ಡಿಕೆ ರವಿ ಸಾವು : ಎಂ.ಎನ್.ರೆಡ್ಡಿ ವಿರುದ್ಧ ದೂರು
ಬೆಂಗಳೂರು, ಮಾ. 19 : ಐಎಎಸ್ ಅಧಿಕಾರಿ ಡಿಕೆ ರವಿ ಅಸಹಜ ಸಾವಿನ ಕುರಿತು ಹೇಳಿಕೆ ನೀಡಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಮಾನವ ಹಕ್ಕು ಕಾರ್ಯಕರ್ತರೊಬ್ಬರು ಈ ದೂರು ನೀಡಿದ್ದಾರೆ.
ಗುರುವಾರ ಮಾನವ ಹಕ್ಕು ಕಾರ್ಯಕರ್ತ ಗಿರೀಶ್ ಗೌಡ ಅವರು ಲೋಕಾಯುಕ್ತಕ್ಕೆ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ವಿರುದ್ಧ ದೂರು ನೀಡಿದ್ದಾರೆ. ಡಿ.ಕೆ.ರವಿ ಅವರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಯುವ ಮುನ್ನವೇ ಎಂ.ಎನ್.ರೆಡ್ಡಿ ಅವರು ಇದು ಆತ್ಮಹತ್ಯೆ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. [ಈ ಸಾವು ನ್ಯಾಯವೇ ಮತ ಹಾಕಿ]

ಪ್ರಕರಣದ ಬಗ್ಗೆ ತನಿಖೆ ನಡೆಯುವ ಮುನ್ನವೇ ರೆಡ್ಡಿಯವರು ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಹಾಗೂ ಅಲೋಕ್ ಕುಮಾರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ. [ಡಿಕೆ ರವಿ ಸಾವು, ಗುರುವಾರದ ಪ್ರಮುಖ ಘಟನೆಗಳು]
ಎಂ.ಎನ್.ರೆಡ್ಡಿ ಏನು ಹೇಳಿದ್ದರು : ಪ್ರೆಸ್ಟೀಜ್ ಗ್ರೂಪ್ಗೆ ಸೇರಿದ 'ಸೇಂಟ್ ಜಾನ್ಸ್ವುಡ್ ಅಪಾರ್ಟ್ಮೆಂಟ್'ನಲ್ಲಿ ಸೋಮವಾರ ಸಂಜೆ ಡಿ.ಕೆ.ರವಿ ಅವರ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಂ.ಎನ್.ರೆಡ್ಡಿ ಅವರು, ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣುತ್ತದೆ. ಸಮಗ್ರ ತನಿಖೆ ಬಳಿಕ ನಿಜ ಬಯಲಾಗಲಿದೆ ಎಂದು ಹೇಳಿದ್ದರು. [ಸಿಬಿಐ ತನಿಖೆ ಸರಕಾರ ಏಕೆ ಬೇಡ ಎನ್ನುತ್ತಿದೆ?]

ಡಿಕೆ ರವಿ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದ ಬಗ್ಗೆ ನಮಗೆ ಮಾಹಿತಿ ಇಲ್ಲ. ಬೆದರಿಕೆ ಕರೆಗಳ ಬಗ್ಗೆ ಅವರು ತಮ್ಮ ಹಿರಿಯ ಅಧಿಕಾರಿಗಳಿಗೂ ಯಾವುದೇ ವಿಷಯ ತಿಳಿಸಿರಲಿಲ್ಲ ಮತ್ತು ಪೊಲೀಸ್ ರಕ್ಷಣೆ ಸಹ ಕೋರಿರಲಿಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications