ಅವರಿಗೆ ಬುದ್ದಿ ಬರೋದು ಇನ್ಯಾವಾಗ? ತೀವ್ರ ವಿಷಾದ ವ್ಯಕ್ತ ಪಡಿಸಿದ ರೋಷನ್ ಬೇಗ್
ಬೆಂಗಳೂರು, ಆ 13: ಮಾಜಿ ಶಾಸಕ, ಹಾಲೀ ಬಿಜೆಪಿ ಮುಖಂಡ ರೋಷನ್ ಬೇಗ್, ಮಂಗಳವಾರ (ಆ 11) ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತ ಪಡಿಸಿದ್ದಾರೆ.
Recommended Video
ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಬೇಗ್, "ಹಿಂದೆಯೂ ಈ ರೀತಿಯ ಘಟನೆಯು ನಡೆದಿತ್ತು. ಇಂತವರಿಂದ ಇಡೀ ಸಮುದಾಯಕ್ಕೆ ಕೆಟ್ಟ ಹೆಸರು. ಇವರೆಲ್ಲಾ ಬುದ್ದಿ ಕಲಿಯೋದು ಯಾವಾಗ"ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
"ಹಿಂದೊಮ್ಮೆ ಆಂಗ್ಲ ದೈನಿಕದಲ್ಲಿ (ಡೆಕ್ಕನ್ ಹೆರಾಲ್ಡ್) ಲೇಖನವೊಂದು ಪ್ರಕಟವಾಗಿದ್ದಕ್ಕೆ ಇದೇ ರೀತಿಯ ಗಲಭೆ ನಡೆದಿತ್ತು. ಅದಾದ ನಂತರ, ಮೊನ್ನೆಯ ಘಟನೆ ನಡೆದಿದೆ. ಇದು ಇಸ್ಲಾಂಗೆ ವಿರುದ್ದವಾದದ್ದು"ಎಂದು ರೋಷನ್ ಬೇಗ್ ಹೇಳಿದ್ದಾರೆ.

"ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದಾರೆ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಗಲಾಟೆ ಮಾಡಿದ್ದಾರೆ. ಇಸ್ಲಾಂ ಧರ್ಮದಲ್ಲಿ ಇದ್ಯಾವುದಕ್ಕೂ ಸ್ಥಾನವಿಲ್ಲ"ಎಂದು ಬೇಗ್ ಹೇಳಿದ್ದಾರೆ.
"ಹಿಂಸಾಚಾರ ನಡೆದಾಗ, ಸ್ಥಳೀಯ ಮುಸ್ಲಿಮರು ಸೇರಿ, ದೇವಸ್ಥಾನವನ್ನು ರಕ್ಷಿಸಿದ್ದಾರೆ. ಅವರಿಗೆಲ್ಲಾ ನನ್ನ ಸಲಾಂ. ಈ ರೀತಿಯ ಸಾಮರಸ್ಯ ನಮ್ಮಲ್ಲಿ ಇರಬೇಕಾಗಿದೆ"ಎಂದು ರೋಷನ್ ಬೇಗ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣದಲ್ಲಿ ಅಪಾರ ಪ್ರಮಾಣವಾದ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಈ ಗಲಭೆಯಲ್ಲಿ ಉಂಟಾದ ನಷ್ಟವನ್ನು ಗಲಭೆಕೋರರಿಂದಲೇ ಭರಿಸಲಾಗುತ್ತದೆ. ಗಲಭೆಕೋರರ ಆಸ್ತಿ ಜಪ್ತಿ ಮಾಡಿ ನಷ್ಟ ಸರಿದೂಗಿಸಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಈಗಾಗಲೇ ಹೇಳಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications