ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ. ಜೆ. ಹಳ್ಳಿ ನಿವಾಸಿಗಳಿಗೆ ಎದುರಾಯ್ತು ಹೊಸ ಆತಂಕ

|
Google Oneindia Kannada News

ಬೆಂಗಳೂರು, ಆಗಸ್ಟ್ 13 : ಮಂಗಳವಾರ ರಾತ್ರಿ ಗಲಭೆ ನಡೆದ ಬೆಂಗಳೂರು ನಗರದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Recommended Video

DJ ಹಳ್ಳಿಯಲ್ಲಿ ಇದೀಗ ಶುರುವಾಯ್ತು ಹೊಸ ಆತಂಕ | Oneindia Kannada

ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿ ಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಲಾಗಿತ್ತು. ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿತ್ತು. ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದಾಗ ಮೂವರು ಮೃತಪಟ್ಟಿದ್ದರು.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ, ಗೃಹಸಚಿವರಿಂದ ಮಹತ್ವದ ಆದೇಶ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ, ಗೃಹಸಚಿವರಿಂದ ಮಹತ್ವದ ಆದೇಶ

ಈ ಪ್ರದೇಶಗಳಲ್ಲಿ ಈಗ ಗಲಭೆ ಹತೋಟಿಗೆ ಬಂದಿದೆ. ಆದರೆ, ಇಲ್ಲಿನ ನಿವಾಸಿಗಳಿಗೆ ಕೊರೊನಾ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಗಲಭೆ ಬಳಿಕ ಆರೋಗ್ಯದ ಬಗ್ಗೆ ಜನರು ಆತಂಕಗೊಂಡಿದ್ದಾರೆ.

ಕಾವಲಭೈರಸಂದ್ರದಲ್ಲಿ ಗಲಭೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಕಾವಲಭೈರಸಂದ್ರದಲ್ಲಿ ಗಲಭೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಕೊರೊನಾ ವೈರಸ್ ಸೋಂಕಿನ ಭೀತಿ

ಕೊರೊನಾ ವೈರಸ್ ಸೋಂಕಿನ ಭೀತಿ

ಮಂಗಳವಾರ ರಾತ್ರಿ ಗಲಭೆ ನಡೆದ ಬೆಂಗಳೂರು ನಗರದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಇಲ್ಲಿನ ನಿವಾಸಿಗಳಿಗೆ ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಎದುರಾಗಿದೆ. ಅದಕ್ಕೆ ಕಾರಣ ಸ್ಥಳಿಯರಲ್ಲದ ಜನರು ಈ ಪ್ರದೇಶಗಳಿಗೆ ಹೆಚ್ಚಾಗಿ ಭೇಟಿ ನೀಡುತ್ತಿರುವುದು.

ವೈದ್ಯರು ಹೇಳುವುದೇನು?

ವೈದ್ಯರು ಹೇಳುವುದೇನು?

ಮಂಗಳವಾರ ರಾತ್ರಿ ಗಲಭೆ ಸಂದರ್ಭದಲ್ಲಿ ಜನರು ಸಾಮಾಜಿಕ ಅಂತರವನ್ನು ಮರೆತು ಗುಂಪಾಗಿ ಸೇರಿದ್ದರು. ಪೊಲೀಸರು, ಮಾಧ್ಯಮದವರು ಸೇರಿದಂತೆ ಹಲವಾರು ಜನರು ಈ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಆದ್ದರಿಂದ, ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ನಿಗಾವಹಿಸಬೇಕು ಎಂದು ವೈದ್ಯರು ಹೇಳಿದ್ದಾರೆ.

ಬೆಂಗಳೂರಲ್ಲಿ ಹೆಚ್ಚು ಪ್ರಕರಣಗಳು

ಬೆಂಗಳೂರಲ್ಲಿ ಹೆಚ್ಚು ಪ್ರಕರಣಗಳು

ರಾಜ್ಯದಲ್ಲಿಯೇ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವುದು ಬೆಂಗಳೂರಿನಲ್ಲಿ. ಬುಧವಾರ ಸಹ ನಗರದಲ್ಲಿ 2802 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 79,840ಕ್ಕೆ ಏರಿಕೆಯಾಗಿದೆ.

ಹಲವಾರು ಜನರು ಭೇಟಿ

ಹಲವಾರು ಜನರು ಭೇಟಿ

ಗಲಭೆ ಸಂದರ್ಭದಲ್ಲಿ ಬೇರೆ ಬೇರೆ ಪ್ರದೇಶದ ಜನರು ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಗೆ ಭೇಟಿ ನೀಡಿರುವ ಸಾಧ್ಯತೆ ಇದೆ. ಅದೇ ರೀತಿ ಈಗ ಭದ್ರತೆಗಾಗಿ ಬೇರೆ ಪ್ರದೇಶ, ರಾಜ್ಯಗಳಿಂದ ಪೊಲೀಸ್ ಪಡೆ ಕರೆಸಲಾಗಿದೆ. ಹಲವಾರು ಜನರು ಆಗಮಿಸುತ್ತಿದ್ದಾರೆ. ಇವರಿಂದಾಗಿ ಕೋವಿಡ್ ಹರಡಬಹುದು ಎಂದು ಆತಂಕ ಎದುರಾಗಿದೆ.

English summary
After violence in DJ Halli now residents panic about COVID 19. Many residents saying that COVID may spread in area because of many people visiting the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X