ತಡರಾತ್ರಿ ಸ್ವಾಮೀಜಿ ನೇತೃತ್ವದಲ್ಲಿ ಬಿಜೆಪಿ ಅತೃಪ್ತರ ರಹಸ್ಯ ಸಭೆ: ಆತಂಕದಲ್ಲಿ ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 19: ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಅಸಮಾಧಾನ ಗುಪ್ತಗಾಮಿನಿಯಾಗಿ ಬಿಜೆಪಿಯಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ನಿನ್ನೆ ತಡರಾತ್ರಿ ಬಿಜೆಪಿಯ ಹಲವು ಶಾಸಕರು ರಹಸ್ಯ ಸಭೆಯೊಂದನ್ನು ಮಾಡಿದ್ದಾರೆ.
ಪಂಚಮಸಾಲಿ ಲಿಂಗಾಯತ ಶಾಸಕರು ಈ ಸಭೆ ನಡೆಸಿದ್ದು, ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ರಹಸ್ಯ ಸಭೆ ನಡೆದಿದೆ.
ಸಚಿವ ಸ್ಥಾನದಿಂದ ವಂಚಿತರಾಗಿರುವ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಸನಗೌಡ ಪಾಟೀಲ್ ಯತ್ನಾಳ್, ಕರಡಿ ಸಂಗಣ್ಣ, ಮಹೇಶ್ ಕುಮಟಳ್ಳಿ, ಮುರಗೇಶ ನಿರಾಣಿ, ಅರವಿಂದ ಬೆಲ್ಲದ್, ಅರುಣ್ ಕುಮಾರ್ ಪೂಜಾರ್, ಮೋಹನ್ ಲಿಂಬಿಕಾಯಿ, ಸಿ.ಎಂ.ಲಿಂಬಣ್ಣವರ್, ಶಂಕರ್ ಪಾಟೀಲ್ ಮುನೇನಕುಪ್ಪ ಮುಂತಾದವರು ಭಾಗವಹಿಸಿದ್ದರು ಎನ್ನಲಾಗಿದೆ.

ಪಂಚಮಸಾಲಿ ಲಿಂಗಾಯತ ನಾಯಕರಿಗೆ ಸಚಿವ ಸ್ಥಾನ
ಪಂಚಮಸಾಲಿ ಲಿಂಗಾಯದ ಸಮುದಾಯದ ಇಬ್ಬರು ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಯಡಿಯೂರಪ್ಪ ಮೇಲೆ ಒತ್ತಡ ಹೇರಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಅಲ್ಲದೆ ಜೂನ್ ನಲ್ಲಿ ನಡೆಯಲಿರುವ ಪರಿಷತ್ ಚುನಾವಣೆಗೆ ಸಮುದಾಯದ ಮೋಹನ್ ಲಿಂಬಿಕಾಯಿ ಅವರನ್ನು ಪರಿಗಣಿಸುವಂತೆ ಕೋರಲು ತೀರ್ಮಾನಿಸಲಾಗಿದೆ.

ಓಬಿಸಿ ಮೀಸಲಾತಿಗೆ ಸಚಿವರ ಮೇಲೆ ಒತ್ತಡ
ಓಬಿಸಿ ಮೀಸಲಾತಿಗೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲೂ ಸಹ ಈ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇದರ ಜೊತೆಗೆ ಸಮುದಾಯದ ಏಳಿಗೆ ಕುರಿತಂತೆ ಇನ್ನೂ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ವಚನಾನಂದ ಸ್ವಾಮೀಜಿ ಬಹಿರಂಗ ಬೆದರಿಕೆ
ಕೆಲವು ದಿನಗಳ ಹಿಂದಷ್ಟೆ ದಾವಣಗೆರೆಯಲ್ಲಿ ಆಯೋಜಿಸಿದ್ದ ಲಿಂಗಾಯತ ಪಂಚಮಸಾಲಿ ಸಮಾವೇಶದಲ್ಲಿ ವಚನಾನಂದ ಸ್ವಾಮೀಜಿ ಅವರು ಯಡಿಯೂರಪ್ಪ ಅವರಿಗೆ ನೇರವಾಗಿಯೇ 'ರಾಜಕೀಯವಾಗಿ ಕೈಬಿಡುವ' ಬೆದರಿಕೆಯನ್ನು ಹಾಕಿದ್ದರು. ಇದಕ್ಕೆ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ರಹಸ್ಯ ರಾಜಕೀಯ ಮೂಲಕ ಒತ್ತಡ
ಇದೀಗ ಪಂಚಮಸಾಲಿ ರಾಜಕೀಯ ಮತ್ತೊಂದು ಹಂತಕ್ಕೆ ಹೋಗಿದ್ದು, ರಹಸ್ಯ ಸಭೆಗಳನ್ನು ನಡೆಸಿ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಒತ್ತಡ ಹೇರುವ ತಂತ್ರ ಅನುಸರಿಸುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications