ಮಹಿಳಾ ಡಿಜೆ ಜತೆ ಡೆಲಿವರಿ ಬಾಯ್ ಅಸಭ್ಯ ವರ್ತನೆ
ಬೆಂಗಳೂರು, ಜನವರಿ 23 : ಆನ್ ಲೈನ್ ಮೂಲಕ ಆರ್ಡರ್ ಪಡೆದ ಫುಡ್ ಸಪ್ಲೈ ಕಂಪನಿಯೊಂದರ ಡೆಲಿವರಿ ಬಾಯ್ ಮಹಿಳಾ ಡಿಜೆ ಜತೆ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಹಿಳೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಾಹ್ನ ಸ್ವಿಗ್ಗಿ ಡಾಟ್ ಕಾಮ್ ನಿಂದ ಫುಡ್ ಆರ್ಡರ್ ಮಾಡಿದ್ದರು. ವಿಗ್ನೇಶ್ ಹೆಸರಿನ ಡೆಲಿವರಿ ಬಾಯ್ ತನ್ನ ಮೊಬೈಲ್ ಫೋನ್ ನಿಂದ ಕರೆ ಮಾಡಿ ಸಂಪರ್ಕಿಸಿದ್ದ. ಎಲ್ಲಿಗೆ ತಲುಪಿಸ ಬೇಕು ಎಂದು ಕೇಳಿದ್ದ. ಮಹಿಳೆಯು ತಾನು ಇರುವ ವಿಳಾಸ ತಿಳಿಸಿ ಮೊದಲನೇ ಮಹಡಿಯಲ್ಲಿ ತಾನು ಇರುವುದಾಗಿ ತಿಳಿಸಿದ್ದರು.
ಡೆಲಿವರಿ ಬಾಯ್ ಮತ್ತೊಮ್ಮೆ ಕರೆ ಮಾಡದೆ ನೇರವಾಗಿ ಗೇಟ್ ತೆಗೆದು ಒಳಗೆ ಪ್ರವೇಶಿಸಿದ್ದಾನೆ. ಇದನ್ನು ಮಹಿಳೆ ಪ್ರಶ್ನಿಸದೆ ಅವರಿಗೆ ಹಣ ನೀಡಿ ಆಹಾರವನ್ನು ಪಡೆದಿದ್ದಾಳೆ. ನಂತರ ಮನೆಯಲ್ಲಿ ನೀವೊಬ್ಬರೇ ಇರುವುದಾ ಎಂದು ಪ್ರಶಸ್ನಿಸಿದ್ದಾನೆ. ಅವನ ಹಾವಭಾವ ಗಮನಿಸಿದ ಮಹಿಳೆ ಮನೆಯಿಂದ ಹೊರನಡೆದಿದ್ದಾಳೆ.

ಆದರೆ ಅಷ್ಟಕ್ಕೇ ಸುಮ್ಮನಿರದ ಅವನು ಮಹಿಳೆಯನ್ನು ಹಿಂಬಾಲಿಸಿದ್ದಾನೆ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಮಹಿಳೆ ಹಾಗೂ ಡೆಲಿವರಿ ಬಾಯ್ ನಡುವಿನ ಜೋರು ಮಾತುಗಳನ್ನು ಆಲಿಸಿದ ಬೀದಿ ನಾಯಿಗಳು ಬಂದು ಆತನನ್ನು ನೋಡಿ ಬೊಗಳಲು ಪ್ರಾರಂಭಿಸಿದಾಗ ಅಲ್ಲಿಂದ ಆತನ ಕಾಲ್ಕಿತ್ತಿದ್ದಾನೆ.
ಸಾಮಾನ್ಯವಾಗಿ ಮನೆ ಮಾಲೀಕರ ಸೂಚನೆ ಮೇರೆಗೆ ಡೆಲಿವರಿ ಬಾಯ್ ಗೆ ಗೇಟ್ ನಿಂದ ಆಚೆಯೇ ನಿಲ್ಲುವಂತೆ ಸೂಚಿಸಲಾಗಿತ್ತು. ಆದರೂ ಗೇಟ್ ತೆಗೆದು ಒಳಗೆ ಪ್ರವೇಶಿಸಿದ್ದ. ಈ ಕುರಿತು ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications