ಬೆಂಗಳೂರು ಗಲಭೆ: ಎಸ್ಡಿಪಿಐ 17 ಕಾರ್ಯಕರ್ತರ ಬಂಧನ
ಬೆಂಗಳೂರು, ಡಿಸೆಂಬರ್ 21: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಹಿಂಸಾಚಾರಕ್ಕೆ ಪ್ರಚೋದಿಸಿದ ಆರೋಪದಡಿ ಎಸ್ಡಿಪಿಐ ಮತ್ತು ಪಿಎಫ್ಐನ ಹದಿನೇಳು ಮುಖಂಡರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.
ಆಗಸ್ಟ್ 8 ರಂದು ನಡೆದ ಗಲಭೆಯಲ್ಲಿ ಡಿ. ಜೆ. ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಿದ್ದರು. ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ್ ಅವರ ಅಕ್ಕನ ಮಗ ನವೀನ್ ನ ಫೇಸ್ ಬುಕ್ ಪೋಸ್ಟ್ ನಿಂದ ಗಲಾಟೆ ಆರಂಭವಾಗಿತ್ತು. ಅಖಂಡ ಶ್ರೀನಿವಾಸ್ ಅವರ ಮನೆಗೆ ದಾಳಿ ನಡೆಸಿ ಕಲ್ಲು ತೂರುವ ಮೂಲಕ ಗಲಭೆ ಎಬ್ಬಿಸಿದ್ದರು. ಬಳಿಕ ಗಲಭೆಗೆ ಪ್ರಚೋದಿಸಿ ಪೊಲೀಸ್ ಠಾಣೆಗಳಿಗೆ ಬೆಂಕಿ ಇಟ್ಟು ಸಾರ್ವಜನಿಕ ಆಸ್ತಿಗೆ ನಷ್ಟವುಂಟು ಮಾಡಲಾಗಿತ್ತು. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎಸ್ ಡಿಪಿಐ ಹಾಗೂ ಪಿಎಫ್ಐ ಮುಖಂಡರ ಮತ್ತು ಕಾರ್ಯಕರ್ತರ ನಿವಾಸದ ಮೇಲೆ ದಾಳಿ ನಡೆಸಿತ್ತು.
ಎಸ್ಡಿಪಿಐನ ಮುಖಂಡರಾದ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಷರೀಫ್, ಕೆ.ಜಿ.ಹಳ್ಳಿ ವಾರ್ಡ್ ನ ಅಧ್ಯಕ್ಷ ಇಮ್ರಾನ್ ಅಹಮದ್, ರುಭಾ, ಶಬ್ಬೀರ್ ಖಾನ್, ಶಯಿಕ್ ಅಜ್ಮಲ್, ಗಲಭೆಗೆ ಪ್ರಚೋದನೆ ನೀಡಿರುವುದು ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಲಭೆ ದಿನ ಸಂಜೆ ಥಣಿಸಂದ್ರದಲ್ಲಿ ಸಭೆ ಸೇರಿ ಕೆ.ಜಿ. ಹಳ್ಳಿ ಠಾಣೆ ಮೇಲೆ ದಾಳಿ ನಡೆಸಲು ತೀರ್ಮಾನಿಸಿದ್ದರು. ಅದರಂತೆ ಕೆ.ಜಿ.ಹಳ್ಳಿ ಠಾಣೆ ಹಾಗೂ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಪೊಲೀಸರ ಮೇಲೂ ಕಲ್ಲು ತೂರಿದ್ದರು. ಇದೇ ವೇಳೆ ನಾಗವಾರದ ಎಸ್ಡಿಪಿಐ ಮುಖಂಡ ಅಬ್ಬಾಸ್ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿ ಸಾರ್ವಜನಿಕ ಆಸ್ತಿಗೆ ನಷ್ಟವುಂಟು ಮಾಡಲು ಪ್ರಚೋದನೆ ನೀಡಿರುವುದು ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್, ವಾಟ್ಸಪ್, ಬಳಸಿ ಗಲಭೆಯ ಸಂದೇಶ ರವಾನಿಸಿದ್ದರು. ಇದರಿಂದ ಕೆ.ಜಿ. ಹಳ್ಳಿಯಿಂದ ದೂರ ಇರುವರೂ ಬಂದು ಹಿಂಸಾಚಾರದಲ್ಲಿ ತೊಡಗಿದ್ದರು. ಆರೋಪಿ ಸದ್ಧಾಂ, ಸಯ್ಯದ್ ಸೊಹೇಲ್, ಕಲೀಮುಲ್ಲಾ ಸಾಮಾಜಿಕ ಜಾಲ ತಾಣ ಬಳಿಸ ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಎನ್ಐಎ ಹೇಳಿದೆ.
ಡಿ.ಜೆ ಹಳ್ಳಿ ಕೆ.ಜಿ. ಹಳ್ಳಿ ಗಲಭೆ ಸಂಬಂಧ ಈವರೆಗೂ 187 ಆರೋಪಿಗಳನ್ನು ಎನ್ಐಎ ಬಂಧಿಸಿದ್ದು, ತನಿಖೆ ಮುಂದುವರೆದಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications