತಾವು ಬೇಡಿಕೆಯಿಟ್ಟಿದ್ದ ಖಾತೆಗಳು ಕೈತಪ್ಪುವ ಆತಂಕದಲ್ಲಿ ಅನರ್ಹರು ಇದ್ದಾರೆ. ಇದಕ್ಕಾಗಿಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದ್ಯಕ್ಕೆ ಖಾತೆ ಹಂಚಿಕೆಯ ಗೋಜಿಗೆ ಕೈಹಾಕುತ್ತಿಲ್ಲ ಎಂಬ ಮಾತುಗಳೂ ಕೇಳಿ ಬಂದಿವೆ.
ಕೆ.ಸುಧಾಕರ್ ಸಂಜೆಯ ವಿಮಾನದಲ್ಲಿ ದೆಹಲಿಗೆ ತೆರಳುವುದಾಗಿ ಹೇಳಿದರು. ತಿರುಪತಿಗೆ ಹೋಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿಲ್ಲ ಎಂದು ಮುನಿರತ್ನ ಸ್ಪಷ್ಟಪಡಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications