Bengaluru Metro: ಬೆಂಗಳೂರು ಏರ್ಪೋರ್ಟ್ ಸಂಪರ್ಕಿಸುವ ನಮ್ಮ ಮೆಟ್ರೋ ನೀಲಿ ಮಾರ್ಗ; 30 ನಿಲ್ದಾಣಗಳು, ಯಾವಾಗ ಆರಂಭ?
ಬೆಂಗಳೂರು, ಡಿಸೆಂಬರ್ 06: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಿಶೀಲಿಸಿ, ಗುತ್ತಿಗೆದಾರರಿಗೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದರು.
ಕೊಡಿಗೆಹಳ್ಳಿಯಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಪರಿಶೀಲಿಸಿದ ಬಳಿಕ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಕೆ.ಆರ್ ಪುರದಿಂದ ಸಿಲ್ಕ್ ಬೋರ್ಡ್ ವರೆಗೆ ಮಾರ್ಗವನ್ನು 2026 ಡಿಸೆಂಬರ್ ಗೆ ಮುಗಿಸಲು ನಿರ್ಧರಿಸಿದ್ದೇವೆ. ಉಳಿದಂತೆ ಕೆ.ಆರ್ ಪುರದಿಂದ ಹೆಬ್ಬಾಳದವರೆಗಿನ ಮಾರ್ಗವನ್ನು 2027 ಡಿಸೆಂಬರ್ ವೇಳೆಗೆ ಹಾಗೂ ಹೆಬ್ಬಾಳದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2027 ಜೂನ್ ಗೆ ಪೂರ್ಣಗೊಳಿಸುತ್ತೇವೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.

ವಿಮಾನ ನಿಲ್ದಾಣಕ್ಕೆ ಸಂಪರ್ಕ ಸಾಧಿಸುತ್ತಿರುವ ಮೆಟ್ರೋ ಮಾರ್ಗದ ಕಾಮಗಾರಿಯನ್ನು ನಾವು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರನ್ನು ಕರೆಸಿ ಚರ್ಚಿಸಿದ್ದೇವೆ. ಗುತ್ತಿಗೆದಾರ ಸಂಸ್ಥೆಯು ಕೆಲವು ಸಬೂಬು ಹೇಳುತ್ತಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಲು ಸೂಚಿಸಿದ್ದೇನೆ. ಈ ಭಾಗದಲ್ಲಿ ಕೆಲವು ಸಮಸ್ಯೆಗಳಿದ್ದ ಕಾರಣ ನಾನು ಸ್ಥಳಕ್ಕೆ ಬಂದು ಭೇಟಿ ನೀಡಿದ್ದೇನೆ. ಇಲ್ಲಿ ಕೆಲಸ ಪೂರ್ಣವಾಗುವವರೆಗೂ ಇಲ್ಲಿರುವ ಪ್ರಮುಖ ಯಂತ್ರವನ್ನು ಬೆಂಗಳೂರಿನಿಂದಾಚೆಗೆ ಸ್ಥಳಾಂತರಿಸಲು ಅವಕಾಶ ನೀಡುವುದಿಲ್ಲ. ಇದರ ಉಸ್ತುವಾರಿಯನ್ನು ತುಷಾರ್ ಗಿರಿನಾಥ್ ಅವರಿಗೆ ನೀಡಲಾಗಿದೆ. ಇದು 58 ಕಿ.ಮೀ ಉದ್ಧದ ಈ ಯೋಜನೆ 15 ಸಾವಿರ ಕೋಟಿ ಮೊತ್ತದ ಯೋಜನೆಯಾಗಿದೆ. ಸಿಲ್ಕ್ ಬೋರ್ಡ್ ನಿಂದ ವಿಮಾನ ನಿಲ್ದಾಣದವೆರೆಗಿನ ಈ ಮಾರ್ಗದಲ್ಲಿ 30 ನಿಲ್ದಾಣಗಳು ಬರಲಿವೆ ಎಂದು ತಿಳಿಸಿದರು.
ಈ ಮಾರ್ಗದಲ್ಲಿ 5-10 ರೈಲ್ವೇ ನಿಲ್ದಾಣಗಳು ಪೂರ್ಣಗೊಳ್ಳುತ್ತಿದ್ದಂತೆ ಅಲ್ಲಿ ರೈಲು ಸಂಚಾರ ಆರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಈ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು, ಪರಿಹಾರ ಯಾವಾಗ ಎಂದು ಕೇಳಿದಾಗ, ಇಲ್ಲಿ ಕೇವಲ ರಾತ್ರಿ ವೇಳೆ ಮಾತ್ರ ಕೆಲಸ ಮಾಡಲಾಗುತ್ತಿದೆ. ಕಾಮಗಾರಿ ನಡೆಯುವ ವೇಳೆ ಒಂದು ಸಾವು ಉಂಟಾದ ನಂತರ ಸಂಚಾರ ದಟ್ಟಣೆ ನೋಡಿಕೊಂಡು ಕೆಲಸ ಮಾಡಲಾಗುತ್ತಿದೆ. ಇದು ವಾಸ್ತವದ ಪರಿಸ್ಥಿತಿ. ಟೀಕೆ ಮಾಡುವವರು, ಮಾತನಾಡುವವರು ಏನೇ ಹೇಳಿದರೂ ಕೆಲಸ ನಡೆಯಲೇಬೇಕು. ಎನ್ ಸಿಸಿ ಆಗಲಿ ಬೇರೆ ಗುತ್ತಿಗೆದಾರರೇ ಆಗಲಿ ನಿಗದಿತ ಸಮಯದ ಗಡುವಿನಲ್ಲಿ ಪೂರ್ಣಗೊಳಿಸದಿದ್ದರೆ ಮುಂದೆ ಯಾವುದೇ ಕಾಮಗಾರಿಯನ್ನು ಅವರಿಗೆ ನೀಡುವುದಿಲ್ಲ. ನಮಗೆ ಯೋಜನೆ ಜಾರಿ ಮುಖ್ಯ. ಉಳಿದ ಇಬ್ಬರು ಗುತ್ತಿಗೆದಾರರ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಎನ್ ಸಿಸಿ ಬಗ್ಗೆ ಕೆಲವು ದೂರುಗಳಿವೆ. ಇಲ್ಲಿ ಅಪಘಾತ ಸಂಭವಿಸಿದ ನಂತರ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.
ನಾನು ಬೆಳಗ್ಗೆಯಿಂದ ವಿವಿಧ ಕಾಮಗಾರಿಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ದೇನೆ. ಮುಂದಿನ ಹದಿನೈದು ದಿನಗಳ ಕಾಲ ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಗೆ ತೆರಳಬೇಕಿದ್ದು, ಅದಕ್ಕೂ ಮುನ್ನ ಬಿಎಂಆರ್ ಡಿಎ, ಬಿಡಿಎ, ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗಳಲ್ಲಿ ಏನೆಲ್ಲಾ ಆಗಬೇಕಿದೆ ಎಂದು ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಬೆಂಗಳೂರು ಬಿಸಿನೆಸ್ ಕಾರಿಡಾರ್ ವಿಚಾರದಲ್ಲಿ ಸರ್ಕಾರದ ಪರಿಹಾರಕ್ಕೆ ಒಪ್ಪಿ ಭೂಮಿ ನೀಡುವ ರೈತರಿಗೆ ತೀರ್ಮಾನ ಮಾಡಲಾಗಿರುವ ಪರಿಹಾರವನ್ನು ನೀಡುತ್ತೇವೆ. ಯಾರು ಒಪ್ಪುವುದಿಲ್ಲವೋ ಅವರಿಗೆ ನ್ಯಾಯಾಲಯದಲ್ಲಿ ಹಳೆಯ ದರದಲ್ಲಿ ಡೆಪಾಸಿಟ್ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಟಿಡಿಆರ್, ಎಫ್ಎಆರ್ ಸೇರಿದಂತೆ ನಾನು ಭೂ ಸಂತ್ರಸ್ತ ರೈತರಿಗೆ ಐದು ಆಯ್ಕೆಗಳ ಪರಿಹಾರವನ್ನು ನೀಡಿದ್ದೇನೆ. ಇಡೀ ದೇಶದಲ್ಲಿ ಯಾರೂ ಇಷ್ಟು ಅವಕಾಶ ನೀಡಿರಲಿಲ್ಲ. ಯಾರು ಏನೇ ಹೇಳಿದರೂ ನಾನಂತೂ ಡಿನೋಟಿಫಿಕೇಶನ್ ಮಾಡುವುದಿಲ್ಲ. ನನಗೆ ಬೆದರಿಸಲು ಕೋರ್ಟ್ ಮೆಟ್ಟಿಲೇರಿದರೆ ಹೋಗಲಿ, ಈಗಾಗಲೇ ನ್ಯಾಯಾಲಯದಲ್ಲಿ ಇಂತಹ ಪ್ರಕರಣಗಳು ವಿಫಲವಾಗಿವೆ. ನಾವು ರಸ್ತೆ ಮಾಡಲೇ ಬೇಕು. ರಸ್ತೆ ಬದಿಯಲ್ಲೇ 35% ವಾಣಿಜ್ಯ ಭೂಮಿಯನ್ನು ಪರಿಹಾರವಾಗಿ ನೀಡಲಾಗುವುದು ಎಂದು ಹೇಳಿದ್ದೇನೆ. ಇಡೀ ದೇಶದಲ್ಲಿ ಯಾರೂ ವಾಣಿಜ್ಯ ಭೂಮಿಯನ್ನು ಪರಿಹಾರವಾಗಿ ನೀಡುವುದಿಲ್ಲ. ಈ ಅವಕಾಶವನ್ನು ರೈತರು ಉಪಯೋಗಿಸಿಕೊಳ್ಳಬೇಕು. ಇದರಿಂದ ಅವರಿಗೆ ಒಳ್ಳೆಯದಾಗುತ್ತದೆ. ಇಲ್ಲದಿದ್ದರೆ ಅದು ಅವರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.
ಸ್ವಾಮೀಜಿಗಳ ನಿಯೋಗ ಭೇಟಿ ಬಗ್ಗೆ ಕೇಳಿದಾಗ, "ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಅವರು ಬೆಂಗಳೂರಿಗೆ ಬಂದಾಗ ಉಳಿದುಕೊಳ್ಳಲು ಜಾಗ ಇಲ್ಲ. ನಮಗೆ ಏನಾದರೂ ಮಾಡಿ ಜಾಗ ಕೊಡಿ ಎಂದು ಕೇಳಿದ್ದಾರೆ. ಸಿಎ ನಿವೇಶನ ಪರಿಶೀಲಿಸಿ ಅವರಿಗೆ ಜಾಗ ಕಲ್ಪಿಸುವ ಕೆಲಸ ಮಾಡುತ್ತೇನೆ. ಅವರ ಬೇಡಿಕೆ ನ್ಯಾಯಬದ್ಧವಾಗಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಬೇಡಿಕೆ ಪರಿಗಣಿಸಲಾಗಿದೆ ಎಂದು ತಿಳಿಸಿದರು.
ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ನಾನು ಅವರ ಪ್ರೀತಿ ಬಗ್ಗೆ ಏನು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಅವರ ಆಸೆ ಅವರು ವ್ಯಕ್ತಪಡಿಸಬಹುದು. ಆದರೆ ಏನೇ ತೀರ್ಮಾನ ಇದ್ದರೂ ಪಕ್ಷ ಕೈಗೊಳ್ಳುತ್ತದೆ ಎಂದು ನಾನು ಹಾಗೂ ಸಿಎಂ ಇಬ್ಬರೂ ಹೇಳಿದ್ದು, ನಾವು ಅದಕ್ಕೆ ಬದ್ಧವಾಗಿದ್ದೇವೆ ಎಂದು ತಿಳಿಸಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications