ಗೇಟ್ ಬಿದ್ದು ಮೃತಪಟ್ಟ ಬಾಲಕ ನೇತ್ರದಾನ ಮಾಡಿ ಮಾದರಿ: ₹10 ಲಕ್ಷ ಚೆಕ್ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು, ಸೆಪ್ಟಂಬರ್ 25: ಬೆಂಗಳೂರಿನಲ್ಲಿ ಬಿಬಿಎಂಪಿ ಮೈದಾನದಲ್ಲಿ ಆಟವಾಡಲು ತೆರಳಿದ್ದ ಬಾಲಕನ ಮೇಲೆ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿದ್ದರು. ಮೃತ ಬಾಲಕನ ಮನೆಗೆ ಬುಧವಾರ ಉಪಮುಖಮಂತ್ರಿ ಡಿಕೆ ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಾಲಕ ಫೋಟೋಗೆ ಶ್ರದ್ಧಾಂಜಲಿ ಅರ್ಪಿಸಿದರಲ್ಲದೇ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಿ ಧೈರ್ಯ ತುಂಬಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ನಗರದ ಮಲ್ಲೇಶ್ವರಂ ನಲ್ಲಿ ಪಾಲಿಕೆ ಗ್ರೌಂಡ್ನಲ್ಲಿ ಗೇಟ್ ಬಿದ್ದ ಪರಿಣಾಂ ಬಾಲಕ ನಿರಂಜನ್ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಡಿಕೆ ಶಿವಕುಮಾರ್ ಅವರು 10 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ನೀಡಿ ಕುಟುಂಬದವರಿಗೆ ಸಾಂತ್ವನ ತಿಳಿಸಿದರು.

ಬಾಲಕ ನೇತ್ರದಾನ ಮಾಡಿ ಮಾದರಿ
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಬಾಲಕ ಸಾವಿನ ಘಟನೆ ಮನ ಕಲಕುವ ದುರಂತವೆಂದರೆ ತಪ್ಪಾಗಲ್ಲ. ನಿರಂಜನ್ ಆಡುವ ವಯಸ್ಸಿನಲ್ಲಿ ಸಾವಿಗೀಡಾಗಿದ್ದು, ಅದರ ದುಃಖ ಯಾರಿಗೂ ಬೇಡ. ಇದೆಲ್ಲ ಸಂಕಷ್ಟದ ನಡುವೆ, ನೋವಿನಲ್ಲಿಯೇ ಅವರ ಕುಟುಂಬ ಪುತ್ರನ ನೇತ್ರದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ಮೂಲಕ ಬಡತನದಲ್ಲಿ ನಿಜವಾದ ಮಾನವೀಯತೆ ಮೆರೆದಿದ್ದಾರೆ. ನೇತ್ರದಾನದ ಮಹತ್ವ ಸಾರಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮೃತ ಬಾಲಕನ ಕುಟುಂಬಕ್ಕೆ 5ಲಕ್ಷ ರೂಪಾಯಿ ನೀಡಿದ್ದಾರೆ. ಅಲ್ಲದೇ ಬಿಬಿಎಂಪಿ ಐದು ಲಕ್ಷ ರೂಪಾಯಿ ನೀಡಿದೆ. ಇತ್ತ ಮೃತ ಬಾಲಕ ನಿರಂಜನ್ ಸಹೋದರಿಯ ಶಿಕ್ಷಣದ ಸಂಪೂರ್ಣ ಖರ್ಚು ನೋಡಿಕೊಳ್ಳೂವುದಾಗಿ ಆರೋಗ್ಯ ಸದಚಿವರಾದ ದಿನೇಶ್ ಗುಂಡೂರಾವ್ ಅವರ ಫೌಂಡೇಷನ್ ತಿಳಿಸಿದೆ ಎಂದು ಅವರು ಮಾಹಿತಿ ನೀಡಿದರು. ಬಾಲಕನ ಕಳೆದುಕೊಂಡು ಕುಟುಂಬಕ್ಕೆ ಧೈರ್ಯ ತುಂಬಿದರು.

ಸರ್ಕಾರದ ನಿರ್ಲಕ್ಷ್ಯೆಯಿಂದ ಬಾಲಕ ಸಾವು
ಕಳೆದ ಸೆಪ್ಟಂಬರ್ 22 ರಂದು ಮಲ್ಲೇಶ್ವರಂನಲ್ಲಿ ಮೈದಾನದಲ್ಲಿ ಆಟವಾಡಲು ತೆಳಿದ್ದ ಬಾಲಕನ ಮೇಲೆ ಮೈದಾನದ ಗೇಟ್ ಬಿದ್ದು ಬಾಲಕ ಸಾವಿಗೀಡಾದ ಘಟನೆ ನಡೆದಿತ್ತು. ಇದಕ್ಕೆ ರಾಜ್ಯ ಸರ್ಕಾರ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಕಿಡಿ ಕಾರಿದರು.
ಮೃತ ಬಾಲಕನ ಮನೆಗೆ ಭೇಟಿ ನೀಡಿದ ಎಎಪಿ ರಾಜ್ಯಾಧ್ಯಕ್ಷರು ಮತ್ತು ಕಾರ್ಯಾಕರ್ತರು ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಡಾ. ಮುಖ್ಯಮಂತ್ರಿ ಚಂದ್ರು ಅವರು, ಒಂದೇ ಕಡೆ ಗೇಟ್ ಅಳವಡಿಕೆ ಮಾಡಲು ಮೂರು ಬಾರಿ ಟೆಂಡರ್ ಆಹ್ವಾನಿಸಲಾಗಿದೆ.
ಗೇಟ್ ಅಳವಡಿಕೆಗೆ ಕರೆದಿದ್ದ ಮೊದಲ ಟೆಂಡರ್ 50 ಲಕ್ಷ ರೂ., ಎರಡನೇ ಟೆಂಡರ್ 60 ಲಕ್ಷ ರೂ., ಮೂರನೇ ಟೆಂಡರ್ ಕೂಡ 60 ಲಕ್ಷ ರೂ. ಒಟ್ಟು 1.50 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿ ಗೇಟ್ ಅಳವಡಿಸಲಾಗಿದೆ. ಇಷ್ಟು ಹಣ ಖರ್ಚು ಮಾಡಿದರು, ಉತ್ತಮ ಗುಣಮಟ್ಟದ ಗೇಟ್ ಅಳವಡಿಸಿಲ್ಲ ಎಂಬುದು ಸಾಬೀತಾಗಿದೆ ಎಂದು ಸರ್ಕಾರದ ವಿರುದ್ಧ ಅವರು ದೂರಿದರು.
ಸಾರ್ವಜನಿಕರಿಗೆ ರಕ್ಷಣೆ ಆದ್ಯತೆ ಆಗಬೇಕು
ಇದ್ದ ಒಬ್ಬೆ ಒಬ್ಬ ಮಗನನ್ನು ಕಳೆದುಕೊಂಡು ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ನೀವು ಪರಿಹಾರ ಕೊಡಬಹುದೇ ವಿನಃ ತೀರಿಹೋದ ಮಗನನ್ನು ವಾಪಾಸ್ ಕೊಡಲು ಆಗುವುದಿಲ್ಲ. 1.5 ಕೋಟಿ ಜನಸಂಖ್ಯೆ ಇರುವ ಬೆಂಗಳೂರು ನಗರದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಸರ್ಕಾರ ಆದ್ಯತೆ ನೀಡಬೇಕು. ಮೈದಾನಗಳ ನಿರ್ವಹಣೆ, ಸಾರ್ವಜನಿಕರ ರಕ್ಷಣೆ, ಸೂಕ್ತ ಕ್ರಮಗಳತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಮನ ಕೊಡಬೇಕು ಎಂದು ಅವರು ಆಗ್ರಹಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications