ಜೆಪಿ ನಗರ: ಹಿರಿಯ ನಾಗರಿಕರ ಅನುಕೂಲಕ್ಕಾಗಿ ಬಸ್ಗಳ ಮಾರ್ಗ ಬದಲಾಯಿಸಲು ಮನವಿ
ಸದ್ಯ ಅಸ್ತಿತ್ವದಲ್ಲಿರುವ ಬಿಎಂಟಿಸಿ ಬಸ್ ಮಾರ್ಗಗಳು ಅಂಜನಾಪುರ ಮುಖ್ಯರಸ್ತೆ ಮತ್ತು ಕೆಂಗೇರಿ-ಗೊಟ್ಟಿಗೆರೆ ರಸ್ತೆಯಲ್ಲಿ ನಿಲ್ಲುತ್ತವೆ.
ಬೆಂಗಳೂರು, ಮಾರ್ಚ್ 13: ಜೆ.ಪಿ.ನಗರ 9ನೇ ಹಂತದ ರಾಘವನಪಾಳ್ಯ ಮತ್ತು ಸುತ್ತಮುತ್ತಲಿನ ನಿವಾಸಿಗಳು ಇಲ್ಲಿನ ಅಪಾರ್ಟ್ಮೆಂಟ್ಗಳಲ್ಲಿ ನೆಲೆಸಿರುವ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಬಸ್ಗಳನ್ನು ಒಂದು ಕಿಲೋಮೀಟರ್ ಮಾರ್ಗ ಬದಲಿಸುವಂತೆ ಬಿಎಂಟಿಸಿಗೆ ಮನವಿ ಸಲ್ಲಿಸಿದ್ದಾರೆ. ಸದ್ಯದಲ್ಲೇ ಸಮೀಕ್ಷೆ ನಡೆಸಿ ನಿರ್ಧಾರ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದೆ.
ಜೆ.ಪಿ.ನಗರ 9ನೇ ಹಂತದ ರಾಘವನಪಾಳ್ಯ ಮತ್ತು ಸುತ್ತಮುತ್ತಲಿನ ನಿವಾಸಿ ಹಿರಿಯ ನಾಗರಿಕರು ಸುಲಭವಾಗಿ ತೆರಳಲು ಅನುಕೂಲವಾಗುವಂತೆ ಮಾಡಲು ಈ ಮನವಿ ಸಲ್ಲಿಸಲಾಗಿದೆ. ಅನೇಕ ಹಿರಿಯರು ಸೇರಿದಂತೆ 138 ನಿವಾಸಿಗಳು ಸಹಿ ಮಾಡಿದ ಮನವಿಯನ್ನು ಮಾರ್ಚ್ 2 ರಂದು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ ಎಂದು ಕ್ಷೇಮಾಭಿವೃದ್ಧಿ ಸಂಘಗಳ ಸದಸ್ಯ ಕನಕಪುರ ರಸ್ತೆಯ ಚೇಂಜ್ ಮೇಕರ್ಸ್ ಸಂಸ್ಥಾಪಕ ಅಬ್ದುಲ್ ಅಲೀಂ ಮಾಹಿತಿ ನೀಡಿದ್ದಾರೆ.

ನಂದಿ ಗಾರ್ಡನ್ಸ್, ಐಎಂಜಿ ಎಲೈಟ್, ಆರ್ಯಹಂಸ, ಪ್ಲಾಟಿನಂ ಲೈಫ್ಸ್ಟೈಲ್ ಮತ್ತು ಜಿಆರ್ ಹೈಟ್ಸ್ನಂತಹ ಹಲವಾರು ವಸತಿ ಅಪಾರ್ಟ್ಮೆಂಟ್ಗಳು ಈ ಭಾಗದಲ್ಲಿವೆ. "ಪ್ರತಿಯೊಂದು ಅಪಾರ್ಟ್ಮೆಂಟ್ಗಳಲ್ಲಿ ನೂರು ಫ್ಲ್ಯಾಟ್ಗಳಿವೆ. ಹೆಚ್ಚಿನ ಸಂಖ್ಯೆಯ ನಿವಾಸಿಗಳು ಇದ್ದಾರೆ. ಅವರಲ್ಲಿ ಹಲವರು ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಹಿರಿಯ ನಾಗರಿಕರು ಎಂದು ಹೇಳಿದ್ದಾರೆ.
ಸದ್ಯ ಅಸ್ತಿತ್ವದಲ್ಲಿರುವ ಬಿಎಂಟಿಸಿ ಬಸ್ ಮಾರ್ಗಗಳು ಅಂಜನಾಪುರ ಮುಖ್ಯರಸ್ತೆ ಮತ್ತು ಕೆಂಗೇರಿ-ಗೊಟ್ಟಿಗೆರೆ ರಸ್ತೆಯಲ್ಲಿ ನಿಲ್ಲುತ್ತವೆ. ಇದು ಈ ಭಾಗದ ಹಿರಿಯ ನಾಗರಿಕರಿಗೆ ಕಾಲ್ನಡಿಗೆಯಲ್ಲಿ ಹೋಗಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ದುಬಾರಿ ಆಟೋರಿಕ್ಷಾಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಬನಶಂಕರಿಯಿಂದ ಜಂಬೂಸವಾರಿ ದಿನ್ನೆಗೆ ತೆರಳುವ ಬಸ್ಗಳನ್ನು ವಿನಾಯಕ ಚಿತ್ರಮಂದಿರದ ನಿಲ್ದಾಣದಲ್ಲಿ ತಿರುಗಿಸಿ 60 ಅಡಿ ರಸ್ತೆಯಲ್ಲಿ ಎಚ್ಎಂ ವರ್ಲ್ಡ್ ಸಿಟಿ ಮತ್ತು ನಂದಿ ಗಾರ್ಡನ್ ಮೂಲಕ ಸಾಗಿ, ಹಲವು ಅಪಾರ್ಟ್ಮೆಂಟ್ಗಳ ಮೂಲಕ ಹಾದು ಹೋಗುವ 80 ಅಡಿ ರಸ್ತೆಗೆ ಬಂದು ನಂತರ ರಾಯಲ್ ಲೇಔಟ್ ನಿಲ್ದಾಣ್ ಬಳಿ ಗೊಟ್ಟಿಗೆರೆ ರಸ್ತೆಗೆ ಸೇರುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಬಿಎಂಟಿಸಿಯ ದಕ್ಷಿಣ ವಿಭಾಗೀಯ ಸಂಚಾರ ಅಧಿಕಾರಿ ಮಹೇಶ್ ಹೇಳುವಂತೆ, "ಸೋಮವಾರದ ನಂತರ ಬಿಎಂಟಿಸಿ ಪ್ರದೇಶದ ನಿವಾಸಿಗಳನ್ನು ಭೇಟಿ ಮಾಡಿ ಸಮೀಕ್ಷೆ ನಡೆಸುತ್ತದೆ. ಅದರ ನಂತರ, ಅವರ ಕೋರಿಕೆಯಂತೆ ಮಾರ್ಗಗಳನ್ನು ತಿರುಗಿಸುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಬಳಿಕ ನಾನು ಅದನ್ನು ನಾಗರಿಕರಿಗೆ ತಿಳಿಸುತ್ತೇವೆ" ಎಂದಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications