Firecraker: ಬೆಂಗಳೂರು ಹವಾಮಾನ ರಕ್ಷಣೆಗೆ ವಿಶೇಷ ತಂಡ ರಚನೆ
ಬೆಂಗಳೂರು, ನವೆಂಬರ್ 14: ಸಿಲಿಕಾನ್ ಸಟಿಯಲ್ಲಿ ಪಟಾಕಿಗಳ ಅಕ್ರಮ ಮಾರಾಟ ತಡೆಯಲು ಹಾಗೂ ಪಟಾಕಿ ಮಾರಾಟದ ಮೇಲೆ ಹದ್ದಿನ ಕಣ್ಣಿಡಲು ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಮೂಲಕ ದೀಪಾವಳಿ ಸಂದರ್ಭದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಸೋಮವಾರವಷ್ಟೇ ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ. ರಚನೆಯಾದ ಈ ವಿಶೇಷ ತಂಡಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳು ಇದ್ದಾರೆ ಎಂದು ತಿಳಿಸಿದರು.

ಈ ವಿಶೇಷ ತಂಡಗಳ ಸದಸ್ಯರು ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ವಾಯು ಮಾಲಿನ್ಯವನ್ನು ಮಾಡುವವರ ವಿರುದ್ಧ ಹಾಗೂ ನಿಷೇಧಿತ ಪಟಾಕಿ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಈಗಾಗಲೇ ರಾಜ್ಯ ಸರ್ಕಾರ ಹಸಿರು ಪಟಾಕಿಗಳನ್ನು ಸಾರ್ವಜನಿಕರಿಗೆ ಅವಕಾಶ ನೀಡಿದೆ. ಹೀಗಿದ್ದರೂ ಸಹಿತ ದುರದೃಷ್ಟವಶಾತ್, ತಮಿಳುನಾಡಿನ ಹೊಸೂರಿನಿಂದ ಹಲವಾರು ಜನರು ಮಾಲಿನ್ಯಕಾರಕ ಪಟಾಕಿಗಳನ್ನು ತಂದು ಹೊಡೆಯುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪಟಾಕಿ ದುರಂತ: ಪಟಾಕಿ ಸಂಪೂರ್ಣ ನಿಷೇಧಕ್ಕೆ ಚಿಂತನೆ
ಇತ್ತೀಚೆಗೆ ನಗರದ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ ಒಟ್ಟು 17 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ಎಲ್ಲ ಹಬ್ಬಗಳಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ. ಹಬ್ಬದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಿದೆ. ಸದ್ಯ ದೀಪಾವಳಿಯಲ್ಲಿ ಈ ನಿಯಮ ಮೀರಿ ಮಾಲಿನ್ಯಕಾರಕ ಪಟಾಕಿಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದರು.
ಬೆಂಗಳೂರಿನ ಹಾವಾಮಾನ ರಕ್ಷಿಸಬೇಕು
ಬೆಂಗಳೂರಿನಲ್ಲಿ ಪಟಾಕಿ ಹೊಡೆವುದರಿಂದ ಮಾಲಿನ್ಯ ಹೆಚ್ಚಾಗಿದೆ. ಬೆಂಗಳೂರು ಉತ್ತಮ ಗಾಳಿ, ತಂಪು, ಹಸಿರು ಹೀಗೆ ತನ್ನದೇ ಉತ್ತಮ ಹವಾಮಾನ ಹೊಂದಿದೆ. ಇದರಿಂದ ಸಿಲಿಕಾನ್ ಸಿಟಿ ಅಚ್ಚುಮೆಚ್ಚಾಗಿದೆ. ನಗರದ ಹವಾಮಾನವನ್ನು ರಕ್ಷಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.
ಹಬ್ಬಗಳ ಸಮಯದಲ್ಲಿ ನವದೆಹಲಿಯಂತಹ ವಾತಾವರಣೆ ಬೆಂಗಳೂರಿಗೆ ಬೇಕಿಲ್ಲ. ಪಟಾಕಿಗಳು ವಾತಾವರಣವನ್ನು ಕಲುಷಿತಗೊಳಿಸುವುದಲ್ಲದೆ ರೋಗಿಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಹಾಗಾಗಿ, ಮಾಲಿನ್ಯಕಾರಕ ಪಟಾಕಿಗಳನ್ನು ಸಿಡಿಸದೇ ಕೇವಲ ಹಸಿರು ಪಟಾಕಿ ಹೊಡೆಯಬೇಕು. ಇಂತಹ ವಿಚಾರಗಳ ಕುರಿತು ಜನರು ಹೆಚ್ಚು ಜಾಗೃರಾಗಬೇಕು ಎಂದು ಸಚಿವರು ತಿಳಿಸಿದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications