ಡಿ.ಜೆ ಹಳ್ಳಿ ಗಲಭೆ: ನಷ್ಟ ಪರಿಹಾರಕ್ಕೆ ಅರ್ಜಿ ಸಲ್ಲಿಸಿ
ಬೆಂಗಳೂರು, ಫೆಬ್ರವರಿ 19: ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಸಂಬಂಧ ಕ್ಲೇಮ್ ಕಮೀಷನ್ ರಚನೆಯಾಗಿ ಆರು ತಿಂಗಳಾದರೂ ನಷ್ಠ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಕೇವಲ ಮೂರು ಮಾತ್ರ ! ಒಂದಡೆ ಮೂಲ ಸೌಲಭ್ಯ ಇಲ್ಲದೇ ಸೊರಗಿದ್ದ ನಿವೃತ್ತ ನ್ಯಾ. ಕೆಂಪಣ್ಣ ನೇತೃತ್ವದ ಕ್ಲೇಮ್ ಕಮೀಷನ್ ಗಲಭೆಯಲ್ಲಿ ಹಾನಿಯಾದ ನಷ್ಟ ಪರಿಹಾರ ಕೋರಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿದೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ವಿವರ ಹಂಚಿಕೊಂಡ ನಿವೃತ್ತ ನ್ಯಾ. ಕೆಂಪಣ್ಣ ಅವರು, ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಯಲ್ಲಿ ಸಾರ್ವಜನಿಕರು ಅಪಾರ ಪ್ರಮಾಣದ ಆಸ್ತಿ ನಷ್ಟವುಂಟಾಗಿತ್ತು. ಆಸ್ತಿ ಹಾನಿ ಮಾಡಿದ ಆರೋಪಿಗಳಿಂದಲೇ ದಂಡ ವಸೂಲಿ ಮಾಡುವ ಬಗ್ಗೆ ಹೈಕೋರ್ಟ್ ಕ್ಲೇಮ್ ಕಮೀಷನ್ ನೇಮಿಸಲು ನಿರ್ದೇಶಿಸಿತ್ತು.ಅದರಂತೆ ಕಳೆದ ವರ್ಷ ಆಗಸ್ಟ್ ನಲ್ಲಿ ಕ್ಲೇಮ್ ಕಮೀಷನ್ ರಚನೆಯಾಗಿತ್ತು. ಆರಂಭದಲ್ಲಿ ಮೂಲ ಸೌಲಭ್ಯ ಕಲ್ಪಿಸದೇ ಸರ್ಕಾರಕ್ಕೆ ಹೈಕೋರ್ಟ್ ಚೀಮಾರಿ ಹಾಕಿತ್ತು. ಇದಾದ ಬಳಿಕ ಬಾಲಬ್ರೂಹಿ ಭವನದಲ್ಲಿ ಕ್ಲೇಮ್ ಕಮೀಷನ್ ನೇಮಕವಾಗಿತ್ತು. ಆರು ತಿಂಗಳು ಕಳೆದರೂ ಮೂರು ಮಂದಿ ಮಾತ್ರ ವಾಹನ ಹಾನಿ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿವೃತ್ತ ನ್ಯಾ. ಕೆಂಪಣ್ಣ ಅವರು ಸುದ್ದಿಗೋಷ್ಠಿ ನಡೆಸಿ ಕ್ಲೇಮ್ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿರುವ ವಿಷಯವನ್ನು ತಿಳಿಸಿದರು.
2020 ಆಗಸ್ಟ್ 11 ರಂದು ಡಿ.ಜೆ.ಹಳ್ಳಿ ಹಾಗೂ ಕೆ.ಜಿ. ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಮೇರೆಗೆ ಕ್ಲೇಮ್ ಕಮೀಷನ್ ರಚನೆ ಮಾಡಲಾಗಿದೆ. ಕಮೀಷನ್ ಬಗ್ಗೆ ಹೆಚ್ಚಿನ ಪ್ರಚಾರದ ಅವಶ್ಯಕತೆ ಇದೆ. ಗಲಭೆಯಲ್ಲಿ ನಷ್ಟಕ್ಕೆ ಒಳಗಾದವರು ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28 ರ ವರೆಗೂ ಗಡುವು ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಗಲಭೆಯಲ್ಲಿ ವಾಹನ ಹಾನಿ ಬಗ್ಗೆ ಮೂರು ಅರ್ಜಿ ಬಂದಿದೆ. ಇನ್ನು ಮನೆಗೆ ಬೆಂಕಿ ಬಿದ್ದ ಬಗ್ಗೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಈಗಾಗಲೇ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಅವರ ಜತೆಗೆ ಬೇರೆ ಯಾರ ಮನೆಗಳಿಗೆ ಹಾನಿಯಾಗಿರುವರಿಂದಲೂ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಫೆ. 28 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಲ್ಲ, ಪರಿಸ್ಥಿತಿ ಅವಲೋಕಿಸಿ ಕಾಲಾವಕಾಶ ನೀಡಲೂ ಬಹುದು. ಪ್ರತಿಭಟನೆ, ಜಾಥಾ, ಗಲಾಟೆ, ಹರತಾಳ, ಗಲಭೆಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಯನ್ನು ನಷ್ಟ ಮಾಡಿದ್ರೆ ಅಂತವರಿಂದ ನಷ್ಟ ವಸೂಲಿ ಮಾಡುವ ಉದ್ದೇಶದಿಂದ ಕ್ಲೇಮ್ ಕಮೀಷನ್ ರಚನೆ ಮಾಡಲಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿಗಳು ತಿಳಿಸಿದರು.

Recommended Video
ಅರ್ಜಿ ಜತೆ ಏನೇನು ಸಲ್ಲಿಸಬೇಕು: ಹೆಸರು ಮತ್ತು ಅಂಚೆ ವಿಳಾಸ, ದೂರವಾಣಿ ಸಂಖ್ಯೆ ಕಡ್ಡಾಯವಾಗಿ ಸಲ್ಲಿಸಬೇಕು. ಅಡಿಯೋ ವಿಡಿಯೋ ಸಾಕ್ಷಾಧಾರಗಳಿದ್ದರೆ ಸಲ್ಲಿಸಬೇಕು. ಅಡಿಯೋ, ವಿಡಿಯೋ ನೈಜತೆ ಬಗ್ಗೆ ಸಾಕ್ಷ್ಯವನ್ನು ದಾಖಲಿಸಬೇಕು. ಹಾನಿಗೊಳಗಾದ ವಸ್ತು, ಮನೆ, ಕಟ್ಟಡ ಸ್ವರೂಪ ವಿವರಣೆ ದಾಖಲೆಗಳು, ಹಾನಿಗೊಳಗಾದ ಸ್ವತ್ತಿನ ಮೌಲ್ಯ. ಅಡಿಯೋ, ವಿಡಿಯೋ ಮೂಲ ರೆಕಾರ್ಡ್ ಮಾಡದಿದ್ದಲ್ಲಿ ಅವುಗಳ ಮೂಲವನ್ನು ಸಲ್ಲಿಸಬೇಕು.ಅರ್ಜಿದಾರರ ಲಿಖಿತ ಹೇಳಿಕೆ ಬೆಂಬಲಿಸುವ ಸಾಕ್ಷಾಧಾರಿಗಳೂ ಇದ್ದಲ್ಲಿ, ಅವರ ಹೆಸರು ಮತ್ತು ವಿಳಾಸ. ಆಸ್ತಿ ನಷ್ಟದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಲ್ಲಿ ಅದರ ವಿವರಗಳು ಸಲ್ಲಿಸಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications