ಶಿವಕುಮಾರ್ ಬಂಧನದಲ್ಲಿ ಅನರ್ಹ ಶಾಸಕರ ಕೈವಾಡವಿಲ್ಲ: ಬಿಸಿ ಪಾಟೀಲ್

ಬೆಂಗಳೂರು, ಸೆಪ್ಟೆಂಬರ್ 6: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನದ ಹಿಂದೆ ಅನರ್ಹ ಶಾಸಕರ ಕೈವಾಡವಿಲ್ಲ ಎಂದು ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಕೆಲವರು ಶಿವಕುಮಾರ್ ಬಂಧನದ ಹಿಂದೆ ಅನರ್ಹ ಶಾಸಕರ ಕೈವಾಡವಿದೆ ಎಂದುಕೊಂಡಿದ್ದಾರೆ.

ಹಾಗೆಯೇ ಅನರ್ಹ ಶಾಸಕರ ಬಗ್ಗೆ ಕೆಟ್ಟದಾದ ಮಾತುಗಳನ್ನಾಡುತ್ತಿದ್ದಾರೆ ಇದು ಬೇಸರ ತಂದಿದೆ. ಅವರ ಬಂಧನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

disqualified mla

ಡಿಕೆ ಶಿವಕುಮಾರ್ ಬಂಧನವಾಗುತ್ತಿದ್ದಂತೆ,ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ, ದೇವೇಗೌಡರು, ಸದಾನಂದಗೌಡ ಸೇರಿದಂತೆ ಹಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಕಾನೂನಿನ ಮುಂದೆ ಎಲ್ಲರೂ ಸಮಾನರು, ಯಾರು ತಪ್ಪು ಮಾಡಿದ್ದಾರೋ ಅವರಿ ಶಿಕ್ಷೆಯಾಗುತ್ತದೆ. ತಪ್ಪು ಮಾಡದವರಿಗೆ ಶಿಕ್ಷೆ ಆಗಲ್ಲ ಅಷ್ಟೇ ಇದೇ ವೇಳೆ ಅನರ್ಹರಾಗಿರೋ ನಾವು ಸುಪ್ರೀಂ ಕೊರ್ಟಿನಲ್ಲಿ ಗೆದ್ದು ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಮಾತು ಕೇಳಿಕೊಂಡು ಸ್ಪೀಕರ್ ರಮೇಶ್ ಕುಮಾರ್ ಅನ್ಯಾಯ ಮಾಡಿದರು ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+