ಡಿ.ಕೆ. ಸಹೋದರರನ್ನು ರಾಜರಾಜೇಶ್ವರಿ ನಗರದಿಂದ ಹೊರ ಹಾಕಿ!
ಬೆಂಗಳೂರು, ಅ. 30: ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಚುನಾವಣೆ ನಡೆಯುತ್ತಿದೆ. ಹೀಗಾಗಿ ಅವರ ಆಸ್ತಿತ್ವ ಉಳಿಸಿಕೊಳ್ಳಲು ಅಕ್ರಮಗಳ ಮೇಲೆ ಅಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದರು.
ಹೀಗಾಗಿಯೇ ಅಕ್ಟೋಬರ್ 19 ರಂದು ಮುನಿರತ್ನ ಅವರು ಚುನಾವಣಾ ಅಯೋಗಕ್ಕೆ ದೂರನ್ನು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದವರು ವೋಟರ್ ಐಡಿ ಕಾರ್ಡ್ಗಳನ್ನು ಸಂಗ್ರಹಿಸಿ, ನಮ್ಮ ಅಭ್ಯರ್ಥಿ ಮುನಿರತ್ನ ಅವರ ಮೇಲೆ ಹಾಕಿದ್ದಾರೆ. ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ವೋಟರ್ ಐಡಿ ಕಾರ್ಡ್ಗಳನ್ನು ಸಂಗ್ರಹಿಸಿರುವ ಮಾಹಿತಿಯನ್ನು ಆಯೋಗಕ್ಕೆ ಕೊಟ್ಟಿದ್ದೇವೆ.

ನಾರಾಯಣಸ್ವಾಮಿ ಹಾಗೂ ಇತರರು, ಒಂದು ಸಾವಿರಕ್ಕೂ ಹೆಚ್ಚು ಐಡಿ ಕಾರ್ಡ್ಗಳನ್ನು ಸಂಗ್ರಹಿಸಿ ಚಿತ್ರೀಕರಣ ಮಾಡಿ ಅಯೋಗಕ್ಕೆ ನೀಡಿದ್ದಾರೆ. ಅದು ಸುಳ್ಳು ಎಂಬುದು ಅಯೋಗಕ್ಕೂ ಮನವರಿಕೆ ಆಗಿದೆ. ರಾಜರಾಜೇಶ್ವರಿನಗರ, ನಂದಿನಿಲೇಔಟ್ ಹಾಗೂ ಯಶವಂತಪುರ ಪೊಲೀಸ್ ಠಾಣೆಗಳು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.

Recommended Video
ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಅಕ್ರಮ ಮಾಡುತ್ತಿರುವುದು ಡಿಕೆ ಬ್ರದರ್ಸ್, ನಮ್ಮ ಅಭ್ಯರ್ಥಿಯಲ್ಲ. ಅಧಿಕಾರಿಗಳ ವಿರುದ್ಧ ದಬ್ಬಾಳಿಕೆ ಮಾಡುವುದು, ಒತ್ತಡ ಹಾಕುವುದನ್ನು ಮಾಡಬಾರದು. ಇಂದಿನಿಂದ ಮೂರು ದಿನಗಳ ಕಾಲ ಚುನಾವಣಾ ಅಕ್ರಮ ಮಾಡಲು ಸರಿಯಾದ ಸಮಯ. ಈ ನಿಟ್ಟಿನಲ್ಲಿ ಡಿ.ಕೆ. ಸುರೇಶ್ ಕ್ಷೇತ್ರಕ್ಕೆ ಕಾಲಿಡಬಾರದು. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಆಖಾಡದಿಂದ ಡಿಕೆ ಸಹೋದರರನ್ನು ಹೊರ ಹಾಕಿ ಎಂಬುದಷ್ಟೇ ನಮ್ಮ ಆಗ್ರಹ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications