Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಭಿನ್ನಮತೀಯರು ಗೈರು, ಇನ್ನೂ ಕರಗಿಲ್ಲ ಅತೃಪ್ತಿ

ಬೆಂಗಳೂರು, ಜುಲೈ 11: ಇಂದು ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ ಸಚಿವ ಸ್ಥಾನ ಸಿಗದೇ ಅತೃಪ್ತಗೊಂಡಿರುವ ಶಾಸಕರು ಗೈರಾಗಿ ತಮ್ಮ ಅತೃಪ್ತಿ ಇನ್ನೂ ಶಮನಗೊಂಡಿಲ್ಲ ಎಂಬುದನ್ನು ಜಾಹೀರು ಮಾಡಿದ್ದಾರೆ.

ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್‌ನ 79 ಶಾಸಕರ ಪೈಕಿ ಸಭೆಯಲ್ಲಿ ಭಾಗವಹಿಸಿದ್ದಿದ್ದು ಕೇವಲ 35 ರಿಂದ 40 ಶಾಸಕರಷ್ಟೆ. ಅದರಲ್ಲಿಯೂ ಅತೃಪ್ತ ಶಾಸಕರಂತೂ ಒಬ್ಬರೂ ಭಾಗವಹಿಸಿರಲಿಲ್ಲ.

ಅತೃಪ್ತ ಶಾಸಕರ ನೇತೃತ್ವ ವಹಿಸಿದ್ದ ಎಂ.ಬಿ.ಪಾಟೀಲ, ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಹೊಸಕೋಟೆ ಶಾಸಕ ಎಂಟಿಬಿ ನಾಗರಾಜು, ಎಚ್‌.ಕೆ.ಪಾಟೀಲ್ ಇವರುಗಳ್ಯಾರೂ ಇಂದಿನ ಸಭೆಯಲ್ಲಿ ಭಾಗವಹಿಸಿರಲಿಲ್ಲ.

Dissident MLAs absent to congress legislative assembly meeting today

ಇವರಷ್ಟೆ ಅಲ್ಲದೆ ತನ್ವೀರ್ ಸೇಠ್, ಹ್ಯಾರಿಸ್, ರೋಷನ್ ಬೇಗ್, ರಾಮಲಿಂಗಾ ರೆಡ್ಡಿ, ಎಂ.ಕೃಷ್ಣಪ್ಪ ಅವರಂತಹ ಪ್ರಭಾವಿ ಶಾಸಕರೂ ಸಹ ಇಂದಿನ ಸಭೆಯಲ್ಲಿ ಭಾಗವಹಿಸದೇ ಇದ್ದದ್ದು ಕುತೂಹಲ ಮೂಡಿಸಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಎಂಬಿ ಪಾಟೀಲ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ಆಡಿದ ಮೇಲೆ ಕಾಂಗ್ರೆಸ್‌ನಲ್ಲಿ ಅತೃಪ್ತಿ ಶಮನವಾಗಿದೆ ಎಂದೇ ಹೇಳಲಾಗಿತ್ತು. ಆದರೆ ಇಂದಿನ ಘಟನೆ ನೋಡಿದರೆ ಅತೃಪ್ತಿ ಇನ್ನೂ ಶಮನವಾಗಿಲ್ಲ ಎಂಬುದು ಎದ್ದು ಕಾಣುತ್ತಿದೆ.

Dissident MLAs absent to congress legislative assembly meeting today

ಹತ್ತಿರದಲ್ಲೇ ಸಂಪುಟ ವಿಸ್ತರಣೆ ನಡೆಯಲಿದ್ದು, ಆಗಲಾದರೂ ಸಚಿವ ಸ್ಥಾನ ಧಕ್ಕಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಅತೃಪ್ತರು ಪರೋಕ್ಷವಾಗಿ ಈಗಿನಿಂದಲೇ ಒತ್ತಡ ಹಾಕುವ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+