ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
ಬೆಂಗಳೂರು, ಫೆಬ್ರವರಿ 28: ಒಂದಡೆ ಜನ್ಮ ಕೊಟ್ಟ ತಂದೆಯಿಂದಲೇ ಮಾರಣಾಂತಿಕ ಹಲ್ಲೆ. ಇನ್ನೊಂದಡೆ ದೂರು ಕೊಟ್ಟರೂ ಬಂಧಿಸುವ ನಾಟಕವಾಡಿದ ಪೊಲೀಸರಿಂದ ಅನ್ಯಾಯ. ಇದರಿಂದ ನೊಂದ ಮಹಿಳೆ ಪೊಲೀಸ್ ಠಾಣೆಯಿಂದಲೇ ಫೇಸ್ ಬುಕ್ ಲೈವ್ ಮಾಡಿ ಪೊಲೀಸರು ಮಾಡಿದ ಅನ್ಯಾಯದ ಬಗ್ಗೆ ಆಕ್ರೊಶ ವ್ಯಕ್ತಪಡಿಸಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಆಕೆ ಹೆಸರು ಅಮೃತ. ಮೂಲತಃ ತಿಪಟೂರಿನವರಾಗಿದ್ದು, ಕಾವಲ್ ಭೈರಸಂದ್ರದಲ್ಲಿ ವಾಸವಾಗಿದ್ದಾರೆ. ಆಸ್ತಿ ವಿಚಾರವಾಗಿ ತಂದೆ ಭೈರಪ್ಪ ಇತ್ತೀಚೆಗೆ ಅಮೃತಾ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ಈ ಕುರಿತು ತಿಪಟೂರಿನಲ್ಲಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ಭೈರಪ್ಪನ ವಿರುದ್ಧ ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿದ್ದರು. ಎಫ್ಐಆರ್ ದಾಖಲಾದ ಬಳಿಕ ಪ್ರಕರಣವನ್ನು ವಾಪಸು ತೆಗೆದುಕೊಳ್ಳುವಂತೆ ತಂದೆ ಬೈರಪ್ಪ ಅಮೃತಾರಿಗೆ ಧಮ್ಕಿ ಹಾಕಿದ್ದ ಎನ್ನಲಾಗಿದೆ. ಭೈರಪ್ಪ ತನ್ನ ಸಹಚರರೊಂದಿಗೆ ಬಂದು ಹೆದರಿಸಿದ್ದ. ಈ ಕುರಿತು ಅಮೃತಾ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಳ್ಳದೇ ಎನ್ಸಿಆರ್ ಮಾಡಿ ಪೊಲೀಸರು ಸುಮ್ಮನಾಗಿದ್ದರು. ಪೊಲೀಸರ ಕ್ರಮದಿಂದ ಬೇಸತ್ತ ಅಮೃತಾ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಡಿಜಿ ಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅದೇ ರೀತಿ ಆರೋಪಿತ ತಂದೆ ಮತ್ತು ಅವರ ಸಹಚರರನ್ನು ಬಂಧಿಸುವಂತೆ ಅಮೃತಾ ಒತ್ತಾಯ ಮಾಡಿದ್ದರು.

ಆರೋಪಿಗಳನ್ನು ಬಂಧಿಸಬೇಕಾದರೆ ಎರಡು ವಾಹನ ಬೇಕು ಎಂದು ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕಾಗಿ ಎರಡು ವಾಹನವನ್ನು ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ. ಆರೋಪಿತ ತಂದೆಯನ್ನು ಠಾಣೆಗೆ ಕರೆಸಿದ ಪೊಲೀಸರು ಕೂಡಲೇ ಬಿಟ್ಟು ಕಳಿಸಿದ್ದಾರೆ. ಪೊಲೀಸ್ ಠಾಣೆಗೆ ಹೋದ ಕೂಡಲೇ ಅಮೃತಾ ಅವರಿಗೆ ಈ ಸಂಗತಿ ಗೊತ್ತಾಗಿದ್ದು ತನಗಾದ ಅನ್ಯಾಯದ ಬಗ್ಗೆ ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಹಾಕಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಪೊಲೀಸರು ನಡೆದುಕೊಂಡ ರೀತಿ, ಮಾಡಿದ ಅನ್ಯಾಯದ ಬಗ್ಗೆ ವಿಡಿಯೋದಲ್ಲಿ ಅಮೃತಾ ಕಿಡಿ ಕಾರಿದ್ದಾರೆ. ಇಷ್ಟಾದರೂ ಅಮೃತಾ ಅವರಿಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪೊಲೀಸರು ಮುಂದಾಗಿಲ್ಲ. ನ್ಯಾಯಾಲಯ ಆದೇಶದ ಬಳಿಕವೂ ಆರೋಪಿಗಳನ್ನು ಬಂಧಿಸಲು ವಾಹನ ವ್ಯವಸ್ಥೆ ಮಾಡಿಸಿಕೊಂಡಿದ್ದಾರೆ. ಕರೆ ತಂದ ಕೂಡಲೇ ಠಾಣಾ ಜಾಮೀನು ಆಧಾರದ ಮೇಲೆ ಬಿಟ್ಟು ಕಳಿಸಿದ್ದು, ಮಹಿಳೆಯ ಆಕ್ರೋಶಕ್ಕೆ ಕಾರಣವಾಗಿದೆ.
Recommended Video
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು










Click it and Unblock the Notifications