ಕನಕಪುರದಿಂದ ಡಿಕೆಶಿ ಸಹೋದರರು, ಗೂಂಡಾಗಳನ್ನು ಕರೆಸಿ ಮುನಿರತ್ನಗೆ ಬೆಂಬಲ!
ಬೆಂಗಳೂರು, ಅ 26: "ಉಪಚುನಾವಣೆ ಗೆಲ್ಲಲು ಒಂದು ಕಡೆ ಜಾತಿ, ಇನ್ನೊಂದು ಕಡೆ ಅಧಿಕಾರ ಬಳಸಲಾಗುತ್ತಿದೆ. ಕೊರೊನಾ ವೈರಸ್ ಗಿಂತಲೂ ಇಂತಹ ನಾಯಕರು ಅಪಾಯಕಾರಿ. ಮತದಾರರಿಗೆ ಹಣ, ಹೆಂಡ ಹಂಚಿದ್ದಾಯಿತು, ಈಗ ಸೆಟ್ಟಾಪ್ ಬಾಕ್ಸ್ ನೀಡುತ್ತಿದ್ದಾರೆ" ಎಂದು ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಹೇಳಿದರು.
"ನಗರದ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜಾತಿ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಹುಟ್ಟಿದಾಗ ಜಾತಿ-ಜಾತಕ, ಮಧ್ಯದಲ್ಲಿ ನಾಟಕ, ಸತ್ತಾಗ ಸೂತಕ ಎಂದು ಎಲ್ಲರಿಗೂ ಗೊತ್ತಿದೆ. ಜಾತಿ ಬಿಟ್ಟು, ಅಭಿವೃದ್ಧಿ ಬಗ್ಗೆ ಮಾತನಾಡಬೇಕು. ಸರಕಾರ ಮ್ಯಾಚ್ ಫಿಕ್ಸಿಂಗ್ ರೀತಿ ವೋಟ್ ಫಿಕ್ಸಿಂಗ್ ಮಾಡಿರುವಂತೆ ಕಾಣುತ್ತಿದೆ"ಎಂದು ಶರವಣ ಆರೋಪಿಸಿದ್ದಾರೆ.
"ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣಾ ಅಕ್ರಮ ಎಸಗುತ್ತಿದ್ದರೂ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತಿಲ್ಲ" ಎಂದು ಶರವಣ ಬೇಸರ ವ್ಯಕ್ತಪಡಿಸಿದರು. ಬಿಜೆಪಿ ಅಭ್ಯರ್ಥಿ ಶಾಸಕ ಸ್ಥಾನ ಮಾರಾಟ ಮಾಡಿಕೊಂಡಿದ್ದಕ್ಕೆ ಉಪಚುನಾವಣೆ ಬಂದಿದೆ. ಆದರೆ, ಫೇಸ್ಬುಕ್ಗಳಲ್ಲಿ ನಮ್ಮ ಅಭ್ಯರ್ಥಿ ಮಾರಾಟವಾಗಿದ್ದಾರೆ ಎಂದು ಸುಳ್ಳುಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹಬ್ಬಿಸಲಾಗುತ್ತಿದೆ" ಎಂದು ಶರವಣ ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ಮೂಲಕ ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು. ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ ಮತ್ತು ಕಾಂಗ್ರೆಸ್ನವರು. "ಕನಕಪುರದಿಂದ ಡಿಕೆಶಿ ಸಹೋದರರು, ಗೂಂಡಾಗಳನ್ನು ಕರೆಸಿ ಮುನಿರತ್ನಂಗೆ ಬೆಂಬಲ ನೀಡುತ್ತಿದ್ದಾರೆ" ಎಂದು ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ.

ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ ಮತ್ತು ಕಾಂಗ್ರೆಸ್ನವರು
"ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ ಮತ್ತು ಕಾಂಗ್ರೆಸ್ನವರು ಮಾರಾಟವಾಗಿದ್ದಾರೆ. ನನ್ನ ಮೇಲೆ ಭಯ ಹುಟ್ಟಿರುವುದರಿಂದಲೇ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸುಖಾ ಸುಮ್ಮನೇ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನಮ್ಮ ನಾಯಕರು ಟಿಕೆಟ್ ಕೊಟ್ಟಿದ್ದೇ ತಪ್ಪಾ..? ಯುವಕರು ಬೆಳೆಯಬಾರದಾ" ಎಂದು ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪ್ರಶ್ನಿಸಿದ್ದಾರೆ.

ಐಎಎಸ್ ಅಧಿಕಾರಿ ಡಿ.ಕೆ.ರವಿ
ಚುನಾವಣೆ ವೇಳೆ ಹನುಮಂತರಾಯಪ್ಪ ಅವರಿಗೆ ಒಕ್ಕಲಿಗರ ಮೇಲೆ ಪ್ರೀತಿ ಬಂದಿದೆ. ಜಾತಿ ಹೆಸರು ಹೇಳುವುದಕ್ಕಿಂತ ಮುಂಚೆ ಸಮಾಜಕ್ಕೆ ನೀವು ಏನು ಮಾಡಿದ್ದೀರಿ ಎಂಬುದನ್ನು ಹೇಳಬೇಕು. ಐಎಎಸ್ ಅಧಿಕಾರಿ ಡಿ.ಕೆ.ರವಿ ಕುಟುಂಬ ಕೂಡ ಒಕ್ಕಲಿಗರೇ ಅವರಿಗೇಕೆ ಸಹಾಯ ಮಾಡಲಿಲ್ಲ. ಕುಮಾರಣ್ಣ, ದೇವೇಗೌಡರು ಒಕ್ಕಲಿಗರೇ. ಚುನಾವಣೆಯಲ್ಲಿ ಜಾತಿ ರಾಜಕಾರಣ ಏಕೆ ಮಾಡುತ್ತಿದ್ದೀರಿ ಎಂದು ಜೆಡಿಎಸ್ ಅಭ್ಯರ್ಥಿ ಪ್ರಶ್ನಿಸಿದರು.

ಕನಕಪುರದಿಂದ ಗೂಂಡಾಗಳನ್ನು ಕರೆಸಿ ಮುನಿರತ್ನಂಗೆ ಬೆಂಬಲ
ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಮಾತನಾಡಿ, ಚುನಾವಣೆ ವೇಳೆ ಭೂತದ ಬಾಯಲ್ಲಿ ಭಗವದ್ಗೀತೆ ಬರುತ್ತಿದೆ. ಮುನಿರತ್ನಂ ನಾಯ್ಡು ಅವರನ್ನು ಬೆಳೆಸಿದ್ದು ಡಿಕೆ ಸಹೋದರರು. ಕನಕಪುರದಿಂದ ಗೂಂಡಾಗಳನ್ನು ಕರೆಸಿ ಮುನಿರತ್ನಂಗೆ ಬೆಂಬಲ ನೀಡಿದ್ದಾರೆ. ಈಗ ಒಕ್ಕಲಿಗ ಕಾರ್ಡ್ನ್ನು ಚುನಾವಣೆಯಲ್ಲಿ ಬಳಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಅಭ್ಯರ್ಥಿಯ ತಂದೆ ಹನುಮಂತರಾಯಪ್ಪ
ಕಾಂಗ್ರೆಸ್ ಅಭ್ಯರ್ಥಿಯ ತಂದೆ ಹನುಮಂತರಾಯಪ್ಪ ಅವರಿಗೆ ದುರಾಸೆ, ಅಧಿಕಾರ ದಾಹ ಇದೆ. ಅವರ ಕೈಯಲ್ಲಿ ಆಗಲಿಲ್ಲ ಅಂತ ತಮ್ಮ ಮಗಳನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ತನ್ನ ಮಗಳಿಗೆ ಅನ್ಯಾಯ ಆಗಿದೆ. ಆದ್ದರಿಂದ, ಒಕ್ಕಲಿಗರೆಲ್ಲಾ ಒಂದಾಗಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕೇಳುತ್ತಿದ್ದಾರೆ. ಒಕ್ಕಲಿಗ ಸಮಾಜಕ್ಕೆ ಯಾವತ್ತಿದ್ದರೂ ದೇವೇಗೌಡರು, ಕುಮಾರಸ್ವಾಮಿ ಅವರೇ ನಾಯಕರು ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications