DG & IGP ಪ್ರವೀಣ ಸೂದ್ 'ನಾಲಾಯಕ್' ಎಂದು ಬೈದ ಡಿಕೆ ಶಿವಕುಮಾರ್: ಏಕವಚನದಲ್ಲೇ ಡಿಕೆಶಿ ವಾಗ್ದಾಳಿ
ಐಪಿಎಸ್ ಅಧಿಕಾರಿಯೂ ಆದ ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು (DG IGP) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಲಾಯಕ್ ಎಂದು ಕರೆದಿದ್ದಾರೆ. ಅವರು ಹೀಗೆ ಕರೆಯಲು ಕಾರಣವೇನು, ನೀಡಿದ ಎಚ್ಚರಿಕೆ ಏನು? ತಿಳಿಯಿರಿ.
ಬೆಂಗಳೂರು, ಮಾರ್ಚ್ 15: ಹಿರಿಯ ಐಪಿಎಸ್ ಅಧಿಕಾರಿಯೂ ಆಗಿರುವ ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು (DG IGP) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನಾಲಾಯಕ್ ಎಂದು ಕರೆದಿದ್ದಾರೆ. ಅವನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಏಕವಚನದಲ್ಲಿ ಮಾತನಾಡಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (DG IGP) ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ನಾಲಾಯಕ್ ಅಧಿಕಾರಿ ಎಂದು ಡಿ.ಕೆ.ಶಿವಕುಮಾರ್ ಬೈದಿದ್ದಾರೆ. ಅಲ್ಲದೇ ಡಿಜಿಐಜಿಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಅವರು ಹೇಳಿದ್ದಾರೆ.

ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸುದ್ದಿಗಾರರ ಹಲವು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ವೇಳೆ ಈ ರೀತಿ ಬೈದಿದ್ದಾರೆ. 'ಪ್ರವೀಣ್ ಸೂದ್ ಅವನನ್ನು ಗೌರವಾನ್ವಿತ ಅಧಿಕಾರಿ ಎಂದುಕೊಂಡಿದ್ದೆ. ಆದರೆ ಅವನು ಹಾಗಿಲ್ಲ. ಅವನೊಬ್ಬ ನಾಲಾಯಕ್. ಕೂಡಲೇ ಅವನ ಮೇಲೆ ಕೇಸ್ ಹಾಕಿ ಬಂಧಿಸಬೇಕು' ಎಂದು ಆಗ್ರಹಿಸಿದರು.
ಭಾರತೀಯ ಚುನಾವಣೆ ಆಯೋಗದವರು ಈ ಬಗ್ಗೆ ಕ್ರಮ ವಹಿಸಬೇಕು. ಪ್ರವೀಣ್ ಸೂದ್ ಬಂದು ಮೂರು ವರ್ಷ ಆಗಿದೆ, ಇನ್ನು ಎಷ್ಟು ದಿನ ಅವರನ್ನೇ ಇಟ್ಟುಕೊಂಡು ಕೂತಿರುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಈ ಪೊಲೀಸರು ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿದ್ದಾರೆ. ಕಾಂಗ್ರೆಸ್ನವರು ಪ್ರತಿಭಟನೆ, ಹೋರಾಟ ಮಾಡಲು ಬಿಡಲ್ಲ. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ 25 ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿಯವರ ಮೇಲೆ ಒಂದೇ ಒಂದು ಪ್ರಕರಣ ಸಹ ದಾಖಲಿಸಿಲ್ಲ. ಅನೈತಿಕವಾಗಿ ಬಿಜೆಪಿಯವರು ಹೇಳಿದಂತೆ ಕೇಳಿ ಕೊಂಡು ಕೆಲಸ ಮಾಡುವ ಪ್ರವೀಣ್ ಸೂದ್ ಸೇರಿದಂತೆ ಎಲ್ಲ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಈ ಎಲ್ಲ ಪೊಲೀಸರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಆಕ್ರೋಶ ಹೊರಹಾಕಿದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications